ನೀರಾವರಿ ಯೋಜನೆ ಸಬ್ಸಿಡಿಗಾಗಿ ರೈತರಿಂದ ಅರ್ಜಿ ಆಹ್ವಾನ

2023-24 ನೇ ಸಾಲಿಗಾಗಿ ತೋಟಗಾರಿಕೆ ಇಲಾಖೆಯಿಂದ ಹನಿ ನೀರಾವರಿ ಅಳವಡಿಸಿಕೊಳ್ಳಲು ಆಸಕ್ತ ತೋಟಗಾರಿಕೆ ಬೆಳೆ ಬೆಳೆಯುವ ರೈತರಿಂದ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಅರ್ಜಿ ಅಹ್ವಾನಿಸಲಾಗಿದೆ.

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ರೈತರಿಗೆ ಗರಿಷ್ಟ 2 ಹೆಕ್ಟೇರ್ ವರೆಗೆ ಶೇ.90 ರಷ್ಟು ಸಹಾಯಧನ ನೀಡಲಾಗುವುದು.ಇತರೆ ರೈತರಿಗೆ 2 ಹೆಕ್ಟೇರ್ ವರೆಗೆ ಶೇ.75 ರಷ್ಟು ಸಹಾಯಧನ ನೀಡಲಾಗುವುದು. ತರಕಾರಿ ಹಾಗೂ ವಾಣಿಜ್ಯ ಹೂ ಬೆಳೆಗಳಿಗೆ ಗರಿಷ್ಠ 2 ಹೆಕ್ಟೇರ್ ಪ್ರದೇಶಕ್ಕೆ ಮಾತ್ರ ಸಹಾಯಧನ ನೀಡಲಾಗುವುದು. ಎಲ್ಲಾ ವರ್ಗದ ರೈತರಿಗೆ ಭಾರತ ಸರ್ಕಾರದ ಮಾರ್ಗಸೂಚಿಯನ್ವಯ 2 ಹೆಕ್ಟೇರ್ ಮೇಲ್ಪಟ್ಟು 5 ಹೆಕ್ಟೇರ್ ವರೆಗೂ ಶೇ.45 ರಷ್ಟು ಸಹಾಯಧನ ನೀಡಲಾಗುವುದು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ವರ್ಗಕ್ಕೆ ಸೇರಿದ ರೈತರಾಗಿದ್ದಲ್ಲಿ ಕಂದಾಯ ಇಲಾಖೆಯಿಂದ ಜಾತಿ ಪ್ರಮಾಣ ಪತ್ರವನ್ನು ಸಲ್ಲಿಸುವುದು ಕಡ್ಡಾಯವಾಗಿದೆ.

ತೋಟಗಾರಿಕೆ ಬೆಳೆಗಳಿಗೆ ಹನಿ ನೀರಾವರಿ ಅಳವಡಿಸುವ ಮೊದಲು, ತಾಲೂಕಾ ತೋಟಗಾರಿಕೆ ಕಛೇರಿಯಲ್ಲಿ ಹೆಸರು ನೊಂದಾಯಿಸಿ ಕಾರ್ಯದೇಶ ಪಡೆಯಬೇಕು. ಕಾರ್ಯದೇಶ ಪಡೆಯದೇ ಅಳವಡಿಸಿಕೊಂಡಲ್ಲಿ ಸಹಾಯಧನಕ್ಕೆ ಪರಿಗಣಿಸಲಾಗುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ಆಯಾ ತಾಲ್ಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸುವಂತೆ ತೋಟಗಾರಿಕೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

2023-24 ಸಾಲಿನ ಕೇಂದ್ರ ಪುರಸ್ಕ್ರತ ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆ (ಪಿಎಂಕೆಎಸ್ವೈ) ಯಡಿಯಲ್ಲಿ ಪ್ರತಿ ಹನಿಗೆ ಅಧಿಕ ಬೆಳೆ ಕಾರ್ಯಕ್ರಮದಡಿ ಎಲ್ಲಾ ತೋಟಗಾರಿಕೆ ಬೆಳೆಗಳಿಗೆ (ಕಾಫಿ, ಟೀ, ರಬ್ಬರ್ ಹೊರತು ಪಡಿಸಿ) ಹನಿ ನೀರಾವರಿ ಅಳವಡಿಕೆಗಾಗಿ ಗರಿಷ್ಠ 5 ಹೆಕ್ಟೇರ್ ಪ್ರದೇಶದವರೆಗೆ ಸಹಾಯಧನವನ್ನು ನೀಡಲಾಗುವುದು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ರೈತರಿಗೆ 2 ಹೆ. ಪ್ರದೇಶದವರೆಗೆ ಶೇ.90ರ ಸಹಾಯಧನ ಮತ್ತು ಇತರೆ ರೈತರಿಗೆ ಶೆ. 75ರ ಸಹಾಯಧನವನ್ನು ನೀಡಲಾಗುವುದು. ಹಾಗೂ 2 ಹೆ. ರಿಂದ 5ಹೆ. ಪ್ರದೇಶದವರೆಗೆ ಶೇ. 45ರ ಸಹಾಯಧನವನ್ನು ನೀಡಲಾಗುವುದು.

ಕೇಂದ್ರ ಪುರಸ್ಕೃತ ರಾಷ್ಟ್ರೀಯ ಖಾದ್ಯ ತೈಲ ಅಭಿಯಾನದಲ್ಲಿ ತಾಳೆ ಬೆಳೆಯನ್ನು ಇಲಾಖಾ ಪಾಲುದಾರಿಕೆ ಕಂಪನಿಯಾದ ರುಚಿ ಸೋಯಾ ಇಂಡ್ಸ್ಸ್ಟ್ರೀಸ್ಸ್ ರವರೊಂದಿಗೆ ಪಿಪಿಪಿ ಮಾದರಿಯಲ್ಲಿ ಅನುಷ್ಟಾನ ಗೊಳಿಸಲಾಗುತ್ತಿದ್ದು ತಾಳೆ ಹೊಸ ಪ್ರದೇಶ ವಿಸ್ತರಣೆಗೆ ರೂ.20 ಸಾವಿರ ಸಹಾಯಧನ ಹಾಗೂ ಮೊದಲ ನಾಲ್ಕು ವರ್ಷದ ಪಾಲನೆಗಾಗಿ 5500 ರಂತೆ ಪ್ರತಿ ಹೇಕ್ಟರ್ಗೆr ನೀಡಲಾಗುವುದು. ಇದರ ಜೊತೆಗೆ ತಾಳೆಯಲ್ಲಿ ಡಿಸೇಲ್ ಪಂಪ್ ಸೆಟ್ ಖರೀದಿಗೆ, ಕಟಾವು ಯಂತ್ರ ಖರೀದಿಗೆ ಹಾಗೂ ಅಂತರ ಬೇಸಾಯ ಕೈಗೊಂಡಿದ್ದಲ್ಲಿ ಹೆಕ್ಟೇರ್ಗೆ ರೂ.5 ಸಾವಿರ ಸಹಾಯಧನವನ್ನು ನೀಡಲಾಗುವುದು.

ಕೃಷಿಭೂಮಿ ಇದ್ದರೆ 36000 ರೂಪಾಯಿ ಪಿಂಚಣಿ : ಈ ಯೋಜನೆಗೆ ಇಂದೇ ಅರ್ಜಿ ಸಲ್ಲಿಸಿ

ರಾಷ್ಟ್ರೀಯ ತೋಟಗಾರಿಕೆ ಮಿಷನ್ ಉಪಯೋಜನೆಯಡಿಯಲ್ಲಿ ಪ್ರದೇಶ ವಿಸ್ತರಣೆ, ಕಿತ್ತಳೆ ಮತ್ತು ಕಾಳು ಮೆಣಸು ಪುನಶ್ಚೇತನ ಕಾರ್ಯಕ್ರಮ, ಸಮಗ್ರ ಕೀಟ ಮತ್ತು ರೋಗ ನಿರ್ವಹಣೆ ಹಾಗೂ ಪ್ರಾಥಮಿಕ ಸಂಸ್ಕರಣ ಘಟಕ ನಿರ್ಮಾಣಕ್ಕೆ ಸಹಾಯಧನ ನೀಡಲಾಗುವುದು. ಎಸ್‌ಎಂಎಎಂ ಯಾಂತ್ರೀಕರಣ ಯೋಜನೆಯಡಿ ಇಲಾಖಾ ಮಾರ್ಗಸೂಚಿಯಂತೆ ಅನುಮೋದಿತ ಸಂಸ್ಥೆಯಿಂದ ಖರೀದಿಸಿದ ಮರ ಕತ್ತರಿಸುವ ಯಂತ್ರ, ಪವರ್ ಸ್ಟೇಯರ್, ಕಳೆಕೊಚ್ಚುವ ಯಂತ್ರ, ಏಣಿ, ತಳ್ಳುವ ಗಾಡಿ ಮುಂತಾದ ಯಂತ್ರೋಪಕರಣಗಳಿಗೆ ಶೇ.40/50 ರ ಸಹಾಯಧನ ನೀಡಲಾಗುವುದು.

ಪಿಎಂ ಕಿಸಾನ್ 15ನೇ ಕಂತು ಪಡೆಯಲು ಹೊಸ ಅಪ್ಡೇಟ್

ಇಚ್ಚಿಸುವ ರೈತರು ನಿಗಧಿತ ಅರ್ಜಿ ನಮೂನೆ, ಆರ್ಟಿಸಿ, ಆಧಾರ್ ಕಾರ್ಡ್ ಹಾಗೂ ಇತ್ಯಾದಿ ದಾಖಲಾತಿಗಳೊಂದಿಗೆ ಸಮೀಪದ ತಾಲ್ಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಕಚೇರಿಯಲ್ಲಿ ಸೆಪ್ಟೆಂಬರ್, 05 ರೊಳಗೆ ಹೆಸರು ನೋಂದಾಯಿಸಿಕೊಳ್ಳಲು ಕೋರಿದೆ ಹಾಗೂ ಸಹಾಯಧನವನ್ನು ನಿಗಧಿಪಡಿಸಿದ ಗುರಿಗೆ ಅನುಗುಣವಾಗಿ ಜೇಷ್ಠತಾ ಪಟ್ಟಿ ಆಧಾರದ ಮೇಲೆ ನೀಡಲಾಗುವುದು ಹಾಗೂ ಸರ್ಕಾರದ ನಿಯಮಾನುಸಾರ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ಅಲ್ಪಸಂಖ್ಯಾತರು, ಮಹಿಳೆಯರು, ಅಂಗವಿಕಲರಿಗೆ ಆದ್ಯತೆಯನ್ನು ನೀಡಲಾಗುವುದು ಎಂದು ತೋಟಗಾರಿಕೆ ಉಪ ನಿರ್ದೇಶಕರು ತಿಳಿಸಿದ್ದಾರೆ.

ಸೆಪ್ಟೆಂಬರ್‌ 3ರಿಂದ ರಾಜ್ಯದ ಈ ಭಾಗಗಳಲ್ಲಿ ಭಾರಿ ಮಳೆ

ಗೃಹಲಕ್ಷ್ಮಿ ಹಣ ಇನ್ನೂ ಬಂದಿಲ್ವಾ.? ತಕ್ಷಣ ಈ ಕೆಲಸ ಮಾಡಿ.!

Spread positive news

One thought on “ನೀರಾವರಿ ಯೋಜನೆ ಸಬ್ಸಿಡಿಗಾಗಿ ರೈತರಿಂದ ಅರ್ಜಿ ಆಹ್ವಾನ

Leave a Reply

Your email address will not be published. Required fields are marked *