ಉಚಿತ ಹೋಲಿಗೆ ಯಂತ್ರ ಯೋಜನೆ ಅರ್ಜಿ ಆಹ್ವಾನ ಲಿಂಕ್.

ಸಾರ್ವಜನಿಕರಿಗೆ ಗುಡ್ ನ್ಯೂಸ್! ಸರ್ಕಾರವು ರೈತ ಮಹಿಳೆಯರಿಗೆ ಮತ್ತೋಂದು ಹೊಸ ಯೋಜನೆ ಶುರು ಮಾಡಿದೆ ಅದೇ ರೀತಿ ರೈತರು ಸಹ ಇಂತಹ ‌ಹಲವಾರು ಯೋಜನೆ ಲಾಭ ಪಡೆಯುವುದು ಬಹಳ ಮುಖ್ಯ ಆಗಿದೆ. ನಂತರ ಮಹಿಳೆಯರು ಇಂತಹ ಯೋಜನೆಗಳಿಂದ ವಂಚಿತ ಆಗದಂತೆ ರೈತರು ತಮ್ಮ ಹತ್ತಿರದ ಪಂಚಾಯಿತಿ, ಕೃಷಿ ರೈತ ಸಂಪರ್ಕ ಕೇಂದ್ರ, ನಾಗರಿಕ ಸೇವಾ ಕೇಂದ್ರ ಈ ತರಹದ ಸರ್ಕಾರದ ಸಂಸ್ಥೆಗಳಿಗೆ ಭೇಟಿ ನೀಡಿ ಯೋಜನೆ ಅರ್ಜಿ ಸಲ್ಲಿಸಿ ಲಾಭ ಪಡೆಯಬೇಕು. ಅದೇ ರೀತಿ ಕೂಡಲೇ ಎಲ್ಲ ದಾಖಲೆಗಳನ್ನು ತಯಾರಿಸಿ ಇಂತಹ ‌ಹಲವಾರು ಯೋಜನೆ ಲಾಭ ಪಡೆಯುವುದು ಬಹಳ ಮುಖ್ಯ ಪಾತ್ರ ಆಗಿದೆ. ಬನ್ನಿ ಯಾವ ನಿಗಮದಿಂದ ಉಚಿತ ಹೋಲಿಗೆ ಯಂತ್ರ ಯೋಜನೆ ಅಡಿಯಲ್ಲಿ ಅರ್ಜಿ ಕರೆದಿದ್ದಾರೆ ಎಂದು ತಿಳಿಯೋಣ.

ಏನಿದು ಹೊಲಿಗೆ ಯಂತ್ರ ಯೋಜನೆ?
ಹಿಂದುಳಿದ ವರ್ಗಗಳ ಬಡ ಕುಟುಂಬದವರಿಗೆ ಹೊಲಿಗೆ ಯಂತ್ರಗಳನ್ನು ವಿತರಿಸುವ ಯೋಜನೆಯಲ್ಲಿ ಸೌಲಭ್ಯ ಪಡೆಯಬಯಸುವವರು ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಮತ್ತು 3ಬಿಗೆ ಸೇರಿದವರಾಗಿರಬೇಕು. ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ಪ್ರದೇಶದವರಿಗೆ ರೂ. 98,000/-ಗಳು ಪಟ್ಟಣ ಪ್ರದೇಶದವರಿಗೆ ರೂ.1,20,000/-ಗಳ ಒಳಗಿರಬೇಕು, ಅರ್ಜಿದಾರರ ವಯಸ್ಸು 18 ರಿಂದ 55 ವರ್ಷಗಳ ಮಿತಿಯಲ್ಲಿರಬೇಕು.

ಈ ಮೇಲ್ಕಂಡ ಎಲ್ಲಾ ಯೋಜನೆಗಳು ವಿಶ್ವಕರ್ಮ, ಉಪ್ಪಾರ, ಅಂಬಿಗ, ಸವಿತಾ, ಮಡಿವಾಳ, ಅಲೆಮಾರಿ ಮತ್ತು ಅರೆ ಅಲೆಮಾರಿ ಸಮುದಾಯ, ಒಕ್ಕಲಿಗ, ಲಿಂಗಾಯತ, ಕಾಡುಗೊಲ್ಲ, ಹಟ್ಟಿಗೊಲ್ಲ, ಮರಾಠ, ಮತ್ತು ಇದರ ಉಪ ಸಮುದಾಯಗಳನ್ನು ಹೊರತುಪಡಿಸಿ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಮತ್ತು 3ಬಿ ನಲ್ಲಿ ಉಳಿದ ಸಮುದಾಯಗಳಿಗೆ ಅನ್ವಯವಾಗುತ್ತದೆ.

ಈ ಮೇಲ್ಕಂಡ ಎಲ್ಲಾ ಯೋಜನೆಗಳಡಿಯಲ್ಲಿ ಸೌಲಭ್ಯ ಒದಗಿಸಲು ಸೇವಾ ಸಿಂಧು ತಂತ್ರಾಂಶದಲ್ಲಿ ಆನ್‌ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿ
ಸಲ್ಲಿಸುವಾಗ ಅರ್ಜಿದಾರರು ಆಧಾರ್ ಜೋಡಣೆಯಾದ ಚಾಲ್ತಿಯಲ್ಲಿರುವ ಬ್ಯಾಂಕ್ ಖಾತೆ ಹೊಂದಿರಬೇಕು. ಆಧಾರ್ ಕಾರ್ಡ್ ನಲ್ಲಿರುವಂತೆ ಅರ್ಜಿದಾರರ ಹೆಸರು, (ಶ್ರೀ/ಶ್ರೀಮತಿ ಕುಮಾರಿ ಮುಂತಾದ ಮಾಹಿತಿಗಳೆಲ್ಲವು) ಇತರೆ ದಾಖಲಾತಿಗಳಾದ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಬ್ಯಾಂಕ್ ಪಾಸ್ ಪುಸ್ತಕದಲ್ಲಿಯೂ ಇದ್ದು ಹೊಂದಾಣಿಕೆಯಾಗಬೇಕು.

ಒಂದು ಬಾರಿ ನಿಗಮದ ಯಾವುದಾದರೂ ಯೋಜನೆಯಲ್ಲಿ ಪ್ರಯೋಜನ ಪಡೆದಿದ್ದಲ್ಲಿ ಅಂತಹವರು ಹಾಗೂ ಅವರ ಕುಟುಂಬದವರು ಮತ್ತೊಮ್ಮೆ ಸೌಲಭ್ಯ ಕೋರಿ ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ. 2023-24ನೇ ಸಾಲಿನಲ್ಲಿ ಅರ್ಜಿ ಸಲ್ಲಿಸಿ ಸೌಲಭ್ಯ ಪಡೆಯದೇ ಇರುವ ಫಲಾಪೇಕ್ಷಿಗಳು ಮತ್ತೊಮ್ಮೆ ಅರ್ಜಿ ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ.

ಅರ್ಜಿ ಸಲ್ಲಿಸುವುದು ಹೇಗೆ?
ಮೇಲ್ಕಂಡ ಸೌಲಭ್ಯಗಳನ್ನು ಪಡೆಯಲು ಇಚ್ಚಿಸುವ ಹಿಂದುಳಿದ ವರ್ಗಗಳ ಅರ್ಜಿದಾರರು ಅರ್ಜಿಗಳನ್ನು ಸೇವಾಸಿಂಧು ಪೋರ್ಟಲ್
http://sevasindhu.karnataka.gov.in ಮುಖಾಂತರ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿರುತ್ತದೆ. ನಿಗಮದ ವೆಬೈಟ್ www.dbedc.karnataka.gov.in ಇಲ್ಲಿ ಸಂಪರ್ಕಿಸಿ ಹೆಚ್ಚಿನ ಮಾಹಿತಿ ಪಡೆಯಬಹುದಾಗಿರುತ್ತದೆ ಅಥವಾ ನಿಗಮದ ಸಹಾಯವಾಣಿ ಸಂಖ್ಯೆ: 080-22374832 ಮತ್ತು 8050770004 ಅಥವಾ 8050770005 ಆಯಾ ಜಿಲ್ಲಾ ಕಛೇರಿಯ ದೂರವಾಣಿ ಸಂಖ್ಯೆಗಳನ್ನು ವೆಬ್‌ಸೈಟ್‌ನಲ್ಲಿ ನೀಡಲಾಗಿದ್ದು ಅದರಂತೆ ಸಂಪರ್ಕಿಸಬಹುದು. ಸೇವಾಸಿಂಧು ತಂತ್ರಾಂಶದ ಮುಖಾಂತರ ಅರ್ಜಿ ಸಲ್ಲಿಸಲು ದಿನಾಂಕ 31.08.2024 ರಂದು ಕೊನೆಯ ದಿನಾಂಕ ನಿಗದಿಪಡಿಸಿದೆ.

ಬೇಕಾಗುವ ದಾಖಲೆಗಳು –
* ಆಧಾ‌ರ್ ಕಾರ್ಡ್ ಬೇಕು
• ಆದಾಯ ಪ್ರಮಾಣ ಪತ್ರ ಬೇಕು
• ಹೊಲದ ಕೂಡುವಿಕೆ ರಸ್ತೆಯ ಕಡತದ ನಕಲು ಬೇಕು
• ಬ್ಯಾಂಕ್ ಪಾಸ್ ಪುಸ್ತಕ ಜೆರಾಕ್ಸ್ ಬೇಕು
• ರಹವಾಸಿ ಪ್ರಮಾಣ ಪತ್ರ
• ರೇಷನ್ ಕಾರ್ಡ್ ಪ್ರತಿ

Spread positive news

Leave a Reply

Your email address will not be published. Required fields are marked *