1791 ಕೋಟಿ ಬೆಳೆವಿಮೆ ಹಣ ಬಿಡುಗಡೆ ಕೃಷಿ ಸಚಿವರ ಸ್ಪಷ್ಟನೆ

ರೈತ ಮಿತ್ರರೇ ಈಗಾಗಲೇ ರಾಜ್ಯದಲ್ಲಿ ಕಳೆದ ಮುಂಗಾರಿನಲ್ಲಿ ಬರ ಉಂಟಾಗಿ ಯಾವುದೇ ಉತ್ಪನ್ನ ಪಡೆಯದೇ ರೈತರು ಕಂಗಾಲಾಗಿದ್ದಾರೆ. ಇಂತಹ ಸಂದರ್ಭದಲ್ಲಿ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬೀಮಾ (ವಿಮಾ) ಯೋಜನೆ ಮುಂಗಾರು 2024-25
ಅತಿವೃಷ್ಟಿ, ಅನಾವೃಷ್ಟಿ, ಅಕಾಲಿಕ ಮಳೆ, ಮುಂತಾದ ಪ್ರಕೃತಿ ವಿಕೋಪಗಳು ಸೇರಿದಂತೆ ಹಲವಾರು ಕಾರಣಗಳಿಂದ ಬೆಳೆ ನಷ್ಟ ಉಂಟಾದಾಗ ರೈತರ ನೆರವಿಗೆ ಬರಲು ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ (ವಿಮಾ) ಯೋಜನೆಯನ್ನು 2024-25 ನೇ ಸಾಲಿನಲ್ಲಿ ಸಹ ಜಾರಿಗೆ ತರಲು ಉದ್ದೇಶಿಸಲಾಗಿದೆ. ಈ ಸಾಲಿನ ಮುಂಗಾರಿನಲ್ಲಿ ನಮ್ಮ ರಾಜ್ಯ ಸರ್ಕಾರವು ರೈತರ ನೆರವಿಗಾಗಿ ಸಜ್ಜಾಗಿ ನಿಂತಿದೆ. ಬಹುತೇಕ ರೈತರಿಗೆ ತಿಳಿದಿರಬಹುದು ತಾವು ಬೆಳೆದ ಫಸಲಿಗೆ ಕ್ರಾಪ್ ಇನ್ಸೂರೆನ್ಸ್ ಅಂದರೆ ಬೆಳೆ ವಿಮೆ ಮಾಡಿಸುವ ಪದ್ಧತಿಯನ್ನು ಹಲವಾರು ವರ್ಷದಿಂದ ಮಾಡಿಕೊಳ್ಳುತ್ತಾ ಬಂದಿದ್ದಾರೆ.

ಅದೇ ರೀತಿ ಕೃಷಿ ಸಚಿವರು ಕೂಡ ಮುಂಗಾರು ಬೆಳೆ ವೈಫಲ್ಯದ ಕಾರಣ ರೈತರ ಬೆಳೆ ಸಂಪೂರ್ಣ ನಾಶವಾಗಿವೆ. 1791 ಕೋಟಿ ರೂ ವಿಮೆ ಪರಿಹಾರ ವಿಕಾಸಸೌಧದ ಕಚೇರಿಯಲ್ಲಿ ಇಂದು ಕೃಷಿ ಮತ್ತು ಜಲಾನಯನ ಇಲಾಖೆಗಳು, ಕರ್ನಾಟಕ ರಾಜ್ಯ ಬೀಜ ನಿಗಮ ಕೃಷಿಕ ಸಮಾಜದ ಅಧಿಕಾರಿಗಳ ಸಭೆ ನಡೆಸಿ ಅವರು ಕಳೆದ ಸಾಲಿನ ವಿಮೆ ಇತ್ಯರ್ಥದ ಜೊತೆಗೆ ಈ ಮುಂಗಾರಿಗೂ ಬೆಳೆ ವಿಮೆ ನೊಂದಣಿ ಹಾಗೂ ರೈತ ಜಾಗೃತಿಗೆ ಆದ್ಯತೆ ನೀಡಿ ಎಂದು ನಿರ್ದೇಶನ ನೀಡಲಾಯಿತು.

2023-24 ರ ಮುಂಗಾರಿನಲ್ಲಿ 19.14 ಲಕ್ಷ ರೈತರು 15.10 ಲಕ್ಷ ಹೆಕ್ಟೇ‌ರ್ ವಿಸ್ತೀರ್ಣದಲ್ಲಿ ಬೆಳೆ ವಿಮೆ ನೊಂದಾಯಿಸಿದ್ದರು. ನಿಯಮಾನುಸಾರ ಪರಿಶೀಲಿಸಿ ಅಂತಿಮವಾಗಿ ಬಾಕಿ ಇರುವ 130 ಕೋಟಿ ರೂ ಗಳನ್ನು ಶೀಘ್ರ ವಿತರಣೆ ಮಾಡಿ ಎಂದು ತಿಳಿಸಿದೆ. 2023-24 ನೇ ಸಾಲಿನ ಹಿಂಗಾರು ಮತ್ತು ಬೇಸಿಗೆ ಹಂಗಾಮಿನಲ್ಲಿ 5.88 ಲಕ್ಷ ರೈತರು 5.43 ಲಕ್ಷ ಹೆಕ್ಟೇ‌ರ್ ಪ್ರದೇಶಕ್ಕೆ ಬೆಳೆ ವಿಮೆ ನೊಂದಾಯಿಸಿದ್ದರು. ಈ ವರಗೆ ಪ್ರಿವೆಂಟೆಡ್ ಸೋಯಿಂಗ್, ಸ್ಥಳೀಯ ಪ್ರಕೃತಿ ವಿಕೋಪ ಮತ್ತು ಮಿಡ್ ಸೀಜನ್ ಅಡ್ವರ್ಸಿಟಿ ಅಡಿ 16053 ರೈತರಿಗೆ 7.93 ರೂ ಕೋಟಿ ಪರಿಹಾರ ಇತ್ಯರ್ಥ ಪಡಿಸಲಾಗಿದೆ. ಉಳಿದ ರೈತರಿಗೆ ವಿಮೆ ಹಣ ತಲುಪಿಸಿ ಎಂದು ನಿರ್ದೇಶಿಸಲಾಯಿತು.

ರಾಜ್ಯಾದ್ಯಂತ ಪೂರ್ವ ಮುಂಗಾರು ಉತ್ತಮವಾಗಿದ್ದು, ಮುಂಗಾರು ಕೂಡ ಆರಂಭವಾಗಿದೆ. ಬಿತ್ತನೆ ಬೀಜ, ರಸಗೊಬ್ಬರ ಬೇಡಿಕೆ ಆಧಾರದಲ್ಲಿ ಪೂರೈಕೆಯಾಗಿದ್ದು ಎಲ್ಲೂ ಕೊರತೆಯಾಗದಂತೆ ಎಚ್ಚರ ವಹಿಸಿ ರೈತರಿಗೆ ಸೂಕ್ತ ಮಾರ್ಗದರ್ಶನ ನೀಡಿ ಎಂದು ತಿಳಿಸಲಾಯಿತು. ಬೆಳೆಸಾಲ ಪಡೆಯದ ರೈತರು ನೋಂದಣಿಗಾಗಿ ಅರ್ಜಿಯೊಂದಿಗೆ ಭೂಮಿ ಹೊಂದಿರುವುದಕ್ಕೆ ದಾಖಲೆಗಳಾದ ಪಹಣಿ, ಆಧಾರ ಸಂಖ್ಯೆ ಜೋಡಿಸಿದ ಬ್ಯಾಂಕ ಖಾತೆ / ಪಾಸ್ ಬುಕ್ ಮತ್ತು ಆಧಾರ ಸಂಖ್ಯೆಯೊಂದಿಗೆ ಡಿ.ಸಿ.ಸಿ/ಇತರೆ ಬ್ಯಾಂಕ್, ಗ್ರಾಮ್-ಒನ್ ಮತ್ತು ಸಿ.ಎಸ್.ಸಿ ಕೇಂದ್ರಗಳಿಗೆ ಸಂಪರ್ಕಿಸಿ. ರೈತರು ನೋಂದಣಿಗಾಗಿ ಕಡ್ಡಾಯವಾಗಿ FRUITS ID (FID) ಹೊಂದಿರಬೇಕು.

ಅದೇ ರೀತಿ ಮತ್ತೊಂದು ವಿಷಯವನ್ನು ಗಂಭೀರವಾಗಿ ಪರಿಗಣಿಸಿದ ಕೃಷಿ ಸಚಿವರು ರಾಜ್ಯದ ಕೃಷಿ ಇಲಾಖೆ ಹಾಗೂ ವಿಶ್ವವಿದ್ಯಾಲಯಗಳಲ್ಲಿ ಪ್ರಗತಿಯಲ್ಲಿರುವ ಹಾಗೂ ಪ್ರಾರಂಭವಾಗ ಬೇಕಿರುವ ವಿವಿಧ ಕಟ್ಟಡ ಕಾಮಗಾರಿಗಳನ್ನು ಅತ್ಯಂತ ತ್ವರಿತವಾಗಿ ಮುಕ್ತಾಯ ಗೊಳಿಸುವಂತೆ ಸೂಚನೆ ನೀಡಿದೆ. ರೈತ ಸಂಪರ್ಕ ಕೇಂದ್ರ, ಗೊದಾಮು, ಮಿಲೆಟ್ ಸರಪಳಿ ಪಾರ್ಕ್‌ ಮತ್ತಿತರ ಕಟ್ಟಡಗಳನ್ನು ಆದಷ್ಟು ಬೇಗ ಮುಕ್ತಾಯ ಗೊಳಿಸಬೇಕು ಎಂದು ಅನುಷ್ಠಾನ ಏಜೆನ್ಸಿಗಳಿಗೆ ಸೂಚಿಸಲಾಯಿತು. ಇನ್ನೂ ಪ್ರಾರಂಭವಾಗದೇ ಇರುವ ಕಾಮಗಾರಿಗಳಿಗೆ ಬೇಗ ಚಾಲನೆ ನೀಡಬೇಕು. ಜಾಗದ ಸಮಸ್ಯೆ ಇರುವ ಕಡೆ ಜಿಲ್ಲಾ ಉಸ್ತುವಾರಿ ಸಚಿವರು ಸ್ಥಳೀಯ ಶಾಸಕರನ್ನು ಸಂಪರ್ಕಿಸಿ ಸ್ಥಳ ಪಡೆದು ಕೆಲಸ ಪ್ರಾರಂಭಿಶಿವಂತೆ ತಿಳಿಸಿದೆ.

ಅರ್ಜಿಯ ಸ್ಟೇಟಸ ಚೆಕ್ ಮಾಡುವ ವಿಧಾನ –
https://www.samrakshane.karnataka.gov.in/
ಈ ಲಿಂಕ್ ಮೇಲೆ ಕ್ಲಿಕ್ ಮಾಡಿ ಅರ್ಜಿಯ ಸ್ಟೇಟಸ್ ಚೆಕ್ ಮಾಡಬಹುದು.
• ನಂತರ ಅಲ್ಲಿ ವರ್ಷದ ಆಯ್ಕೆ ಮತ್ತು ಹಂಗಾಮು ಆಯ್ಕೆ ಇರುತ್ತದೆ ಅದರಲ್ಲಿ ವರ್ಷ ಮತ್ತು ಹಂಗಾಮು ಹಾಕಬೇಕು.
• ನಂತರ ಅಲ್ಲಿ ಮುಂದೆ ಎಂಬ ಆಯ್ಕೆ ಮೇಲೆ ಕ್ಲಿಕ್ ಮಾಡಿ ನಿಮ್ಮ ಬೆಳೆಗೆ ಸಂಪೂರ್ಣ ಬೆಳೆವಿಮೆ ಜಮೆ ಆಗಿದೆ ಎಂದು ತೋರಿಸುತ್ತದೆ.
• ನಂತರ ಅಲ್ಲಿ ಚೆಕ್ ಸ್ಟೇಟಸ್ ಎಂಬುದರ ಮೇಲೆ ಕ್ಲಿಕ್ ಮಾಡಬೇಕು.
• ನಂತರ ಅಲ್ಲಿ ನಿಮ್ಮ ಬೆಳೆವಿಮೆ ಅಪ್ಲಿಕೇಶನ್ ನಂಬರ್ ಹಾಕಿ ಚೆಕ್ ಮಾಡಬಹುದು.

Spread positive news

Leave a Reply

Your email address will not be published. Required fields are marked *