ಕೃಷಿ ಮಾಡುವ ಯುವಕರಿಗೆ ಸರ್ಕಾರದಿಂದ 20 ಲಕ್ಷದವರೆಗೆ ಸಹಾಯಧನ.

ಪ್ರೀಯ ರೈತರೇ ನಾವು ಇವತ್ತು ರೈತರಿಗೆ ಹಾಗೂ ಯುವಕರಿಗೆ ಸ್ವಯಂ ಉದ್ಯೋಗವನ್ನು ಹೇಗೆ ಮಾಡಬೇಕು ಎಂಬುದರ ಬಗ್ಗೆ ಮಾಹಿತಿ ನೀಡುತ್ತೇವೆ. 

ಕರ್ನಾಟಕ ಸರ್ಕಾರ ಕೃಷಿ ಕ್ಷೇತ್ರದಲ್ಲಿ ಉದ್ಯಮಶೀಲತೆಯನ್ನು ಹೆಚ್ಚಿಸಲು ಹಾಗೂ ಗ್ರಾಮೀಣ ಭಾಗದ ಯುವಕರಿಗೆ ಉದ್ಯೋಗ ಸೃಜಿಸುವ ನಿಟ್ಟಿನಲ್ಲಿ ‘ ಕೃಷಿ ನವೋದ್ಯಮ’ ಎಂಬ ಹೊಸ ಯೋಜನೆ ಜಾರಿಗೊಳಿಸುತ್ತಿದೆ ಕೃಷಿ ವಲಯಲ್ಲಿನ ನೂತನ ತಾಂತ್ರಿಕತೆಗಳು, ಅವಿಷ್ಕಾರ ಹಾಗೂ ನವೀನ ಪರಿಕಲ್ಪನೆಗಳ ಸೇವೆಗಳನ್ನು ಒಳಗೊಂಡ ವಾಣಿಜೀಕರಣವನ್ನು ಉತ್ತೇಜಿಸುವ ಗುರಿಯೊಂದಿಗೆ ನೂತನ ಯೋಜನೆ ಅನುಷ್ಠಾನಗೊಳ್ಳುತ್ತಿದೆ. ಈ ಯೋಜನೆಯಡಿ ಗರಿಷ್ಠ 20 ಲಕ್ಷ ರೂ. ವರೆಗೆ ಸಹಾಯಧನ ನೀಡಲಾಗುತ್ತದೆ ಕೃಷಿ ಪದವೀದರರು ವಿದ್ಯಾವಂತ ಯುವಕರು, ಆಸಕ್ತ ಪ್ರಗತಿ ಪರ ರೈತರು ಹೊಸದಾಗಿ ಕೃಷಿಯಲ್ಲಿ ನವೋದ್ಯಮ ಸ್ಥಾಪಿಸಲು ಮುಂದೆ ಬರುವವರಿಗೆ ಸ್ಟಾರ್ಟಪ್ ಯೋಜನೆಯ ವರದಿಯ ಶೇ 50 ರಷ್ಟು ಅಂದರೆ 5 ರಿಂದ 20 ಲಕ್ಷ ರೂ. ವರೆಗೆ ಸಬ್ಸಿಡಿ ಸಿಗಲಿದೆ.

ಈ ರೀತಿ ಕೇಂದ್ರ ಸರ್ಕಾರದ ಕಡೆಯಿಂದ ಆತ್ಮ ನಿರ್ಭರ್ ಭಾರತ ಮಾಡಲು ಯುವಕರಿಗೆ ಹಾಗೂ ರೈತರಿಗೆ ಸರ್ಕಾರವು ಉದ್ಯೋಗಾವಕಾಶ ಕಲ್ಪಿಸುವ ನಿಟ್ಟಿನಲ್ಲಿ ಈ ಯೋಜನೆಯನ್ನು ರೂಪಿಸಿದೆ. ಅದೇ ರೀತಿ ಸರ್ಕಾರದ ಈ ಯೋಜನೆಯ ಲಾಭ ಪಡೆಯಲು ರೈತ ಯುವಕರು ಮುಂದಾಗಬೇಕು.

ಯೋಜನೆ ಹೇಗೆ ಲಾಭ ಪಡೆಯಬಹುದು? 

ಕೋವಿಡ್ ಪರಿಸ್ಥಿತಿಯ ಬಳಿಕ ನಗರಗಳಿಂದ ಯುವಕರು ಗ್ರಾಮಗಳಿಗೆ ಆಗಮಿಸುವುದು ಕೃಷಿ ಕೃಷಿಯ ಇತರ ಉದ್ಯಮದಲ್ಲಿ ತೊಡಗುವುದು ಹೆಚ್ಚಾಗಿದೆ. ಆದ್ದರಿಂದ ರಾಜ್ಯ ಸರ್ಕಾರ ಕೃಷಿ ಉತ್ಪನ್ನಗಳ ಮಾರುಕಟ್ಟೆ, ಮೌಲ್ಯ ವರ್ಧನೆ ಪ್ರೋತ್ಸಾಹಿಸಲು ಕೃಷಿ ನವೋದ್ಯಮ ಎಂಬ ಯೋಜನೆ ಜಾರಿಗೊಳಿಸುತ್ತಿದೆ. ಈ ಬಾರಿಯ ಬಜೆಟ್ ಮಂಡನೆ ಮಾಡಿದ ಹಣಕಾಸು ಖಾತೆ ಸಚಿವರೂ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ‘ಕೃಷಿ ನವೋದ್ಯಮ’ ಎಂಬ ಯೋಜನೆ ಘೋಷಣೆ ಮಾಡಿದ್ದರು. ಅಲ್ಲದೇ 10 ಕೋಟಿ ರೂ. ಅನುದಾನವನ್ನು ಮೀಸಲಿಟ್ಟರು.

ಮುಂದಿನ ಬಜೆಟ್‌ನಲ್ಲಿ ಇನ್ನಷ್ಟು ಅನುದಾನವನ್ನು ಸರ್ಕಾರ ಈ ಯೋಜನೆಗೆ ನೀಡಲು ಚಿಂತನೆ ನಡೆಸಿದೆ ಕೃಷಿ ನವೋದ್ಯಮ’ ಯೋಜನೆಯಡಿ ಹೊಸ ಯೋಜನೆ ಅಲ್ಲದೇ ಈಗಾಗಾಲೇ ಸ್ಥಾಪಿಸಲಾದ ನವೋದ್ಯಮಗಳ ವಿಸ್ತರಣೆ ಅಥವಾ ಮೇಲ್ದರ್ಜೆಗೇರಿಸಲು (Scale up ) ಗೂ ಶೇ 50 ರಷ್ಟು ಸಹಾಯಧನ ( 20 ರಿಂದ ಗರಿಷ್ಠ 50 ಲಕ್ಷ ರೂ.) ವರೆಗೆ ಬ್ಯಾಂಕ್‌ನಿಂದ ಸಾಲದ ಮೂಲಕ ( Backended Subsidy ) ನೀಡಲಾಗುತ್ತದೆ ಯೋಜನೆಯ ಫಲಾನುಭವಿಗಳನ್ನು ಜಿಲ್ಲಾ ಮಟ್ಟದ ತಾಂತ್ರಿಕ ಸಮಿತಿ, ಅನುಷ್ಠಾನ ಸಮಿತಿ ಒಪ್ಪಿಗೆಯ ನಂತರ ರಾಜ್ಯ ಮಟ್ಟದಲ್ಲಿ ಅನುಮೋದನೆ ಪಡೆದ ಬಳಿಕ ಆಯ್ಕೆ ಮಾಡಿ ಸಹಾಯಧನವನ್ನು ನೀಡಲಾಗುತ್ತದೆ.

ಆಸಕ್ತರು ತಾಲೂಕು ಸಹಾಯಕ ಕೃಷಿ ನಿರ್ದೇಶಕರನ್ನು ಅಥವಾ ಜಂಟಿ ಕೃಷಿ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬಹುದು ರೈತರನ್ನು ಉದ್ಯಮಿಗಳಾಗಿ ಮಾಡಿದರೆ ಕೃಷಿ ಉತ್ಪನ್ನಗಳ ಮೌಲ್ಯ ವರ್ಧನೆ ಆಗುತ್ತದೆ. ಇದರಿಂದಾಗಿ ರೈತರ ಆದಾಯ ದ್ವಿಗುಣವಾಗುತ್ತದೆ ಈಗಾಗಲೇ ಹಲವು ರೈತರು ಇಂತಹ ಉದ್ಯಮ ಸ್ಥಾಪನೆ ಮಾಡಿ ಮಧ್ಯವರ್ತಿಗಳ ಹಸ್ತಕ್ಷೇಪವಿಲ್ಲದೇ ಉತ್ಪನ್ನಗಳನ್ನು ಮಾರಾಟ ಮಾಡಿ ಲಾಭವನ್ನು ಪಡೆದಿದ್ದಾರೆ. ಕೃಷಿ ವಿವಿಗಳ ಸಂಶೋಧನೆಗಳನ್ನು ಜಮೀನಿಗೆ ತೆಗೆದುಕೊಂಡು ಹೋಗುವುದು ನವೋದ್ಯಮ ಸ್ಥಾಪನೆಗೆ ಸರ್ಕಾರವು ಮುಂದಾಗಿದೆ.

ಈ ಯೋಜನೆಯ ಪ್ರಮುಖ ಘಟಕಗಳು ಯಾವುವು?

1) ವೈಯಕ್ತಿಕ ಉದ್ದಿಮೆಗಳು ಮತ್ತು ಗುಂಪುಗಳು –

• ಹೊಸ ಆಹಾರ ಸಂಸ್ಕರಣಾ ಉದ್ದಿಮೆ ಪ್ರಾರಂಭಿಸಲು ಹಾಗೂ ಚಾಲ್ತಿಯಲ್ಲಿರುವ ಉದ್ದಿಮೆಗಳನ್ನು ವಿಸ್ತರಿಸಲು ಸಹಕಾರ ನೀಡುತ್ತಿದೆ.

• ವಯಸ್ಸಿನ ಮಿತಿ ಹಾಗೂ ವಿದ್ಯಾರ್ಹತೆ : 18 ವರ್ಷ ಮೇಲ್ಪಟ್ಟವರು ಮತ್ತು ಯಾವುದೇ ಕನಿಷ್ಠ ವಿದ್ಯಾರ್ಹತೆ ಇಲ್ಲ.

• ಇತರೇ ಸರ್ಕಾರೀ ಯೋಜನೆಗಳಲ್ಲಿ ಸಹಾಯಧನ ಸಂಪರ್ಕಿತ ಬ್ಯಾಂಕ್‌ ಸಾಲ ಪಡೆದಿದ್ದರೂ ಸಹ ಅವರಿಗೆ ಈ ಯೋಜನೆಯ ಲಾಭ ಪಡೆಯಬಹುದು.

• ವೈಯಕ್ತಿಕ ಉದ್ದಿಮೆಗಳಿಗೆ, ಮಾಲೀಕತ್ವದ ಸಂಸ್ಥೆಗಳಿಗೆ ಪಾಲುದಾರಿಕೆ ಸಂಸ್ಥೆಗಳಿಗೆ ಖಾಸಗಿ ಸಂಸ್ಥೆಗಳಿಗೆ, ರೈತ ಉತ್ಪಾದಕ ಸಂಸ್ಥೆಗಳಿಗೆ, ಸರ್ಕಾರೇತರ ಸಂಸ್ಥೆಗಳಿಗೆ ಮತ್ತು ಸ್ವಸಹಾಯ ಸಂಘಗಳಿಗೆ ಸಾಲ ಸಂಪರ್ಕಿತ ಶೇ 35% ರಷ್ಟು ಸಹಾಯಧನ ಜೊತೆಗೆ ರಾಜ್ಯ ಸರ್ಕಾರದಿಂದ ಹೆಚ್ಚುವರಿ 5ಲಕ್ಷ ಸಹಾಯಧನ, ಗರಿಷ್ಟ ರೂ 15 ಲಕ್ಷಗಳು ಅಥವಾ ಶೇ 50% ಪಡೆಯಲು ಅವಕಾಶ. (ಯಾವದು ಕಡಿಮೆಯೋ ಅದನ್ನು)

ನವೋದ್ಯಮಗಳನ್ನು ಗುರುತಿಸಲು ಜಿಲ್ಲಾ ಮಟ್ಟದಲ್ಲಿ, ರಾಜ್ಯ ಮಟ್ಟದಲ್ಲಿ ಕೃಷಿ ಇಲಾಖೆ ಆಧಿಕಾರಿಗಳ ನೇತೃತ್ವದಲ್ಲಿ ಸಮಿತಿಗಳನ್ನು ರಚನೆ ಮಾಡಲಾಗುತ್ತದೆ ಸರ್ಕಾರ ಮೊದಲ ಹಂತದಲ್ಲಿ ಮೈಸೂರು, ಹುಬ್ಬಳ್ಳಿ, ಕಲಬುರಗಿ, ಮಂಗಳೂರು, ಬೆಳಗಾವಿ, ವಿಜಯಪುರ, ದಾವಣಗೆರೆ, ಶಿವಮೊಗ್ಗ ಮತ್ತು ಬಳ್ಳಾರಿ ಹೀಗೆ ಎರಡನೇ ದರ್ಜೆಯ ನಗರಗಳಲ್ಲಿ ಇಂತಹ ನವೋದ್ಯಮ ಸ್ಥಾಪನೆ ಮಾಡಲು ಒತ್ತು ನೀಡಲಿದೆ. ಆ ಪ್ರಾದೇಶಿಕ ಭಾಗದ ಕೃಷಿ ಉತ್ಪನ್ನಗಳನ್ನು ಆಧರಿಸಿ ಉದ್ಯಮ ಸ್ಥಾಪನೆ ಮಾಡುವುದು ಸರ್ಕಾರದ ಆಶಯ. ಕೇಂದ್ರ ಸರ್ಕಾರ 2014 ರಿಂದಲೇ ನವೋದ್ಯಮ ಸ್ಥಾಪನೆಗೆ ಒತ್ತನ್ನು ನೀಡುತ್ತಿದೆ.

ದೇಶದಲ್ಲಿ 70 ಸಾವಿರಕ್ಕೂ ಅಧಿಕ ಸ್ಟಾರ್ಟ್ ಅಪ್‌ ಗಳಿವೆ. ಆದರೆ ಕೃಷಿಗೆ ಸಂಬಂಧಿಸಿದ ನವೋದ್ಯಮಗಳು ಕಡಿಮೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕೃಷಿ, ಕೃಷಿ ಸಂಬಂಧಿತ ನವೋದ್ಯಮಗಳು ಹೆಚ್ಚಾಗಬೇಕು ಎಂದು ಪ್ರೋತ್ಸಾಹವನ್ನು ನೀಡುತ್ತಿವೆ ನವೋದ್ಯಮಗಳ ಸ್ಥಾಪನೆಯಿಂದ ರೈತರಿಗೆ ನೆರವಾಗುವುದಲ್ಲದೇ ತಾಲೂಕು ಮತ್ತು ಜಿಲ್ಲಾ ಮಟ್ಟದಲ್ಲಿ ಉದ್ಯೋಗ ಸೃಷ್ಟಿಯಾಗುತ್ತದೆ. ಇದರಿಂದ ಪ್ರಾದೇಶಿಕ ಮಟ್ಟದಲ್ಲಿಯೇ ರೈತರ ಬೆಳೆಗಳಿಗೆ ಬೇಡಿಕೆ ಬರಲಿದೆ.

Spread positive news

Leave a Reply

Your email address will not be published. Required fields are marked *