ಪ್ರೀಯ ರೈತರೇ ಇವತ್ತು ರೈತರಿಗೆ ಗುಡ್ ನ್ಯೂಸ್ ಸಿಕ್ಕಿದೆ. ಡಿ. ದೇವರಾಜ ಅರಸು ಸ್ವಯಂ ಉದ್ಯೋಗ ವೈಯಕ್ತಿಕ ಸಾಲ, ಗಂಗಾ ಕಲ್ಯಾಣ ಯೋಜನೆ, ಉಚಿತ ಹೋಲಿಗೆ ಯಂತ್ರ, ಅರಿವು ಶೈಕ್ಷಣಿಕ ಸಾಲ ಹೀಗೆ ಹಲವಾರು ಯೋಜನೆಗಳಿಗೆ ಸೇವಾ ಸಿಂಧು ತಂತ್ರಾಂಶದ ಮುಖಾಂತರ Online ಅರ್ಜಿ ಸ್ವೀಕೃತಿ ಯೋಜನೆಯ ಮೂಲಕ ರೈತರಿಂದ ಅರ್ಜಿ ಆಹ್ವಾನ ಕರೆದಿದ್ದಾರೆ. ಕೂಡಲೇ ರೈತರು ಅರ್ಜಿ ಸಲ್ಲಿಸಿ ಯೋಜನೆ ಸದುಪಯೋಗ ಪಡೆದುಕೊಳ್ಳಬೇಕು.
ನೀವು ಕೂಡ ಉಚಿತ ಹೊಲಿಗೆ ಯಂತ್ರ ಯೋಜನೆಗೆ ಅರ್ಜಿ ಸಲ್ಲಿಸಬೇಕೆ..? ಉಚಿತ ಹೊಲಿಗೆ ಯಂತ್ರ ಯೋಜನೆಗೆ (Free Sewing Machine Scheme 2025) ಸಲ್ಲಿಸಲು ಅರ್ಹತೆಗಳೇನು..? ಯಾರು ಅರ್ಜಿ ಸಲ್ಲಿಸಬಹುದು..? ಅರ್ಜಿ ಸಲ್ಲಿಸಲು ಯಾವೇಲ್ಲಾ ದಾಖಲೆಗಳು ಬೇಕಾಗುತ್ತವೆ ಎಂಬ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಿದ್ದೇವೆ ಓದಿರಿ.
ಗ್ರಾಮೀಣ ಪ್ರದೇಶದಲ್ಲಿರುವ ಮಹಿಳೆಯರಿಗೆ ಉಚಿತ ವಿದ್ಯುತ್ ಚಾಲಿತ ಹೊಲಿಗೆ ಯಂತ್ರಗಳು (Free Sewing Machine Scheme) ಗ್ರಾಮೀಣ ಪ್ರದೇಶದ ಕುಶಲಕರ್ಮಿಗಳಿಗೆ ಉಚಿತ ಸುಧಾರಿತ ಉಪಕರಣಗಳನ್ನು ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ * ಫಲಾನುಭವಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ. ಈ ಯೋಜನೆಯ ಲಾಭಪಡೆದುಕೊಳ್ಳಬಹುದು.
* ಅಭ್ಯರ್ಥಿಯು ಗ್ರಾಮೀಣ ಪ್ರದೇಶದವರಾಗಿರಬೇಕು
* ಒಂದು ಕುಟುಂಬಕ್ಕೆ ಒಂದು ಅರ್ಜಿ ಸಲ್ಲಿಸಲು ಮಾತ್ರ ಅವಕಾಶ ಹೊಲಿಗೆ ಯಂತ್ರ ಯೋಜನೆಗೆ ಮಹಿಳಾ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬಹುದು.
* ಸರಕಾರದ ಯಾವುದೇ ಯಂತ್ರವನ್ನು ಪಡೆದಿರುವ ಫಲಾನುಭವಿಗಳು ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ.
* ಸರ್ಕಾರಿ ನೌಕರರು ಅಥವಾ ಅವರ ಅವಲಂಬಿತರು ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ.
* ಆನ್ಲೈನ್ ವೆಬ್ಸೈಟ್ ಮುಖಾಂತರ ಅವಶ್ಯ ಮಾಹಿತಿ ಭರ್ತಿ ಮಾಡಿ ಮತ್ತು ಸಂಬಂಧಿಸಿದ ದಾಖಲೆಗಳ ಸ್ವಯಂ ದೃಢೀಕೃತ ಪ್ರತಿಗಳು ಅಪ್ಲೋಡ್ ಮಾಡುವ ಮೂಲಕ ನಿಗದಿತ ದಿನಾಂಕದೊಳಗಾಗಿ ಅರ್ಜಿ ಸಲ್ಲಿಸುವುದು.
ಯೋಜನೆ ಪಡೆಯಲು ಅರ್ಹತೆಗಳು :
* 10ನೇ ತರಗತಿ/ದ್ವಿತೀಯ ಪಿ.ಯು.ಸಿ./ಡಿಪ್ಲೋಮ/ಪದವಿ/ಇಂಜಿನಿಯರಿಂಗ್ ವ್ಯಾಸಂಗವನ್ನು ಪೂರ್ಣಗೊಳಿಸಿರಬೇಕು.
* ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಸವಿತಾ ಮತ್ತು ಅದರ ಉಪಜಾತಿಗಳಿಗೆ ಸೇರಿದ ಸೇರಿದವರಾಗಿರಬೇಕು.
* ಅರ್ಜಿದಾರರ ವಯಸ್ಸು 18 ರಿಂದ 25 ವರ್ಷಗಳ ಒಳಗಿರಬೇಕು.
* ಪ್ರವರ್ಗ-1ಕ್ಕೆ ಸೇರಿದ ಅಭ್ಯರ್ಥಿಗಳಿಗೆ ಕುಟುಂಬದ ವಾರ್ಷಿಕ ವರಮಾನ/ಆದಾಯ ಮಿತಿ ಇರುವುದಿಲ್ಲ.
* ಹಿಂದುಳಿದ ವರ್ಗಗಳ ಸವಿತಾ ಮತ್ತು ಅದರ ಉಪಜಾತಿಗಳಿಗೆ ಸೇರಿದ ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನ/ಆದಾಯ ರೂ.8.00 ಲಕ್ಷಗಳಿಗಿಂತ ಕಡಿಮೆ ಇರಬೇಕು.
ಅರ್ಜಿ ಸಲ್ಲಿಕೆ ಎಲ್ಲಿ?
ಅರ್ಜಿದಾರರು https://www.kaushalkar.com/ಜಾಲತಾಣದಲ್ಲಿ ಅರ್ಜಿಯನ್ನು ಸಲ್ಲಿಸಬಹುದು ಈ ಮೇಲ್ಕಂಡ ಎಲ್ಲಾ ಯೋಜನೆಗಳಡಿಯಲ್ಲಿ ಸೌಲಭ್ಯ ಒದಗಿಸಲು ಸೇವಾ ಸಿಂಧು ತಂತ್ರಾಂಶದಲ್ಲಿ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸುವಾಗ ಅರ್ಜಿದಾರರು ಮಾಡಬೇಕಾದ ಕೆಲಸ –
* ಅರ್ಜಿ ಸಲ್ಲಿಸುವಾಗ ಅರ್ಜಿದಾರರು ಆಧಾರ್ ಜೋಡಣೆಯಾದ ಚಾಲ್ತಿಯಲ್ಲಿರುವ ಬ್ಯಾಂಕ್ ಖಾತೆ ಹೊಂದಿರಬೇಕು.
* ಆಧಾರ್ ಕಾರ್ಡ್ ನಲ್ಲಿರುವಂತೆ ಅರ್ಜಿದಾರರ ಹೆಸರು, (ಶ್ರೀ/ಶ್ರೀಮತಿ/ಕುಮಾರಿ ಮುಂತಾದ ಮಾಹಿತಿಗಳೆಲ್ಲವು) ಇತರೆ ದಾಖಲಾತಿಗಳಾದ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಬ್ಯಾಂಕ್ ಪಾಸ್ ಪುಸ್ತಕದಲ್ಲಿಯೂ ಇದ್ದು ಹೊಂದಾಣಿಕೆಯಾಗಬೇಕು.
* ಒಂದು ಬಾರಿ ನಿಗಮದ ಯಾವುದಾದರೂ ಯೋಜನೆಯಲ್ಲಿ ಪ್ರಯೋಜನ ಪಡೆದಿದ್ದಲ್ಲಿ ಅಂತಹವರು ಹಾಗೂ ಅವರ ಕುಟುಂಬದವರು ಮತ್ತೊಮ್ಮೆ ಸೌಲಭ್ಯ ಕೋರಿ ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ.
* 2023-24 ಮತ್ತು 2024-25ನೇ ಸಾಲಿನಲ್ಲಿ ಅರ್ಜಿಸಲ್ಲಿಸಿ ಸೌಲಭ್ಯ ಪಡೆಯದೇ ಇರುವ ಫಲಾಪೇಕ್ಷಿಗಳು ಮತ್ತೊಮ್ಮೆ ಅರ್ಜಿ ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ.
* ಮೇಲ್ಕಂಡ ಸೌಲಭ್ಯಗಳನ್ನು ಪಡೆಯಲು ಇಚ್ಚಿಸುವ ಹಿಂದುಳಿದ ವರ್ಗಗಳ ಸವಿತಾ ಮತ್ತು ಅದರ ಉಪಜಾತಿಗಳಿಗೆ ಸೇರಿದ ಅರ್ಜಿದಾರರು ಅರ್ಜಿಗಳನ್ನು ಸೇವಾಸಿಂಧು ಪೋರ್ಟಲ್ http://sevasindhu.karnataka.gov.in ಮುಖಾಂತರ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿರುತ್ತದೆ.
ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ.👇
ನಿಗಮದ ವೆಬ್ ಸೈಟ್ http://www.kssd.karnataka.gov.in ಇಲ್ಲಿ ಸಂಪರ್ಕಿಸಿ ಹೆಚ್ಚಿನ ಮಾಹಿತಿ ಪಡೆಯಬಹುದಾಗಿರುತ್ತದೆ ಅಥವಾ ನಿಗಮದ ಸಹಾಯವಾಣಿ ಸಂಖ್ಯೆ: 👉 080-22374832 ಮತ್ತು 3050770004 ಅಥವಾ 8050770005 ಆಯಾ ಜಿಲ್ಲಾ ಕಛೇರಿಯ ದೂರವಾಣಿ ಸಂಖ್ಯೆಗಳನ್ನು ವೆಬ್ಸೈಟ್ನಲ್ಲಿ ನೀಡಲಾಗಿದೆ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – 30/6/2025