ಯಶಸ್ವಿನಿ ಆರೋಗ್ಯ ರಕ್ಷಣಾ ಯೋಜನೆಗೆ ಹೊಸದಾಗಿ ಹಾಗೂ ನವೀಕರಣಕ್ಕಾಗಿ ಸರ್ಕಾರ ಹಾಗೂ ಸಹಕಾರ ಇಲಾಖೆ ಪ್ರಕಟಣೆ ಹೊರಡಿಸಿದ್ದು ಹೊಸ ಸದಸ್ಯರನ್ನು ನೋಂದಾಯಿಸಲು/ನವೀಕರಣಗೊಳಿಸಲು ಮಾರ್ಚ್ 31 ಕೊನೆಯ ದಿನವಾಗಿದೆ.
ರಾಜ್ಯಾದ್ಯಂತ ಯಶಸ್ವಿನಿ ನೋಂದಣಿ ಪ್ರಕ್ರಿಯೆ ಪ್ರಗತಿಯಲ್ಲಿದ್ದು, ಡಿಸೆಂಬರ್-2024 ಮತ್ತು ಜನವರಿ-2025 ರ ತಿಂಗಳುಗಳಲ್ಲಿ ಹೆಚ್ಚಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ / ಹಾಲು ಉತ್ಪಾದಕರ ಸಹಕಾರ ಸಂಘಗಳು ಹಾಗೂ ಇತರೆ ಸಹಕಾರ ಸಂಘಗಳ ಆಡಳಿತ ಮಂಡಳಿಗೆ ಚುನಾವಣೆ ನಿಗದಿಯಾಗಿದ್ದು, ಇಲಾಖೆಯ ಕ್ಷೇತ್ರ ಸಿಬ್ಬಂದಿಗಳು / ಅಧಿಕಾರಿಗಳು ಚುನಾವಣಾ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದು, ಇದರಿಂದಾಗಿ ಯಶಸ್ವಿನಿ ನೋಂದಣಿಯಲ್ಲಿ ಹೆಚ್ಚಿನ ಪ್ರಗತಿ ಆಗಿರುವುದಿಲ್ಲವೆಂದು ಹಾಗೂ ನಿಗದಿಪಡಿಸಿರುವ ಗುರಿಯ ಪೈಕಿ ಇಲ್ಲಿಯವರೆಗೆ ಸುಮಾರು 10 ಲಕ್ಷ ಸದಸ್ಯರ ನೋಂದಣಿ ಮಾತ್ರವಾಗಿದ್ದು, ಇನ್ನೂ ಅನೇಕ ಸದಸ್ಯರು ನೋಂದಾಯಿಸಿಕೊಳ್ಳಲು ಆಸಕ್ತರಾಗಿರುವುದರಿಂದ ಯೋಜನೆಯಡಿ ಹೆಚ್ಚಿನ ರೀತಿಯಲ್ಲಿ ಪ್ರಗತಿ ಸಾಧಿಸಲು 2024-25 ನೇ ಸಾಲಿನ ಯಶಸ್ವಿನಿ ಯೋಜನೆಯಡಿ ಸದಸ್ಯರ ನೋಂದಣಿ/ನವೀಕರಣ ಅವಧಿಯನ್ನು ದಿನಾಂಕ: 01-02-2025 ರಿಂದ ದಿನಾಂಕ: 31-03-2025 ರವರೆಗೆ ವಿಸ್ತರಿಸಲು ನಿಬಂಧಕರು ಕೋರಿರುತ್ತಾರೆ.
ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ 2024-25ನೇ ಸಾಲಿನಲ್ಲಿ ಯಶಸ್ವಿನಿ ಯೋಜನೆಯನ್ನು ಮುಂದುವರೆಸಲು ಹಾಗೂ ಈ ಯೋಜನೆಯಲ್ಲಿ ಹೊಸ ಸದಸ್ಯರನ್ನು ನೋಂದಾಯಿಸಲು/ನವೀಕರಣಗೊಳಿಸುವ ಸಲುವಾಗಿ ಅವಧಿಯನ್ನು ದಿನಾಂಕ:01-02-2025 ರಿಂದ ದಿನಾಂಕ:31-03-2025 ರವರೆಗೆ ವಿಸ್ತರಿಸಿ ಆದೇಶಿಸಿದೆ.
ಬೇಕಾದ ಅಗತ್ಯ ದಾಖಲೆಗಳು
ನವೀಕರಣ ಮಾಡಲು
1.ಯಶಸ್ವಿನಿ ಐಡಿ ಕಾರ್ಡು,
2.ಆಧಾರ್ ಕಾರ್ಡ್ ಜೆರಾಕ್ಸ್ (ನೋಂದಣಿ ಮಾಡಿಸುವ ಪ್ರತಿಯೋಬ್ಬ ಸದಸ್ಯರದ್ದು)
3.ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಢದವರಿಗೆ ಜಾತಿ ಪ್ರಮಾಣ ಪತ್ರದ ನಕಲು.(ಕುಟುಂಬದ ಒಬ್ಬರದ್ದು)
ಹೋಸದಾಗಿ ನೋದಾಯಿಸಲು:-
1.ಸಹಕಾರ ಸಂಘದಲ್ಲಿ ಸದಸ್ಯತ್ವ ಹೋದಿರಬೇಕು.
2.ಕುಟುಂಬದ ರೇಷನ್ ಕಾರ್ಡ್ ಪ್ರತಿ ಜೆರಾಕ್ಸ್,
3.ಆಧಾರ್ ಕಾರ್ಡ್ ಜೆರಾಕ್ಸ್ (ನೋದವಣಿ ಮಾಡಿಸುವ ಪ್ರತಿಯೋಬ್ಬ ಸದಸ್ಯರದ್ದು)
4.ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಢದವರಿಗೆ ಜಾತಿ ಪ್ರಮಾಣ ಪತ್ರದ ನಕಲು. (ಕುಟುಂಬದ ಒಬ್ಬರದ್ದು)
5. ಪ್ರತಿಯೊಬ್ಬರದ್ದು 2 ಕಾಪೀ ಪೋಟೊ.
ಸಹಕಾರ ಇಲಾಖೆ ವತಿಯಿಂದ ರಾಜ್ಯದ ಯಶಸ್ವನಿ ನೆಟ್ವರ್ಕ್ ಆಸ್ಪತ್ರೆಗಳಲ್ಲಿ ಸಹಕಾರಿಗಳಿಗೆ ಯಶಸ್ವಿನಿ ಯೋಜನೆಯ ಚಿಕಿತ್ಸಾ ಸೌಲಭ್ಯಗಳನ್ನು ಒದಗಿಸಲಾಗುವುದು. ದಿ: 1/1/2024 ರಿಂದ ಯಶಸ್ವಿನಿ ನೋಂದಣಿ ಆರಂಭಗೊಂಡಿದ್ದು, ದಿ: 01-04-2025 ರಿಂದ 31/3/2026 ರವರೆಗೆ ಚಿಕಿತ್ಸಾ ಅವಧಿ ಚಾಲ್ತಿಯಲ್ಲಿರುತ್ತದೆ. ಸಹಕಾರ ಸಂಘದ ಸದಸ್ಯರು ಆದಷ್ಟು ಬೇಗ ಗ್ರಾಮಾಂತ ಸಹಕಾರ ಸಂಘಗಳ ಗರಿಷ್ಟ 4 ಸದಸ್ಯರ ಕುಟುಂಬಕ್ಕೆ ವಾರ್ಷಿಕ ರೂ.500, 4 ಕ್ಕಿಂತ ಹೆಚ್ಚಿನ ಸದಸ್ಯರಿದಲ್ಲಿ ತಲಾ ರೂ.100 ಹಾಗೂ ನಗರದ 4 ಸದಸ್ಯರ ಕುಟಂಬಕ್ಕೆ ವಾರ್ಷಿಕ ರೂ.1000 ನಿಗದಿ ಮಾಡಿದ್ದು, 4 ಕ್ಕಿಂತ ಹೆಚ್ಚಿನ ಸದಸ್ಯರಿದಲ್ಲಿ ತಲಾ ರೂ.200 ಗಳಂತೆ ಮೊತ್ತ ಪಾವತಿಸಿ ನೊಂದಣಿ ಮಾಡಿಕೊಳ್ಳಬೇಕು.
ಯಶಸ್ವಿನಿ ಯೋಜನೆಯಲ್ಲಿ ಮುಖ್ಯವಾಗಿ ಹೃದಯಕ್ಕೆ ಸಂಬAಧಿಸಿದ ರೋಗಗಳು ಹಾಗೂ ಕಿವಿ, ಮೂಗು, ಗಂಟಲು ವ್ಯಾದಿಗಳು, ಕರುಳಿನ ಖಾಯಿಲೆಗಳು, ನರಗಳಿಗೆ ಸಂಬAಧಿಸಿದ, ಕಣ್ಣಿನ, ಮೂಳೆ ರೋಗಗಳು, ಸ್ತ್ರೀಯರಿಗೆ ಸಂಬAಧಿಸಿದ ಖಾಯಿಲೆಗಳಿಗೆ ಚಿಕಿತ್ಸಾ ಸೌಲಭ್ಯವಿರುತ್ತದೆ.
ಈ ಯೋಜನೆಯಡಿಯಲ್ಲಿ ಒಂದು ಫಲಾನುಭವಿ ಕುಟುಂಬಕ್ಕೆ ವಾರ್ಷಿಕ ವೈದ್ಯಕೀಯ ಚಿಕಿತ್ಸಾ ವೆಚ್ಚದ ಗರಿಷ್ಟ ಮಿತಿಯು ರೂ.5 ಲಕ್ಷಕ್ಕೆ ನಿಗದಿಪಡಿಸಿಲಾಗಿರುತ್ತದೆ. ಸಹಕಾರ ಸಂಘದ ಸದಸ್ಯರಿಗೆ ರಾಜ್ಯದ ಯಶಸ್ವಿನಿ ನೆಟ್ವರ್ಕ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಸೌಲಭ್ಯಗಳನ್ನು ನೀಡಲು ನಿರ್ಧರಿಸಿದ್ದು, ಫಲಾನುಭವಿಗಳು ಚಿಕಿತ್ಸೆ ಪಡೆಯಲು ಆಸ್ಪತ್ರೆಗೆÀ ದಾಖಲಾಗುವ ಸಂದರ್ಭದಲ್ಲಿ ನೆಟ್ವರ್ಕ್ ಆಸ್ಪತ್ರೆಗಳ ಮಾಹಿತಿಯನ್ನು ಮತ್ತು ಯೋಜನೆ ಅನ್ವಯವಾಗಿರುವುದನ್ನು ಆಸ್ಪತ್ರೆಗಳಲ್ಲಿ ಖಚಿತ ಪಡೆಸಿಕೊಂಡು ಚಿಕಿತ್ಸೆ ಪಡೆಯತಕ್ಕದಾಗಿದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಸದಸ್ಯರು ಚಿಕಿತ್ಸೆ ಪಡೆಯುವಾಗ ಪ್ರತಿಯೊಬ್ಬರು ತಮ್ಮ ಜಾತಿ ಪ್ರಮಾಬದ ಆರ್ಡಿ ನಂಬರ್ ತರುವುದು ಕಡ್ಡಾಯವಾಗಿದೆ.
ಸಹಕಾರ ಸಂಘಗಳ ಸದಸ್ಯರಿಗಾಗಿ ಕರ್ನಾಟಕ ರಾಜ್ಯ ಸರ್ಕಾರವು ರೂಪಿಸಿರುವ ಯಶಸ್ವಿನಿ ಆರೋಗ್ಯ ರಕ್ಷಣಾ ಯೋಜನೆಗೆ ಸುಸ್ವಾಗತ. ರಾಜ್ಯದ ಎಲ್ಲಾ ಸಹಕಾರಿಗಳ ಮತ್ತು ರೈತರ ನಿರಂತರ ಒತ್ತಾಯ ಹಾಗೂ ಬೇಡಿಕೆ ಪರಿಗಣಿಸಿ ಈ ಹಿಂದೆ 2018ರಲ್ಲಿ ಸ್ಥಗಿತಗೊಳಿಸಿದ್ದ ಯಶಸ್ವಿನಿ ಯೋಜನೆಯನ್ನು ಪುನರ್ ಜಾರಿಗೊಳಿಸಲು ರಾಜ್ಯ ಸರ್ಕಾರವು ತೀರ್ಮಾನಿಸಿ, 2022-23ನೇ ಸಾಲಿನ ಆಯವ್ಯಯದಲ್ಲಿ ಪರಿಷ್ಕೃತ ಯಶಸ್ವಿನಿ ಯೋಜನೆಯನ್ನು ಘೋಷಣೆ ಮಾಡಿದೆ.
ಯೋಜನೆ ಜಾರಿಗಾಗಿ “ಯಶಸ್ವಿನಿ ಸಹಕಾರಿ ಸದಸ್ಯರ ಆರೋಗ್ಯ ರಕ್ಷಣಾ ಟ್ರಸ್ಟ್”ಅನ್ನು ರಚಿಸಿದ್ದು, ಇದಕ್ಕೆ ಮಾನ್ಯ ಮುಖ್ಯಮಂತ್ರಿಗಳು ಮಹಾ ಪೋಷಕರಾಗಿ, ಸಹಕಾರ ಸಚಿವರು ಪೋಷಕರಾಗಿ, ಸರ್ಕಾರದ ಪ್ರಧಾನ ಕಾರ್ಯದರ್ಶಿ ಸಹಕಾರ ಇಲಾಖೆ ಇವರು ಟ್ರಸ್ಟ್ನ ಅಧ್ಯಕ್ಷರಾಗಿರುತ್ತಾರೆ. ಸಹಕಾರ ಸಂಘಗಳ ನಿಬಂಧಕರು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಯುಕ್ತರು, ಸಹಕಾರ ಇಲಾಖೆಯ ಹಿರಿಯ ಅಧಿಕಾರಿಗಳು, ವಿವಿಧ ವೈದ್ಯಕೀಯ ಕ್ಷೇತ್ರದ ನುರಿತ ವೈದ್ಯಕೀಯ ತಜ್ಞರು ಹಾಗೂ ಇಬ್ಬರು ಹಿರಿಯ ಸಹಕಾರಿಗಳು ದಕ್ಷಿಣ ಕರ್ನಾಟಕ ಮತ್ತು ಉತ್ತರ ಕರ್ನಾಟಕ ಭಾಗದಿಂದ ತಲಾ ಒಬ್ಬರು ಟ್ರಸ್ಟ್ನ ಸದಸ್ಯರಾಗಿರುತ್ತಾರೆ.
ರಾಜ್ಯದಲ್ಲಿನ ಯಾವುದೇ ಸಹಕಾರ ಸಂಘದ (ಗ್ರಾಮೀಣ ಮತ್ತು ನಗರ) ಸದಸ್ಯರು, ಸ್ವ-ಸಹಾಯ ಗುಂಪುಗಳ ಸದಸ್ಯರು, (ಸಹಕಾರ ಸಂಸ್ಥೆಗಳಿಂದ ರಚಿತವಾಗಿರುವ) ಸಹಕಾರಿ ಮೀನುಗಾರರು, ಸಹಕಾರಿ ಬೀಡಿ ಕಾರ್ಮಿಕರು, ಸಹಕಾರಿ ನೇಕಾರರು ಸಹಕಾರಿ ಸದಸ್ಯರಾಗಿ ಮೂರು ತಿಂಗಳು ಗತಿಸಿದ್ದಲ್ಲಿ ನಿಗದಿತ ವಾರ್ಷಿಕ ವಂತಿಗೆ ಪಾವತಿಸಿ ಯಾವುದೇ ವಯೋಮಿತಿ ನಿರ್ಬಂಧ ಇಲ್ಲದೇ ಯಶಸ್ವಿನಿ ಯೋಜನೆಯ ಸದಸ್ಯರಾಗಬಹುದಾಗಿದೆ. ಪ್ರಧಾನ ಅರ್ಜಿದಾರರ ಅರ್ಹಕುಟುಂಬದ ಸದಸ್ಯರು ಸಹ ನಿಗದಿತ ವಂತಿಗೆ ಪಾವತಿಸಿ ಯಶಸ್ವಿನಿ ಯೋಜನೆಯ ಸದಸ್ಯರಾಗಲು ಅವಕಾಶ ಕಲ್ಪಿಸಿದೆ. ಅವಲಂಬಿತ ಕುಟುಂಬದ ಸದಸ್ಯರು ಸಹಕಾರ ಸಂಘದ ಸದಸ್ಯರಾಗಬೆಕಾಗಿಲ್ಲ.
“ಕುಟುಂಬ” ಎಂದರೆ ಪ್ರಧಾನ ಅರ್ಜಿದಾರರ ತಂದೆ/ತಾಯಿ, ಗಂಡ/ಹೆಂಡತಿ, ಗಂಡು ಮಕ್ಕಳು, ಮದುವೆಯಾಗದ ಹೆಣ್ಣು ಮಕ್ಕಳು, ಸೂಸೆಯಂದಿರು ಮತ್ತು ಮೊಮ್ಮಕ್ಕಳು ಎಂದು ಅರ್ಥೈಯಿಸುವುದು.
ಫಲಾನುಭವಿ ಕುಟುಂಬಕ್ಕೆ ವಾರ್ಷಿಕ ವೈದ್ಯಕೀಯ ಚಿಕಿತ್ಸಾ ವೆಚ್ಚದ ಗರಿಷ್ಟ ಮಿತಿ ರೂ.5.00/- ಲಕ್ಷಕ್ಕೆ ನಿಗದಿಪಡಿಸಿದೆ.
ನೋಂದಾಯಿತ ಸದಸ್ಯರಿಗೆ ಯೂನಿಕ್ ಐಡಿ ಸಂಖ್ಯೆಯುಳ್ಳ ಪ್ಲಾಸ್ಟಿಕ್ ಕಾರ್ಡ್ನ್ನು ಒದಗಿಸಲಾಗುತ್ತಿದ್ದು, ಅದನ್ನು ಬಳಸಿ, ಯೋಜನೆಯಡಿ ಗುರುತಿಸಿದ ನೆಟ್ವರ್ಕ್ ಆಸ್ಪತ್ರೆಗಳಲ್ಲಿ (ಆಯುಷ್ಮಾನ್ ಭಾರತ್ ಯೋಜನೆಯಲ್ಲಿ ಅಳವಡಿಸಿಕೊಂಡಿರುವ) 1650 ಚಿಕಿತ್ಸೆಗಳು ಮತ್ತು 478 ಐಸಿಯು ಸೇರಿ ಒಟ್ಟು 2128 ಚಿಕಿತ್ಸ್ಸೆಗಳನ್ನು ನಗದುರಹಿತವಾಗಿ ಪಡೆಯಲು ಅವಕಾಶ ಕಲ್ಪಿಸಲಾಗಿದೆ.
ಈ ಯೋಜನೆಯಡಿ ಮುಖ್ಯವಾಗಿ ಹೃದಯಕ್ಕೆ ಸಂಬಂಧಿಸಿದ ರೋಗಗಳು, ಕಿವಿ, ಮೂಗು, ಗಂಟಲು ವ್ಯಾದಿಗಳು, ಕರುಳಿನ ಖಾಯಿಲೆಗಳು, ನರಗಳಿಗೆ ಸಂಬಂಧಿಸಿದ ಖಾಯಿಲೆಗಳು, ಕಣ್ಣಿನ ಖಾಯಿಲೆಗಳು, ಮೂಳೆ ರೋಗಗಳು, ಸ್ತ್ರೀಯರಿಗೆ ಸಂಬಂಧಿಸಿದ ಖಾಯಿಲೆ ಇತ್ಯಾದಿ ರೋಗಗಳಿಗೆ ಸಂಬಂಧಿಸಿದ ಚಿಕಿತ್ಸಾ ಸೌಲಭ್ಯಗಳನ್ನು ರಾಜ್ಯದ ಯಶಸ್ವಿನಿ ನೆಟ್ವರ್ಕ್ ಆಸ್ಪತ್ರೆಗಳಲ್ಲಿ ಒದಗಿಸಲಾಗುವುದು.
30.00 ಲಕ್ಷ ಸದಸ್ಯರ ನೊಂದಣೆ ಗುರಿಗೆ ಎದುರಾಗಿ ಮಾರ್ಚ್ 2023ರ ಅಂತ್ಯಕ್ಕೆ ಗುರಿ ಮೀರಿ 47.00 ಲಕ್ಷಕ್ಕೂ ಹೆಚ್ಚಿನ ಸದಸ್ಯರು ಯೋಜನೆಯಡಿ ನೊಂದಣಿ ಮಾಡಿಕೊಂಡಿರುವುದು.