ಮಿಶ್ರ ಬೆಳೆ ಬೆಳೆದು ಯಶಸ್ಸು ಕಂಡ ಪ್ರಗತಿಪರ ರೈತ

ಒಕ್ಕಲಿಗ ಒಕ್ಕದಿದ್ದರೆ ಬಿಕ್ಕುವುದು ಜಗವೆಲ್ಲ ಎನ್ನುವಂತೆ ನೇಗಿಲ ನಂಬಿ ನಡೆದರೆ ನೌಕರಿಗಿಂತಲೂ ಹೆಚ್ಚು ಆದಾಯ ಗಳಿಸಲು ಸಾಧ್ಯವಿದ್ದು, ಮಿಶ್ರ ಬೆಳೆಯಲ್ಲಿ ನೆಮ್ಮದಿ ಕಾಣಬಹುದಾಗಿದೆ ಎಂಬುದಕ್ಕೆ ತಾಲೂಕಿನ ಕೊರವಿಕೊಪ್ಪ ಗ್ರಾಮದ ಸಾಮಾನ್ಯ ರೈತ ಸುರೇಶ ಮಲ್ಲಪ್ಪ ಹೊಳೆ ಸಾಕ್ಷಿಯಾಗಿದ್ದಾರೆ. ಮಲಪ್ರಭೆಯ ಮಡಿಲಲ್ಲಿನ ತಮ್ಮ ಒಂದೂವರೆ ಎಕರೆ ಜಮೀನಿನಲ್ಲಿ ತರಹೇವಾರಿ ಮಿಶ್ರ ಬೆಳೆಗಳನ್ನು ಬೆಳೆದು ಈ ಕ್ಷೇತ್ರದ ರೈತರಿಗೆ ಮಾದರಿಯಾಗಿದ್ದಾರೆ. ಮೂಲತಃ ಕೃಷಿ ಕುಟುಂಬದಿಂದ ಬಂದ ಇವರು ಕೃಷಿಯಲ್ಲಿಯೇ ಸಂತೋಷ ಕಂಡು ಅಭಿವೃದ್ಧಿ ಪಥದತ್ತ ಸಾಗಿದ್ದಾರೆ. ಪಿಯುಸಿ ನಂತರ ಓದಿಗೆ…

Spread positive news
Read More