ರೇಷ್ಮೆ ಇಲಾಖೆ ವತಿಯಿಂದ ಸಿಗುವ ಯೋಜನೆಗಳು ಮಾಹಿತಿ.

ರೈತರೇ ಸರ್ಕಾರವು ರೈತರಿಗೆ ಕೃಷಿ ಕಾರ್ಮಿಕರಿಗೆ ಹೆಚ್ಚಿನ ಆದಾಯ ಪಡೆಯಲು ಹಾಗೂ ರೈತರ ಹಿತದೃಷ್ಟಿಯಿಂದ ಕಾಪಾಡಲು ರೈತರಿಗಾಗಿ ರೇಷ್ಮೆ ಇಲಾಖೆಯಿಂದ 2023-24ನೇ ಸಾಲಿನಲ್ಲಿ ವಿವಿಧ ಕಾರ್ಯಕ್ರಮ ಅನುಷ್ಠಾನಗೊಳಿಸಲಾಗುತ್ತಿದೆ. ಈ ಕಾರ್ಯಕ್ರಮಗಳ ಸದುಪಯೋಗ ಪಡೆದುಕೊಳ್ಳಬೇಕು ಎಂದು ರೈತರಿಗೆ ಕೊಪ್ಪಳ ರೇಷ್ಮೆ ಉಪ ನಿದೇರ್ಶಕರು ಮನವಿ ಮಾಡಿದ್ದಾರೆ. ರೇಷ್ಮೆ ಕೃಷಿಯು ಗುಡಿ ಮತ್ತು ಕೈಗಾರಿಕೆಯನ್ನು ಹೊಂದಿದ್ದು, ಗ್ರಾಮೀಣ ಜನರ ಆರ್ಥಿಕ ಸ್ಥಿತಿ ಸುಧಾರಿಸುವಲ್ಲಿ ಪ್ರಮುಖ ಪಾತ್ರವಹಿಸಿದೆ. ಕೊಪ್ಪಳ ಜಿಲ್ಲೆಯಲ್ಲಿ ರೇಷ್ಮೆ ಕೃಷಿಯು ಅಭಿವೃದ್ಧಿ ಪ್ರಗತಿಯ ಪಥದಲ್ಲಿ ಸಾಗುತ್ತಿದೆ ಎಂದು ಹೇಳಿದ್ದಾರೆ.

ರೇಷ್ಮೆ ಇಲಾಖೆ ಧಾರವಾಡ ರೇಷ್ಮೆ ಕೃಷಿ ಕೇಂದ್ರಗಳಿಗೆ ಜಿಲ್ಲಾ ಪಂಚಾಯಿತಿ ಸಿಇಒ ಭೇಟಿ ರೇಷ್ಮೆ ಇಲಾಖೆಯ ಸಿಬ್ಬಂದಿಯವರು ಪ್ರತಿಯೊಂದು ಹಳ್ಳಿಗೆ ಭೇಟಿ ನೀಡಿ ನೀರಾವರಿ ರೈತರನ್ನು ಸಂಪರ್ಕಿಸಿ ರೇಷ್ಮೆ ಕೃಷಿಯಿಂದಾಗುವ ಅನುಕೂಲಗಳ ಕುರಿತು ಹಾಗೂ ಸಿಗುವ ಸೌಲಭ್ಯಗಳ ಕುರಿತು ಮನವರಿಕೆ ಮಾಡಿ ರೇಷ್ಮೆ ಕೃಷಿಯ ವಿಸ್ತರಣೆಗೆ ಪ್ರಯತ್ನಿಸುತ್ತಿದ್ದಾರೆ ಎಂದು ಅವರು ತಿಳಿಸಿದ್ದಾರೆ. ಹಾಗೂ ನಮಗೆ ರೈತರ ಹಿತಾಸಕ್ತಿ ಮುಖ್ಯವಾಗಿದೆ ಹಾಗೂ ರೈತರ ಏಳಿಗೆಗೆ ಶ್ರಮಿಸಬೇಕಿದೆ ಎಂದು ಹೇಳಿದರು.

ರೇಷ್ಮೆ ಇಲಾಖೆ ಕಾರ್ಯಕ್ರಮಗಳು ಜಿಲ್ಲಾ ಪಂಚಾಯತ್ ಕಾರ್ಯಕ್ರಮ. ಹಿಪ್ಪುನೇರಳೆ ನಾಟಿ ಮಾಡುವ ರೇಷ್ಮೆ ಕೃಷಿಕರಿಗೆ ಸಹಾಯಧನ ನೀಡುವ ಕಾರ್ಯಕ್ರಮದಡಿ ಯಶಸ್ವಿ ಗೂಡು ಉತ್ಪಾದನೆಗೆ ಹಿಪ್ಪುನೇರಳೆ ಗುಣಮಟ್ಟ ಮುಖ್ಯವಾದ ಅಂಶ. ಈ ನಿಟ್ಟಿನಲ್ಲಿ ಹಿಪ್ಪುನೇರಳೆ ತೋಟ ನಿರ್ವಹಣೆಗೆ ಹೆಚ್ಚಿನ ಪ್ರಾಮುಖ್ಯತೆ ನೀಡಲಾಗಿದೆ. ಹಾಗೂ ಇನ್ನೂ ಮುಂದೆ ಪ್ರತಿ ವರ್ಷ ರೇಷ್ಮೆ ಕೃಷಿ ಮೇಳ ಮಾಡಲು ಚಿಂತನೆ ನಡೆಸಿದೆ. ಹಾಗೂ ರೇಷ್ಮೆ ಕೃಷಿಯಿಂದ ರೈತರಿಗೆ ನಿಶ್ಚಿತ ಆದಾಯ ನೀರಾವರಿ ಸೌಲಭ್ಯವಿರುವ ರೈತರನ್ನು, ಕೃಷಿಕರನ್ನು ಆಯ್ಕೆ ಮಾಡಿ ಹಿಪ್ಪುನೇರಳೆ ನಾಟಿ ಮಾಡುವ ತೋಟ ವಿಸ್ತರಿಸುವ, ಸಾಂಪ್ರದಾಯಕ ಹಿಪ್ಪುನೇರಳೆ ತಳಿ ತೆಗೆದು ಹೆಚ್ಚಿನ ಇಳುವರಿ ನೀಡುವ ಹೊಸ ತಳಿಗೆ ಬದಲಾಯಿಸುವ ರೇಷ್ಮೆ ಕೃಷಿಕರಿಗೆ ಸಹಾಯಧನ ಒದಗಿಸಲಾಗುವುದು.

ಅದೇ ರೀತಿ ರೈತರು ಸಹ ಇದರ ಸಂಪೂರ್ಣ ಸದುಪಯೋಗ ಪಡೆದುಕೊಳ್ಳಬೇಕು. ಹಾಗೂ ಒಬ್ಬ ಫಲಾನುಭವಿಗೆ ಗರಿಷ್ಠ 2 ಹೆಕ್ಟೇರವರೆಗೆ ಸೌಲಭ್ಯ ಪಡೆಯಲು ಅವಕಾಶವಿರುತ್ತದೆ. ಈ ಕಾರ್ಯಕ್ರಮದಡಿಯಲ್ಲಿ 1 ಎಕರೆ ಹೊಸ ಹಿಪ್ಪುನೇರಳೆ ನಾಟಿಗಾಗಿ ಸಾಮಾನ್ಯ ವರ್ಗದ ರೇಷ್ಮೆ ಬೆಳೆಗಾರರಿಗೆ 37,500 ರೂ., ಪರಿಶಿಷ್ಟ ಜಾತಿ ಅಥವಾ ಪರಿಶಿಷ್ಟ ಪಂಗಡದ ರೇಷ್ಮೆ ಬೆಳೆಗಾರರಿಗೆ 45,000 ರೂ.ಗಳ ಪ್ರೋತ್ಸಾಹ ಧನವನ್ನು ನೀಡಲಾಗುತ್ತದೆ.

ರೇಷ್ಮೆ ಹುಳು ಸೋಂಕು ನಿವಾರಕ ಔಷಧ. ಹಾಲಿ ರೇಷ್ಮೆ ಬೆಳೆಗಾರರಿಗೆ ಜಿಲ್ಲಾ ಪಂಚಾಯತ್ ವತಿಯಿಂದ ಸೋಂಕು ನಿವಾರಕ, ಹಾಸಿಗೆ ಸೋಂಕು ನಿವಾರಕ ಹಾಗೂ ಸಸ್ಯ ಸಂವರ್ಧಕಗಳನ್ನು ಉಚಿತವಾಗಿ ನೀಡಲಾಗುವುದು.

 

* ಬೆಳೆದ ಹುಳುಗಳಿಗೆ ಬೇಕಾದ ಉಷ್ಣಾಂಶ ಮತ್ತು ತೇವಾಂಶ ಕೋಷ್ಠಕದಲ್ಲಿರುವಂತೆ ಒದಗಿಸಬೇಕು.

* ಪ್ರೌಢ ಹುಳುಗಳಿಗೆ ಸಮರ್ಪಕ, ನಿಗದಿತ ಪ್ರಮಾಣದಲ್ಲಿ ಸೊಪ್ಪು ನೀಡಬೇಕು. ಅತಿ ಹೆಚ್ಚಿನ ಸೊಪ್ಪು ನೀಡಬಾರದು.

* ದಟ್ಟವಾಗಿ ಹುಳು ಸಾಕಾಣಿಕೆ ಮಾಡಬಾರದು. ಇದರಿಂದ ರೋಗಗಳು ಬರುವ ಸಂಭವ ಹೆಚ್ಚು ಹುಳುಗಳನ್ನು ಅತಿ ವಿರಳವಾಗಿರುವುದರಿಂದ ಸೊಪ್ಪು ವ್ಯರ್ಥವಾಗುತ್ತದೆ.

* ಮುಂಜಾಗ್ರತಾ ಕ್ರಮವಾಗಿ ಮೂರು ಮತ್ತು ನಾಲ್ಕನೇ ಜ್ವರದಿಂದ ಎದ್ದ ನಂತರ, ಮೂರು/ನಾಲ್ಕನೇ ದಿನ ಸೊಪ್ಪು ಕೊಡುವ ಮುನ್ನ ಹಾಸಿಗೆ ಸೋಂಕು ನಿವಾರಕಗಳನ್ನು ಸಿಂಪಡಿಸಿ ಅರ್ಧ ಗಂಟೆ ಕಾಲ ಪೇಪರಿನಿಂದ ಮುಚ್ಚಿ ನಂತರ ಸೊಪ್ಪು ಕೊಡಬೇಕು.

* ಪ್ರೌಢ ಹುಳು ಸಾಕಾಣಿಕೆಯಲ್ಲಿ ಮೂರನೇ ಹಂತದಿಂದ ಶಿಫಾರಸ್ಸಿನಂತೆ ಊರು ಹುಳು ನಿಯಂತ್ರಣಕ್ಕೆ ಊದಿ ಪುಡಿಯನ್ನು ಉಪಯೋಗಿಸಬೇಕು.

* ಅವಶ್ಯಕತೆಯಿದ್ದಲ್ಲಿ ದಿನ ಬಿಟ್ಟು ದಿನ ಅಥವಾ ಪ್ರತಿದಿನ ಕಸ ತೆಗೆದ ನಂತರ ಸೋಂಕು ನಿವಾರಕಗಳನ್ನು ಉಪಯೋಗಿಸಬೇಕು.

* ಕೀಟನಾಶಕ/ಇತರ ವಿಷಯುಕ್ತ ರಸಾಯನಿಕಗಳನ್ನು ಸಿಂಪಡಿಸಿದ ಸೊಪ್ಪನ್ನು ಸುರಕ್ಷಿತ ಕಾಲಾವಧಿ ಮೊದಲು ಕೊಡಬಾರದು. ಸಂಶಯವಿದ್ದಲ್ಲಿ, ಸ್ವಲ್ಪ ಹುಳುಗಳಿಗೆ ನೀಡಿ ಪರೀಕ್ಷಿಸಿ, ಹಾನಿ ಇಲ್ಲದಿದ್ದಲ್ಲಿ ನೀಡಬೇಕು.

* ಬೀಡಿ, ಸಿಗರೇಟು ಹೊಗೆಯು ರೇಷ್ಮೆ ಹುಳುಗಳಿಗೆ ಹಾನಿಕಾರಕ. ಆದ್ದರಿಂದ ಸಾಕಾಣಿಕೆ ಮನೆಯಲ್ಲಿ ಸೇದಬಾರದು. ಉದ್ಯೋಗ ಖಾತ್ರಿ ಯೋಜನೆ. ರೇಷ್ಮೆ ಇಲಾಖೆಯಡಿಯಲ್ಲಿ ಹೊಸದಾಗಿ ಹಿಪ್ಪುನೇರಳೆ ನಾಟಿ, ಹಿಪ್ಪುನೇರಳೆ ನರ್ಸರಿ, ಹಿಪ್ಪುನೇರಳೆ ಮರಗಡ್ಡೆ ಕಾರ್ಯಕ್ರಮಗಳನ್ನು ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಆಸಕ್ತ ನೀರಾವರಿ ಹೊಂದಿರುವ ರೈತರು ಇದರ ಪ್ರಯೋಜನೆಯನ್ನು ಪಡೆದುಕೊಳ್ಳಬೇಕು ಎಂದು ಮನವಿ ಮಾಡಲಾಗಿದೆ.

ಅದೇ ರೀತಿ ಸರ್ಕಾರವು ಇನ್ನೂ ಮುಂದೆ ರೈತರಿಗೆ ಎಂದು ತಾಲೂಕು ಪಂಚಾಯತ್ ಕಾರ್ಯಕ್ರಮ ಏರ್ಪಡಿಸಲು ಚಿಂತನೆ ನಡೆಸಿದೆ. ಹಾಗೂ ತಾಲೂಕು ಪಂಚಾಯತ್ ಉತ್ಪಾದನೆ, ಉತ್ಪಾದಕತೆ ಆಧಾರಿತ ಕಾರ್ಯಕ್ರಮ ಯೋಜನೆಯಡಿಯಲ್ಲಿ ಮಾರ್ಗಸೂಚಿಗಳನ್ವಯ ರೈತರಿಗೆ ರೇಷ್ಮೆ ಕೃಷಿ ಕೈಗೊಳ್ಳಲು ರೇಷ್ಮೆ ಕೃಷಿ ವಿಚಾರ ಸಂಕಿರಣಗಳನ್ನು ಹಾಗೂ ವಸ್ತು ಪ್ರದರ್ಶನಗಳನ್ನು ಪ್ರಚಾರ ಸಾಹಿತ್ಯಕ್ಕಾಗಿ ಕಾರ್ಯಕ್ರಮಗಳನ್ನು ಏರ್ಪಡಿಸಲಾಗುತ್ತದೆ. ಅರ್ಹ ಫಲಾನುಭವಿಗಳು ರೇಷ್ಮೆ ಇಲಾಖೆಯ ಕಾರ್ಯಕ್ರಮಗಳ ಪ್ರಯೋಜನ ಪಡೆಯಬಹುದಾಗಿದೆ

Spread positive news

Leave a Reply

Your email address will not be published. Required fields are marked *