ಈ ಮೊಬೈಲ್ ಅಪ್ಲಿಕೇಶನ್ ಮೂಲಕ ಬೆಳೆ ವಿವರ ದಾಖಲಿಸಲು ರೈತರಿಗೆ ಸೂಚನೆ.

ರೈತರು ತಮ್ಮ ಹೊಲಗಳಲ್ಲಿ ಬೆಳೆದ ಬೆಳೆಗಳ ವಿವರ ದಾಖಲಿಸಲು ಆಂಡ್ರಾಯ್ಡ್ ಆಪ್ ಡೌನ್ಲೋಡ್ ಮಾಡಿಕೊಂಡು ಬೆಳೆ ವಿವರ ತಾವೇ ಸ್ವತಃ ಮೊಬೈಲ್ ತಂತ್ರಾಂಶದ ಮೂಲಕ ದಾಖಲಿಸಬಹುದು ಎಂದು ಜಂಟಿ ಕೃಷಿ ನಿರ್ದೇಶಕ ಮಲ್ಲಿಕಾರ್ಜುನ ಅವರು ತಿಳಿಸಿದ್ದಾರೆ. ಜಿಲ್ಲೆಯಾದ್ಯಂತ ಜೂ.22 ರಿಂದ ಮುಂಗಾರು ಬೆಳೆ ಸಮೀಕ್ಷೆ ಆರಂಭವಾಗಿದ್ದು, ರೈತರು ಬೆಳೆದ ಬೆಳೆಗಳ ಬಗ್ಗೆ ನಿಖರವಾಗಿ ಮಾಹಿತಿ ಪಡೆದುಕೊಳ್ಳಲು ಇ-ಆಡಳಿತ ವತಿಯಿಂದ ಅಭಿವೃದ್ಧಿಪಡಿಸಿರುವ ಮೊಬೈಲ್ ಆಪ್ ಮೂಲಕ ಬೆಳೆ ಸಮೀಕ್ಷೆ ನಡೆಸಲಾಗುತ್ತಿದೆ. ಮೊಬೈಲ್ ಅಪ್ಲಿಕೇಷನ್ ಪಡೆಯಲು ಅನುಸರಿಸಬೇಕಾದ ಅಂಶಗಳು ರೈತರು…

Spread positive news
Read More

ಈ ಕೃಷಿಕರಿಗೆ ಹವಾಮಾನ ಇಲಾಖೆಯಿಂದ ಸಿಹಿ ಸುದ್ದಿ.

ಈ ಕೃಷಿಕರಿಗೆ ಹವಾಮಾನ ಇಲಾಖೆಯಿಂದ ಸಿಹಿ ಸುದ್ದಿ ದಾಖಲೆಯ ಬಿಸಿಲಿನಿಂದ ಬಸವಳಿದ ದೇಶದ ರೈತರಿಗೆ ಭಾರತೀಯ ಹವಾಮಾನ ಇಲಾಖೆ (India Meteorological Department) ಶುಭ ಸುದ್ದಿಯೊಂದನ್ನು ನೀಡಿದೆ (Good News For Farmers). ಈ ತಿಂಗಳು ಇಡೀ ಭಾರತದಲ್ಲಿ ಮಾಸಿಕ ಮಳೆ ಶೇ. 106ಕ್ಕಿಂತ ಹೆಚ್ಚು ಸುರಿಯು ಸಾಧ್ಯತೆ ಇದೆ ಎಂದು ತಿಳಿಸಿದೆ. ಈ ವರ್ಷದ ಜೂನ್‌ನಲ್ಲಿ 123 ವರ್ಷಗಳ ಇತಿಹಾಸದಲ್ಲೇ ಅತ್ಯಂತ ಅಧಿಕ ತಾಪಮಾನ ದಾಖಲಾಗಿತ್ತು. ಇದೀಗ ಐಎಂಡಿಯ ವರದಿ ಕೃಷಿಕರಿಗೆ ತುಸು ಸಮಾಧಾನ ತಂದಿದೆ….

Spread positive news
Read More

ಮೆಣಸಿನಕಾಯಿ & ದಾಳಿಂಬೆ ಬೆಳೆ ವಿಮಾ ಯೋಜನೆಗೆ ನೋಂದಣಿ ಪ್ರಕ್ರಿಯೆ ಪ್ರಾರಂಭ

ಪ್ರಸ್ತಕ ಸಾಲಿಗೆ ಮುಂಗಾರು ಹಂಗಾಮು ಅವಧಿಗೆ ಮರು ವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಗೆ ನೋಂದಣಿ ಪ್ರಕ್ರಿಯೆ ಪ್ರಾರಂಭವಾಗಿದ್ದು, ಅರ್ಹ ರೈತರು ತಮ್ಮ ಬೆಳೆಗಳ ವಿಮೆಗೆ ನೋಂದಾಯಿಸಿಕೊಳ್ಳಬಹುದು ಎಂದು ಜಿಲ್ಲಾ ಪಂಚಾಯತ್‌ ತೋಟಗಾರಿಕೆ ಇಲಾಖೆಯ ಉಪ ನಿರ್ದೇಶಕ ಸಂತೋಷ ಸಪ್ಪಂಡಿ ತಿಳಿಸಿದ್ದಾರೆ.ಪ್ರಕೃತಿ ವಿಕೋಪಗಳು, ಹವಾಮಾನ ವೈಪರೀತ್ಯಗಳಾದ ಅತಿವೃಷ್ಟಿ, ಅನಾವೃಷ್ಟಿ, ಬಿರುಗಾಳಿ, ಆಲಿಕಲ್ಲು ಮಳೆ, ಪ್ರವಾಹ, ಸಿಡಿಲಿನಿಂದ ಉಂಟಾಗುವ ಬೆಂಕಿ ಅವಘಡ ಇತ್ಯಾದಿ ಕಾರಣಗಳಿಂದ ಸಂಭವಿಸಬಹುದಾದ ಬೆಳೆಹಾನಿಯಾಗಬಹುದು. ಈ ನಷ್ಟದ ಪರಿಹಾರವನ್ನು ಬೆಳೆ ವಿಮೆ ಘಟಕ(ಗ್ರಾಮಪಂಚಾಯಿತಿ)ವಾರು ನಿರ್ಧರಿಸಿ…

Spread positive news
Read More

BPL Card ನಿರೀಕ್ಷೆಯಲ್ಲಿದವರಿಗೆ ಸರ್ಕಾರದಿಂದ ಗುಡ್ ನ್ಯೂಸ್! ಹೊಸ ಕಾರ್ಡ್

ಇಂದು ವಿಧಾನಸೌಧದ (vidhana soudha) ಸಮ್ಮೇಳನ ಸಭಾಂಗಣದಲ್ಲಿ ನಡೆದ DC ಮತ್ತು CEO ಹಾಗೂ ಉಸ್ತುವಾರಿ ಕಾರ್ಯದರ್ಶಿಗಳ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ (cm siddaramaiah) ಅವರು ಅಧಿಕಾರಿಗಳಿಗೆ ಮಹತ್ವದ ಸೂಚನೆ ನೀಡಿದ್ದಾರೆ. ಸರ್ಕಾರದ ಕಾರ್ಯಕ್ರಮಗಳು, ಯೋಜನೆಗಳು ಪರಿಣಾಮಕಾರಿಯಾಗಿ ಜನ ಸಾಮಾನ್ಯರಿಗೆ (poor people) ತಲುಪಿಸಲು DC-SP-CEO ಗಳು ಕ್ರಿಯಾಶೀಲತೆಯಿಂದ, ಸಮನ್ವಯತೆಯಿಂದ ಕೆಲಸ ಮಾಡಬೇಕು. ಆಗ ಮಾತ್ರ ಸರ್ಕಾರದ ಕಾಳಜಿಗಳು ಜನರಿಗೆ ತಲುಪಲು ಸಾಧ್ಯ ಸೂಚನೆ ನೀಡಿದ್ದಾರೆ. ಇದೇ ವೇಳೆ ಬಿಪಿಎಲ್ ಕಾರ್ಡ್ ಕುರಿತು ಮಹತ್ವದ ಚರ್ಚೆ ನಡೆಸಿದ್ದಾರೆ….

Spread positive news
Read More

ರೈತರಿಗೆ ಸಿಹಿ ಸುದ್ದಿ..! 19.84 ಲಕ್ಷ ರೈತರಿಗೆ ಖಾತೆಗೆ ಬರ ಪರಿಹಾರ ಹಣ ನೇರ ಜಮಾ!

ಪ್ರೀತಿಯ ಓದುಗರೇ ಇವತ್ತು ರೈತರಿಗೆ ಸಂತಸ ನೀಡುವ ಸುದ್ದಿಯನ್ನು ತಂದಿದ್ದೇನೆ. ಕೂಡಲೇ ರೈತರು ಈ ವಿಷಯವನ್ನು ಸಂಪೂರ್ಣ ಓದಿ. ರಾಜ್ಯದಲ್ಲಿ ಅರ್ಹರೆಂದು ಗುರುತಿಸಲಾದ 19,82,677 ರೈತರನ್ನು ಒಳಗೊಂಡ 17,84,398 ಸಣ್ಣ, ಅತಿ ಸಣ್ಣ ರೈತ ಕುಟುಂಬಳಿಗೆ ಜೀವನೋಪಾಯ ನಷ್ಟ ಪರಿಹಾರ ವಿತರಣೆ ಪ್ರಕ್ರಿಯೆಗೆ ಚಾಲನೆ ದೊರತಿದೆ. ಸದ್ಯದಲ್ಲೇ ಅರ್ಹ ಫಲಾನುಭವಿ ರೈತರ ಬ್ಯಾಂಕ್‌ ಖಾತೆಗೆ ಪರಿಹಾರ ಮೊತ್ತ ಬಿಡುಗಡೆಯಾಗಲಿದೆ. ಮಳೆಯಾಶ್ರಿತ ಪ್ರದೇಶದ ಪ್ರತಿ ಹೆಕ್ಟೇರ್‌ಗೆ 8,500 ರೂ. ನೀರಾವರಿಯಾದರೆ 17 ಸಾವಿರ ರೂ., ಬಹುವಾರ್ಷಿಕ ಬೆಳೆಯಾದರೆ 22,500…

Spread positive news
Read More

ಪಹಣಿಯೊಂದಿಗೆ ಆಧಾರ್ ಕಾರ್ಡ್ ಜೋಡಣೆ ಜುಲೈ ಗೆ ಅಂತ್ಯ: ಕೃಷ್ಣ ಬೈರೇಗೌಡ

ಪ್ರೀಯ ರೈತರೇ ಇವತ್ತು ಒಂದು ಮುಖ್ಯವಾದ ವಿಷಯದ ಬಗ್ಗೆ ಚರ್ಚಿಸೋಣ. ನೀವು ನಿಮ್ಮ ಜಮೀನಿನ ಮಾಹಿತಿ ಪಡೆಯಲು ಸರ್ಕಾರದಿಂದ ಒಂದು ಕೆಲಸ ಮಾಡಬೇಕಾಗಿದೆ. ಅದೇನೆಂದರೆ ಉತಾರಿಗೆ ಆಧಾರ್ ಕಾರ್ಡ್ ಲಿಂಕ್ ಮಾಡುವುದು ಕಡ್ಡಾಯವಾಗಿದೆ. ಅದು ಜುಲೈ ಅಂತ್ಯದೊಳಗೆ ಮಾತ್ರ ಮಾಡಿಸಬೇಕು. ಜುಲೈ ಮುಗಿದ ನಂತರ ಆಧಾರ್ ಕಾರ್ಡ್ ಲಿಂಕ್ ಮಾಡುವುದನ್ನು ಸರ್ಕಾರವು ನಿಲ್ಲಿಸಲಿದೆ. ಅದೇ ರೀತಿ ದೊಡ್ಡ ಮತ್ತು ಸಣ್ಣ ರೈತರ ಮಾಹಿತಿ ದಾಖಲಿಸುವುದರ ಜತೆಗೆ, ಭೂ ಸಂಬಂಧಿತ ವಂಚನೆ ತಡೆಯಲು ಈಗ ಸರ್ಕಾರವು ರೈತರಿಗೆ ಅನುಕೂಲ…

Spread positive news
Read More

ಜನನ ಮರಣ ಪ್ರಮಾಣ ಪತ್ರ ಈಗ ನಿಮ್ಮ ಗ್ರಾಮ ಪಂಚಾಯಿತಿಯಲ್ಲಿ ಲಭ್ಯ

ಗ್ರಾಮೀಣ ಪ್ರದೇಶದಲ್ಲಿ ಜನನ ಹಾಗೂ ಮರಣ ನೋಂದಣಿ ಪದ್ಧತಿಯನ್ನು ಬಲಪಡಿಸಲು ಹಾಗೂ 30 ದಿನಗಳ ಒಳಗೆ ಜನನ-ಮರಣ ಘಟನೆಗಳನ್ನು ನೋಂದಾಯಿಸುವ ಸಲುವಾಗಿ ಗ್ರಾಮ ಪಂಚಾಯತಿ ಕಾರ್ಯದರ್ಶಿಗಳನ್ನು ಜನನ, ಮರಣ ಉಪ ನೋಂದಣಾಧಿಕಾರಿಗಳನ್ನಾಗಿ ನೇಮಕ ಮಾಡಲಾಗಿದ್ದು, ಜುಲೈ 1ರಿಂದ ಜಾರಿಗೆ ಬರುವಂತೆ ಗ್ರಾಮ ಪಂಚಾಯತಿಗಳಲ್ಲಿ ನೋಂದಣಿ ಪ್ರಕ್ರಿಯೆಯನ್ನು ಅನುಷ್ಠಾನಗೊಳಿಸಲಾಗುತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್‌ ರಾಜ್‌ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್‌ ಖರ್ಗೆ ತಿಳಿಸಿದ್ದಾರೆ. ಪೂರ್ವಭಾವಿಯಾಗಿ ಎಲ್ಲಾ ಜಿಲ್ಲಾ ಪಂಚಾಯತಿಗಳಲ್ಲಿ ಗ್ರಾಮ ಪಂಚಾಯತಿ ಕಾರ್ಯದರ್ಶಿಗಳು ಹಾಗೂ ಜನನ,…

Spread positive news
Read More