Rain alert: ರಾಜ್ಯದ ವಿವಿಧೆಡೆ ಮಿಂಚು ಸಹಿತ ಮಳೆ ಅಬ್ಬರ! ನಿಮ್ಮ ಜಿಲ್ಲೆಗೆ ಮಳೆ ಇದೆಯೇ?

ಮಂಗಳವಾರ ಕೊಡಗು, ಹಾಸನ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಒಂದೆರಡು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ (Weather forecast) ಸಾಧ್ಯತೆ ಇದೆ. ಉಡುಪಿ, ದಕ್ಷಿಣ ಕನ್ನಡ, ಬೆಳಗಾವಿ, ಧಾರವಾಡ, ಹಾವೇರಿ, ಬಾಗಲಕೋಟೆ, ಗದಗ ಮತ್ತು ಮೈಸೂರು ಜಿಲ್ಲೆಗಳ ಪ್ರತ್ಯೇಕ. ಸ್ಥಳಗಳಲ್ಲಿ ಲಘು ಮಳೆ/ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇನ್ನು ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳ ಕಾಲ ಭಾಗಶ:

ಮೋಡ ಕವಿದ ವಾತಾವರಣ ಇರಲಿದ್ದು, ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 32°C ಮತ್ತು 22°C ಇರುವ ಸಾಧ್ಯತೆ ಇದೆ.

ಮಾ. 26ರಂದು ಚಿಕ್ಕಮಗಳೂರು, ಕೊಡಗು ಮತ್ತು ಹಾಸನ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆ/ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಮೈಸೂರು ಜಿಲ್ಲೆಯ ಒಂದೆರಡು ಕಡೆಗಳಲ್ಲಿ ಹಗುರ ಮಳೆ/ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಗಂಟೆಗೆ 30-40 ಕಿಮೀ ವೇಗದ ಗಾಳಿ ಬೀಸುವ ಸಾಧ್ಯತೆಯಿದೆ. ರಾಜ್ಯದ ಉಳಿದ ಭಾಗಗಳಲ್ಲಿ ಒಣ ಹವೆ ಇರುವ ಸಾಧ್ಯತೆ ಇದೆ.

ಮಾ. 27ರಂದು ರಾಜ್ಯದಾದ್ಯಂತ ಒಣ ಹವೆ ಇರುವ ಸಾಧ್ಯತೆಯಿದೆ. ಮಾ.28ರಂದು ರಾಜ್ಯದಾದ್ಯಂತ ಒಣ ಹವೆ ಇರುವ ಸಾಧ್ಯತೆಯಿದೆ.

ಮಾ.29ರಂದು ಮೈಸೂರು, ಚಿಕ್ಕಮಗಳೂರು, ಕೊಡಗು ಮತ್ತು ಹಾಸನ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಲಘು ಮಳೆಯಾಗುವ ಸಾಧ್ಯತೆ ಇದೆ. ರಾಜ್ಯದ ಉಳಿದ ಭಾಗಗಳಲ್ಲಿ ಒಣ ಹವೆ ಇರುವ ಸಾಧ್ಯತೆ ಇದೆ.

ಮಾ.30ರಂದು ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಮೈಸೂರು, ಚಿಕ್ಕಮಗಳೂರು, ಕೊಡಗು ಮತ್ತು ಹಾಸನ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಲಘು ಮಳೆಯಾಗುವ ಸಾಧ್ಯತೆ ಇದೆ. ರಾಜ್ಯದ ಉಳಿದ ಭಾಗಗಳಲ್ಲಿ ಒಣ ಹವೆ ಇರುವ ಸಾಧ್ಯತೆ ಇದೆ.

ತಾಪಮಾನದ ಮುನ್ಸೂಚನೆ:

ಮುಂದಿನ 2 ದಿನಗಳಲ್ಲಿ ಉತ್ತರ ಒಳನಾಡಿನಲ್ಲಿ ಗರಿಷ್ಠ ತಾಪಮಾನದಲ್ಲಿ ಯಾವುದೇ ದೊಡ್ಡ ಬದಲಾವಣೆ ಇಲ್ಲ, ನಂತರ 2-3 ಡಿಗ್ರಿ ಸೆಲ್ಸಿಯಸ್ ಏರಿಕೆಯಾಗಲಿದೆ. ಮುಂದಿನ 5 ದಿನಗಳವರೆಗೆ ದಕ್ಷಿಣ ಒಳನಾಡು, ಕರಾವಳಿಯಲ್ಲಿ ಗರಿಷ್ಠ ತಾಪಮಾನದಲ್ಲಿ ದೊಡ್ಡ ಬದಲಾವಣೆ ಇಲ್ಲ. ಮುಂದಿನ 2 ದಿನಗಳವರೆಗೆ ಒಳನಾಡಿನಲ್ಲಿ ಕನಿಷ್ಠ ತಾಪಮಾನದಲ್ಲಿ ಯಾವುದೇ ದೊಡ್ಡ ಬದಲಾವಣೆಯಿಲ್ಲ, ನಂತರ ಕ್ರಮೇಣ 2-3 ಡಿಗ್ರಿ ಸೆಲ್ಸಿಯಸ್ ಏರಿಕೆಯಾಗಲಿದೆ.

ಕಲಬುರಗಿಯಲ್ಲಿ 39 °C ಉಷ್ಣಾಂಶ ದಾಖಲು

ಕಲಬುರಗಿಯಲ್ಲಿ ಭಾನುವಾರ ರಾಜ್ಯದಲ್ಲೇ ಗರಿಷ್ಠ ತಾಪಮಾನ 39 °C ದಾಖಲಾಗಿದೆ. ಇನ್ನು ಬಯಲು ಸೀಮೆಯ ಧಾರವಾಡದಲ್ಲಿ ಕನಿಷ್ಠ ತಾಪಮಾನ 19.5 ವರದಿಯಾಗಿದೆ.

ಆಕಾಶದಿಂದ ಬೀಳುವುದೆಲ್ಲ ಆಲಿಕಲ್ಲು ಎಂದು ಭಾವಿಸಬೇಡಿ!

ಆಕಾಶದಿಂದ ಮಳೆ ಹನಿಗಳ ಜೊತೆ ಮಂಜುಗಡ್ಡೆ ಉದುರಿದರೆ. ಮಕ್ಕಳು ಅದನ್ನು ಆಡುತ್ತಾ ತಿನ್ನುತ್ತಾ ಖುಷಿಪಡುತ್ತಾರೆ. ಆದರೆ, ಈ ಮಂಜುಗಡ್ಡೆ ವಿಮಾನದಿಂದ ಬೀಳುವ ಮೂತ್ರದ ಮಂಜುಗಡ್ಡೆಯೂ ಆಗಿರಬಹುದು ಎಂಬುದು ನಿಮಗೆ ತಿಳಿದಿದೆಯೇ? ಹೌದು, ಇದು ನಿಜ…!

ವಿಮಾನಗಳಲ್ಲಿ ಕೊಳಚೆ ಸಂಗ್ರಹಿಸಲು ಟ್ಯಾಂಕ್‌ಗಳಿದ್ದರೂ, ಕೆಲವೊಮ್ಮೆ ಅವುಗಳಿಂದ ತ್ಯಾಜ್ಯ ಹೊರಬರುತ್ತದೆ. 2006 ರಲ್ಲಿ ಆಂಡಿ ಮತ್ತು ಗೇನರ್ ಸ್ವಾನ್ ಎಂಬ ದಂಪತಿಗಳ ಮನೆ ಮುಂದೆ ಇದೇ ರೀತಿಯ ಘಟನೆ ಸಂಭವಿಸಿತ್ತು. ಮಳೆ ಹನಿಗಳ ಜೊತೆ ಮಂಜುಗಡ್ಡೆ ಬಿದ್ದಾಗ, ಅದು ಆಕಾಶದಿಂದ ಬಿದ್ದ ಮಂಜುಗಡ್ಡೆ ಎಂದು ಅವರು ಭಾವಿಸಿದ್ದರು. ಆದರೆ, ಅದು ವಿಮಾನದಿಂದ ಬಿದ್ದ ಮೂತ್ರದ ಮಂಜುಗಡ್ಡೆ ಎಂದು ತಿಳಿದು ಅವರಿಗೆ ಆಶ್ಚರ್ಯವಾಯಿತು.

ವಿಮಾನದಿಂದ ಬೀಳುವ ಈ ಮೂತ್ರದ ಮಂಜುಗಡ್ಡೆಯನ್ನು “ನೀಲಿ ಮಂಜುಗಡ್ಡೆ” ಎಂದು ಕರೆಯುತ್ತಾರೆ. ಇದು ಹಲವು ಬಾರಿ ನೆಲದ ಮೇಲೆ ಬಿದ್ದಿದೆ. ಸ್ಟೆಫಾನಿ ಕೋಲ್ ಎಂಬವರ ಕಾರಿನ ಮೇಲೂ ಮೂತ್ರದ ಮಂಜುಗಡ್ಡೆ ಬಿದ್ದಿದೆ. ಈ ಘಟನೆಗಳಿಂದ ಮಾಲೀಕರಿಗೆ ಅಪಾರ ನಷ್ಟವಾಗಿದೆ, ಆದರೆ ವಿಮಾನಯಾನ ಸಂಸ್ಥೆಗಳಿಂದ ಯಾವುದೇ ಪರಿಹಾರ ಸಿಕ್ಕಿಲ್ಲ.

ಶಿರಸಿ:
ಕಾದ ಭೂಮಿಯ ತಾಪಮಾನ ತಣಿಸಲೆಂಬಂತೆ ಈ ವರ್ಷದ ಮೊದಲ ಮಳೆ ಮಂಗಳವಾರ (ಮಾ.25) ತಾಲೂಕಿನ ಹಲವಡೆ ಗುಡುಗು,‌ ಸಿಡಿಲಿನ ಆರ್ಭಟದ ಜೊತೆಗೆ ಸುರಿಯಿತು.

ಮಧ್ಯಾಹ್ನದ ತನಕವೂ 36- 37 ಡಿಗ್ರಿ ಸೆಲ್ಸಿಯಷ್ಟು ತಾಪಮಾನ ಇದ್ದು. ನಗರ ಹಾಗೂ ಗ್ರಾಮೀಣ ಭಾಗದ ಹಲವೆಡೆ ಮಳೆ ಸುರಿದು ತಂಪಾಗಿಸಿತು. ಕೆಲವಡೆ ಒಂದೆರಡು ತಾಸುಗಳಿಗೂ ಅಧಿಕ ಕಾಲ ಸುರಿದ ಮಳೆ ನೀರು ಗಟಾರದಲ್ಲಿ ಹರಿಯುವಂತೆ ಮಾಡಿತು.

ಇನ್ನು ಬೈಕ್ ಸವಾರರಿಗೆ‌ ಸಂಚಾರದ ಸಮಸ್ಯೆ ಉಂಟಾಗಿದೆ. ಕೃಷಿ ಕಾರ್ಯಕ್ಕೆ ತೆರಳಿದವರು ಅರ್ಧಕ್ಕೇ ವಾಪಸ್ ಆದರು. ಗ್ರಾಮೀಣ ಭಾಗದಲ್ಲಿ ವಿದ್ಯುತ್, ದೂರವಾಣಿ ಸ್ಥಗಿತಗೊಂಡವು.

ಕಾದ ವಾತಾವರಣದಲ್ಲಿ ಮೊದಲ‌ ಮಳೆ ಬಿದ್ದ ಪರಿಣಾಮ ಬೆಳೆಗಾರರಿಗೆ ಅಡಿಕೆ ಮುಗಡು ಉದರುವ ಆತಂಕ ಕೂಡ ಮನೆ ಮಾಡಿದೆ. ಹಲವಾರು ಮನೆಗಳಲ್ಲಿ ಕಾಳುಮೆಣಸು, ಅಡಿಕೆ ಕೂಡ ಅಂಗಳದಲ್ಲಿ ಒಣಗಿಸಲಾಗಿದ್ದು, ಅದೂ ಒದ್ದೆಯಾಯಿತು.

ಚಿಕ್ಕಮಗಳೂರು:

ಮಲೆನಾಡಿನಲ್ಲಿ ಗಾಳಿ ಮಳೆಯ ಅಬ್ಬರ ಜೋರಾಗಿದ್ದು ಪರಿಣಾಮ ಬೃಹತ್ ಗಾತ್ರದ ಮರವೊಂದು ರಸ್ತೆಗೆ ಉರುಳಿ ಬಿದ್ದು ರಸ್ತೆ ಸಂಚಾರ ತಾತ್ಕಾಲಿಕ ಬಂದ್ ಆಗಿದೆ.

ಕಳಸ ಸುತ್ತಮುತ್ತ ಬೆಳ್ಳಂಬೆಳಗ್ಗೆಯೇ ಭಾರೀ ಗಾಳಿ-ಮಳೆಯಿಂದಾಗಿ ಬೃಹತ್ ಗಾತ್ರದ ಮರವೊಂದು ರಸ್ತೆಗೆ ಉರುಳಿ ಬಿದ್ದ ಪರಿಣಾಮ. ಕಳಸದಿಂದ ಮೂಡಿಗೆರೆ ಹೋಗುವ ಮಾರ್ಗ ತಾತ್ಕಾಲಿಕ ಬಂದ್ ಆಗಿದ್ದು ಕೂಡಲೇ ಸ್ಥಳೀಯರು ಮರ ತೆರವುಗೊಳಿಸುವ ಕಾರ್ಯ ನಡೆಸುತ್ತಿದ್ದಾರೆ.

ಕಳಸ ತಾಲೂಕಿನ ಹಿರೇಬೈಲ್-ಮರಸಣಿಗೆ ಬಳಿ ಘಟನೆ ನಡೆದಿದ್ದು ಇಲ್ಲಿನ ಹಿರೇಬೈಲ್, ಮರಸಣಿಗೆ, ಯಡಿಯೂರು ಸುತ್ತಾಮುತ್ತಾ ಭಾರೀ ಗಾಳಿ ಮಳೆಯಾಗುತ್ತಿದೆ.

ಮಾರ್ಚ್ ಆರಂಭದಲ್ಲೇ ರಾಜ್ಯದಲ್ಲಿ ಸೂರ್ಯನ ಬಿಸಿಲಿನಿಂದ ಜನರು ಕಂಗೆಟ್ಟು ಹೋಗಿದ್ದರು. ಆದರೆ ಇತ್ತೀಚಿಗೆ ಕೆಲವು ದಿನಗಳಿಂದ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ. ಆಗುತ್ತಿರುವುದರಿಂದ ಜನ ಸ್ವಲ್ಪಮಟ್ಟಿಗೆ ಸೂರ್ಯನ ಶಾಖದಿಂದ ದೂರ ಉಳಿದಂತೆ ಆಗಿದೆ.
ಇದೀಗ ಕೊಡಗು ಮತ್ತು ವಿಜಯಪುರ ಜಿಲ್ಲೆಯಲ್ಲಿ ಆಲಿಕಲ್ಲು ಸಹಿತ ಭಾರಿ ಮಳೆಯಾಗಿದೆ.

ಹೌದು ಕೊಡಗು ಜಿಲ್ಲೆಯ ಹಲವೆಡೆ ವರ್ಷದ ಮೊದಲ ಮಳೆಯಾಗಿದ್ದು. ಗುಡುಗು ಸಿಡಿಲು ಸಹಿತ ಆಲಿಕಲ್ಲು ಮಳೆ ಸುರಿದಿದೆ. ಮಡಿಕೇರಿ ನಗರ ಸೇರಿದಂತೆ ಹಲವಡೆ ಆಲಿಕಲ್ಲು ಮಳೆಯಾಗಿದೆ. ಉತ್ತಮ ಮಳೆಯಿಂದ ಕಾಫಿ ಬೆಳೆಗಾರರಲ್ಲಿ ಇದೀಗ ಮಂದಹಾಸ ಮೂಡಿದೆ.

ಇನ್ನು ಎಚ್‌ಎಸ್ ಸಂಗಾಪುರ ದಲ್ಲೂ ಕೂಡ ಆಲಿಕಲು ಸಹಿತ ಮಳೆಯಾಗಿದೆ.ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ಸಂಗಾಪುರದಲ್ಲಿ ಗುಡುಗು ಮಿಂಚು ಸಹಿತ ಅರ್ಧ ಗಂಟೆವರೆಗೂ ಆಲಿಕಲ್ಲು ಮಳೆಯಾಗಿದೆ. ಬಿಸಿಲಿನ ಜಳದಿಂದ ಕಂಗೆಟ್ಟಿದ್ದ ಜನರಿಗೆ ಇದೀಗ ಮಳೆರಾಯ ತಂಪೆರೆದಿದ್ದಾನೆ. ಆಲಿಕಲ್ಲು ಮಳೆಯಿಂದ ತೋಟಗಾರಿಗೆ ಬೆಳೆಗೆ ಹಾನಿ ಹಾಗೂ ಆತಂಕ ಎದುರಾಗಿದೆ. ದ್ರಾಕ್ಷಿ, ದಾಳಿಂಬೆ ಹಾಗೂ ನಿಂಬೆ ಬೆಳೆಗಾರರಲ್ಲಿ ಇದೀಗ ಆತಂಕ ಮನೆ ಮಾಡಿದೆ.

ಹಾಸನ, ಚಾಮರಾಜನಗರ, ಕೊಡಗು, ಹುಬ್ಬಳ್ಳಿ ಹಾಗೂ ಮೈಸೂರಿನ ಕೆಲವು ಭಾಗಗಳಲ್ಲಿ ಸೋಮವಾರ ಮಳೆಯಾಗಿದ್ದು, ಆಲಿಕಲ್ಲು ಮಳೆಗೆ ಹಾಸನ, ಚಾಮರಾಜನಗರದಲ್ಲಿ ಬಾಳೆ ಬೆಳೆ ನೆಲಕಚ್ಚಿದೆ.

ಹಾಸನ

ಜಿಲ್ಲೆಯ ವಿವಿಧೆಡೆ 3 ದಿನಗಳಿಂದ ಮಳೆಯಾಗುತ್ತಿದೆ. ಆಲೂರು ಮತ್ತು ಸಕಲೇಶಪುರ ತಾಲೂಕಿನ ಕೆಲವೆಡೆ ಸೋಮವಾರ ಬಿರುಗಾಳಿ ಸಹಿತ ಮಳೆಯಾಗಿದೆ. ಮಳೆಯಿಂದ ಮಲೆನಾಡು ಭಾಗದ ಕಾಫಿ ಬೆಳೆಗಾರರು ಸಂತಸಗೊಂಡಿದ್ದಾರೆ. ಹೊಳೆನರಸೀಪುರ ತಾಲೂಕಲ್ಲಿ ಗೊನೆ ಸಮೇತ ನೂರಾರು ಬಾಳೆಗಿಡಗಳು ನೆಲಕ್ಕುರುಳಿವೆ.

ಸಕಲೇಶಪುರದಲ್ಲಿ ಸುರಿದ ಮಳೆಗೆ ಇಟ್ಟಿಗೆ ಉದ್ಯಮಿಗಳು ಕಂಗಾಲಾಗಿದ್ದಾರೆ. ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಶಿವಪುರ ಗ್ರಾಮದಲ್ಲಿ ಆಲಿಕಲ್ಲು ಸಹಿತ ಬಿರುಗಾಳಿ ಮಳೆಗೆ ಕಟಾವಿಗೆ ಬಂದಿದ್ದ ಬಾಳೆ ಬೆಳೆ ನೆಲಕಚ್ಚಿದೆ.

ಕೊಡಗು ಜಿಲ್ಲೆ ವಿರಾಜಪೇಟೆ, ಬೇಗೂರು, ಕೊಡಗರಹಳ್ಳಿ ಮತ್ತಿಕಾಡು ಸೇರಿ ಹಲವು ಕಡೆ ಗುಡುಗು ಸಹಿತ ಮಳೆಯಾಗಿದೆ.

ಸಂಡೂರಿನಲ್ಲಿ ವರ್ಷದ ಮೊದಲ ಮಳೆಯ ಸಿಂಚನವಾಗಿದೆ. ಬೀದರ್, ಕೋಲಾರ, ಕೊಪ್ಪಳ ಸೇರಿ ಹಲವು ಕಡೆ ಮಳೆಯಾಗಿದೆ.

ರಾಜ್ಯದಲ್ಲಿ ಇನ್ನೂ ಎರಡು ದಿನ ಮುಂಗಾರುಪೂರ್ವ ಮಳೆಯ ಅಬ್ಬರ ಮುಂದುವರೆಯಲಿದೆ ಎಂದು ಹವಾಮಾನ ಇಲ್ಲದೆ ಮುನ್ಸೂಚನೆ ನೀಡಿದೆ. ಬೆಂಗಳೂರು ಸೇರಿ ದಕ್ಷಿಣ ಒಳನಾಡಿನ ವಿವಿಧೆಡೆ ಕಳೆದ ಎರಡು ದಿನ ಮುಂಗಾರು ಪೂರ್ವ ಮಳೆ ಅಬ್ಬರಿಸಿದೆ. ಸೋಮವಾರ ಮತ್ತು ಮಂಗಳವಾರ ಕೂಡ ಮಳೆಯ ಅಬ್ಬರ ಮುಂದುವರೆಯಲಿದೆ.

ಶಿವಮೊಗ್ಗ, ದಾವಣಗೆರೆ ಹೊರತುಪಡಿಸಿ ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಮಳೆ ಆಗಲಿದೆ. ಕಲಬುರಗಿ, ರಾಯಚೂರು, ಯಾದಗಿರಿ, ಕೊಪ್ಪಳ, ಗದಗ, ಬೀದರ್, ಕರಾವಳಿಯ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆಯಾಗಲಿದೆ. ಮಳೆಯ ಜೊತೆಗೆ ಪ್ರಬಲವಾದ ಗಾಳಿ, ಗುಡಗು, ಮಿಂಚನ ಆರ್ಭಟ ಕೂಡ ಇರಲಿದೆ ಎಂದು ಹೇಳಲಾಗಿದೆ.

Spread positive news

Leave a Reply

Your email address will not be published. Required fields are marked *