BIG NEWS: ಸಾರ್ವಜನಿಕರೇ ಗುಡುಗು-ಸಿಡಿಲಿನಲ್ಲಿ ತಪ್ಪದೇ ಈ ಸೂಚನೆಗಳನ್ನು ಪಾಲಿಸಿ.!

ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರವು ಗುಡುಗು ಮತ್ತು ಸಿಡಿಲು ಬಡಿತದಿಂದ ಉಂಟಾಗುವ ಪ್ರತಿಕೂಲ ಪರಿಣಾಮಗಳನ್ನು ತಗ್ಗಿಸಲು ಪ್ರಾಧಿಕಾರದಿಂದ ಗುಡುಗು ಮತ್ತು ಸಿಡಿಲು ಬಡಿತ ಪ್ರತಿಕೂಲ ಪರಿಣಾಮಗಳನ್ನು ತಗ್ಗಿಸಲು ಮಾರ್ಗಸೂಚಿಗಳನ್ನು ಹೊರಡಿಸಿದ್ದು, ಸಾರ್ವಜನಿಕರು ಅವುಗಳನ್ನು ಕಡ್ಡಾಯವಾಗಿ ಪಾಲಿಸಿ, ನೈಸರ್ಗಿಕ ಅವಘಡಗಳಿಂದ ಆಗುವ ಹಾನಿಯಿಂದಾಗಿ ತಪ್ಪಿಸಿಕೊಳ್ಳಬಹುದಾಗಿದೆ. ಕರ್ನಾಟಕದ ಹಲವು ಭಾಗಗಳಲ್ಲಿ ಗುಡುಗು ಸಿಡಿಲು ಸಾಮಾನ್ಯವಾಗಿ ಮುಂಗಾರು ಪೂರ್ವದಲ್ಲಿ ಹಾಗೂ ಮುಂಗಾರಿನಲ್ಲಿ ಕಾಣಿಸಿಕೊಳ್ಳುತ್ತದೆ. ಸಿಡಿಲು ಸಾಮಾನ್ಯವಾಗಿ ಮಧ್ಯಾಹ್ನ ಅಥವಾ ಸಂಜೆ ಸಂಭವಿಸುವ ಸಾಧ್ಯತೆ ಹೆಚ್ಚಾಗಿರುತ್ತದೆ. ಗುಡುಗು ಸಿಡಿಲಿನಿಂದಾಗುವ ಅಪಾಯಗಳನ್ನು ತಗ್ಗಿಸಲು ಈ ಕೆಳಕಂಡ ಕ್ರಮಗಳನ್ನು ಕೈಗೊಳ್ಳುವಂತೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರವು ಸೂಚಿಸಿದೆ.

ಸಾರ್ವಜನಿಕರಿಗೆ ಗುಡುಗು ಮತ್ತು ಸಿಡಿಲಿನಿಂದ ಸಾರ್ವಜನಿಕರು ಮತ್ತು ಜಾನುವಾರು ಪ್ರಾಣಹಾನಿಗಳನ್ನು ತಪ್ಪಿಸಲು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಮುಂಜಾಗ್ರತಾ ಕ್ರಮವಾಗಿ ಈ ಕೆಳಕಂಡ ಸಲಹೆಗಳನ್ನು ನೀಡಿದೆ

ಗುಡುಗು ಮತ್ತು ಸಿಡಿಲು ಸಂದರ್ಭದಲ್ಲಿ ಪಾಲಿಸಬೇಕಾದ ಸಲಹೆ ಸೂಚನೆಗಳು

ಪ್ರತಿಕೂಲ ಹವಾಮಾನದ ಸಮಯದಲ್ಲಿ ವಿಶೇಷವಾಗಿ ಕೃಷಿ ಕ್ಷೇತ್ರದಲ್ಲಿ ಕೆಲಸ ಮಾಡಲು, ಜಾನುವಾರುಗಳನ್ನು ಮೇಯಿಸಲು ಮೀನುಗಾರಿಕೆ ಮತ್ತು ದೋಣಿಗಳನ್ನು ಓಡಿಸಲು ಅಥವಾ ಸಾಮಾನ್ಯ ಪ್ರಯಾಣಕ್ಕಾಗಿ ಮನೆಯಿಂದ ಹೊರಗೆ ಹೋಗುವುದು ಸೂಕ್ತವಲ್ಲ.

ಗುಡುಗು-ಸಿಡಿಲಿನ ಸಂದರ್ಭದಲ್ಲಿ ಲೋಹದ ತಗಡನ್ನು ಹೊದಿಸಿರುವ ಮನೆಗಳು ಸುರಕ್ಷಿತವಲ್ಲ, ಸುರಕ್ಷಿತವಾದ ಕಟ್ಟಡಗಳಲ್ಲಿ ಅಶ್ರಯ ಪಡೆಯುವುದು.

ಬೆಟ್ಟ ಗುಡ್ಡಗಳಂತಹ ಎತ್ತರದ ಪ್ರದೇಶಗಳಿಂದ ಕೆಳಗೆ ಇಳಿದು ಆಶ್ರಯ ಪಡೆಯಬಹುದು.

ನೀರಿನ ಮೂಲಗಳಾದ ಕೆರೆ, ತೋಡು ಮತ್ತು ನದಿಗಳಿಂದ ದೂರವಿರುವುದು.

ವಿದ್ಯುತ್ ಉಪಕರಣ ಹಾಗೂ ವಿದ್ಯುತ್ ಸರಬರಾಜು ಮಾರ್ಗ. ದೂರವಾಣಿ ಸಂಪರ್ಕ, ಮೊಬೈಲ್ ಟವರ್, ಪವನ ವಿದ್ಯುತ್ ಗೋಪುರ ಹಾಗೂ ರೈಲು ಹಳಿಗಳಿಂದ ದೂರವಿರುವುದು.

ವಾಹನ ಚಾಲನೆಯಲ್ಲಿದ್ದರೆ ತಕ್ಷಣವೇ ವಾಹನ ನಿಲ್ಲಿಸಿ ವಾಹನದಲ್ಲಿಯೇ ಆಶ್ರಯ ಪಡೆಯುವುದು.

ಗುಡುಗು ಸಿಡಿಲಿನ ಸಮಯದಲ್ಲಿ ಗುಂಪಿನಲ್ಲಿದ್ದರೆ, ಅಪಾಯವನ್ನು ಕಡಿಮೆ ಮಾಡಲು ಸಾಕಷ್ಟು ಅಂತರವನ್ನು ಕಾಯ್ದುಕೊಳ್ಳುವುದು.

ಗುಡುಗು ಮತ್ತು ಸಿಡಿಲು ಸಂದರ್ಭದಲ್ಲಿ ಹೊರಾಂಗಣದಲ್ಲಿ ಕೆಲಸ ಮಾಡುತ್ತಿದ್ದರೆ ಮತ್ತು ಸುರಕ್ಷಿತ ಸ್ಥಳದಲ್ಲಿ ಆಶ್ರಯ ಪಡೆಯಲು ಸಾಕಷ್ಟು ಸಮಯವಿಲ್ಲದಿದ್ದರೆ, ಎರಡು ಕಾಲುಗಳನ್ನು ಜೋಡಿಸಿ ಮಂಡಿಯೂರಿ ಕುಳಿತುಕೊಂಡು ತಲೆಯನ್ನು ಬಗ್ಗಿಸಿ ಕಿವಿಗಳನ್ನು ಮುಚ್ಚಿಕೊಳ್ಳುವುದು.

ಹೊರಗೆ ಹೋಗುವ ಅನಿವಾರ್ಯವಿದ್ದಲ್ಲಿ ಹವಾಮಾನ ಮುನ್ಸೂಚನೆ ಹಾಗೂ ಮುನ್ನಚ್ಚರಿಕೆಗಳಿಗಾಗಿ SACHET APP, DAMINI APP, SIDILU APP ಹಾಗೂ Common Alerting Protocol (CAP) ಮುಖಾಂತರ ಬರುವ ಮೆಸೇಜ್‌ಗಳನ್ನು ಗಮನಿಸಿಸುವುದು.

ವಿದ್ಯುತ್ ಅಥವಾ ಟೆಲಿಫೋನ್ ಕಂಬಗಳು ಅಥವಾ ಮರಗಳ ಕೆಳಗೆ ಅಶ್ರಯ ಪಡೆಯಬಾರದು. ಇವು ಮಿಂಚನ್ನು ಆಕರ್ಷಿಸುತ್ತವೆ.

ಲೋಹದ ವಸ್ತುಗಳನ್ನು ಬಳಸಬಾರದು ಮತ್ತು ಬೈಕುಗಳು, ವಿದ್ಯುತ್ ಅಥವಾ ದೂರವಾಣಿ ಕಂಬಗಳು. ತಂತಿ ಬೇಲಿ, ಯಂತ್ರಗಳು ಇತ್ಯಾದಿಗಳಿಂದ ದೂರವಿರುವುದು.

ಕಬ್ಬಿಣದ ಸರಳುಗಳಿಂದ ಕೂಡಿದ ಕೊಡೆ/ಛತ್ರಿಗಳನ್ನು ಬಳಸಬಾರದು.

ಗುಡುಗು ಸಿಡಿಲಿನ ಸಮಯದಲ್ಲಿ ಕಿಟಕಿ, ಬಾಗಿಲುಗಳನ್ನು ಮುಚ್ಚಿ ಮತ್ತು ವಿದ್ಯುತ್ ಶಕ್ತಿ ಸಂಪರ್ಕದಿಂದ ದೂರವಿರುವುದು.

ಮಕ್ಕಳು, ವಯೋವೃದ್ಧರು ಹಾಗೂ ಜಾನುವಾರುಗಳನ್ನು ಸುರಕ್ಷಿತ ಸ್ಥಳಗಳಲ್ಲಿ ಇರುವಂತೆ ಗಮನಹರಿಸುವುದು.

ಹಾರುವ ಮತ್ತು ಅಪಘಾತಕ್ಕೆ ಕಾರಣವಾಗಬಹುದಾದ ಮರದ ಕಟ್ಟಿಗೆ ಅಥವಾ ಇತರೆ ಯಾವುದೇ ಅವಶೇಷಗಳನ್ನು ತೆಗೆದುಹಾಕುವುದು.

ವಿದ್ಯುತ್ ಸಂಪರ್ಕ ಹೊಂದಿರುವ ದೂರವಾಣಿಯನ್ನು ಬಳಸಬಾರದು.

ಗುಡುಗು ಸಿಡಿಲಿನ ಮುನ್ಸೂಚನೆ ಅಥವಾ ಮುನ್ನೆಚ್ಚರಿಕೆ ಇದ್ದಲ್ಲಿ ಪ್ರಯಾಣವನ್ನು ಮುಂದೂಡುವುದು.

ಗುಡುಗು ಸಿಡಿಲಿನ ಸಮಯದಲ್ಲಿ ಮೋಟರ್ ಸೈಕಲ್ ಅಥವಾ ಇನ್ನಿತರೆ ಯಾವುದೇ ತೆರೆದ ವಾಹನಗಳ ಸಂಚಾರವನ್ನು ಮಾಡದಿರುವುದು.

ಆಟದ ಮೈದಾನ, ಉದ್ಯಾನವನಗಳು ಈಜುಕೊಳ ಮತ್ತು ಕಡಲ ತೀರಗಳಿಗೆ ಹೋಗುವುದನ್ನು ತಪ್ಪಿಸುವುದು.

ದೋಣಿ ವಿಹಾರ ಅಥವಾ ಈಜುತ್ತಿದ್ದರೆ ಸಾಧ್ಯವಾದಷ್ಟು ಸುರಕ್ಷಿತ ಸ್ಥಳದಲ್ಲಿ ಆಶ್ರಯ ಪಡೆಯುವುದು.

ಸಿಡಿಲಿನ ಸಂದರ್ಭದಲ್ಲಿ ವಾಹನ ಕಿಟಕಿಗಳನ್ನು ಮುಚ್ಚಿ. ವಾಹನದ ಒಳಗೆ ಇರುವುದು.

ಅರಣ್ಯ ಪ್ರದೇಶದಿಂದ ಹಾಗೂ ಗಿಡ-ಮರಗಳಿಲ್ಲದ ಸ್ವಚ್ಚ ಪ್ರದೇಶದ ಕಡೆಗೆ ಚಲಿಸುವುದು, ಕೆಲವು ಸಲ ಮಿಂಚಿನ ಹೊಡೆತದಿಂದಾಗಿ ಕಾಡಿಚ್ಯು ಸಂಭವಿಸುವ ಸಾಧ್ಯತೆ ಇರುತ್ತದೆ.

ಕಾರವಾರದ ಜನತೆಗೆ ಮಾತ್ರ
ಸಾರ್ವಜನಿಕರು ಯಾವುದೇ ತುರ್ತು ಪರಿಸ್ಥಿತಿಯಲ್ಲಿ ತಕ್ಷಣವೇ ಜಿಲ್ಲಾಡಳಿತದ ಜಿಲ್ಲಾ ತುರ್ತು ಕಾರ್ಯಾಚರಣಾ ಕೇಂದ್ರದ ಸಂಖ್ಯೆ: 08382-229857, Whats App ಸಂಖ್ಯೆ: 9483511015 ಗೆ ಸಂಪರ್ಕಿಸಿ ತಮ್ಮ ಅಹವಾಲುಗಳನ್ನು ದಾಖಲಿಸಬಹುದಾಗಿ ಈ ಮೂಲಕ ತಿಳಿಸಿದೆ.

ಜಿಲ್ಲಾಧಿಕಾರಿಗಳು ಹಾಗೂ ಅಧ್ಯಕ್ಷರು

ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ, ಉತ್ತರ ಕನ್ನಡ ಜಿಲ್ಲೆ, ಕಾರವಾರ

ಪ್ರತಿಯನ್ನು- ಸಹಾಯಕ ನಿರ್ದೇಶಕರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಕಾರವಾರ ರವರಿಗೆ ಸರ್ಕಾರಕ್ಕೆ ವೆಚ್ಚ ಬಾರದ ರೀತಿಯಲ್ಲಿ ಸುದ್ದಿಯೆಂದು ಜಿಲ್ಲೆಯಲ್ಲಿ ಪ್ರಸಾರವಾಗುವ ದಿನ ಪತ್ರಿಕೆಗಳಲ್ಲಿ ಪ್ರಕಟಿಸುವ ಕುರಿತು ರವಾನಿಸಿದೆ.

ಗುಡುಗು ಮತ್ತು ಸಿಡಿಲಿನ ಅಪಾಯಗಳನ್ನು ತಗ್ಗಿಸಲು ಅಗತ್ಯವಿರುವ ಉಪಶಮನ ಮತ್ತು ಪೂರ್ವ ಸಿದ್ಧತೆ ಕ್ರಮಗಳು

•ಸಾಮಾನ್ಯವಾಗಿ ಸಿಡಿಲಿಗೆ ತುತ್ತಾಗುವಂತಹ ಸ್ಥಳಗಳನ್ನು ಗುರುತಿಸಿ ಸಾರ್ವಜನಿಕ ಆಸ್ತಿ /ಮೂಲಸೌಕರ್ಯಗಳ ರಕ್ಷಣೆಗೆ ಕ್ರಮ ವಹಿಸುವುದು.

•ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ (KSNMDC) ಹಾಗೂ Indian Meteorological Department (IMD) ನಿಂದ ನೀಡುವ ಗುಡುಗು ಸಿಡಿಲಿನ ಮುನ್ಸೂಚನೆಗಳನ್ನು ಸ್ಥಳೀಯ ಮಟ್ಟಕ್ಕೆ ತಲುಪಿಸಲು ಸಾಮಾಜಿಕ ಮತ್ತು ಇತರ ಸಮೂಹ ಮಾಧ್ಯಮಗಳ ಮೂಲಕ ಸಾರ್ವಜನಿಕರಿಗೆ ನಿರ್ದಿಷ್ಟ ಮುನ್ನೆಚ್ಚರಿಕೆಯನ್ನು Common Alerting Protocol (CAP)ನ ಮೂಲಕ ಪ್ರಸಾರ ಮಾಡುವುದು ಹಾಗೂ ಈ ಕುರಿತು ಅರಿವು ಮೂಡಿಸುವುದು ರೈತ ಸಂಪರ್ಕ ಕೇಂದ್ರಗಳು, ಪ್ರಾಥಮಿಕ ಆರೋಗ್ಯು ಕೇಂದ್ರಗಳು, ಪ್ರಾಥಮಿಕ ವಶು ವೈದ್ಯಕೀಯ ಚಿಕಿತ್ಸಾ ಕೇಂದ್ರಗಳು ಹಾಗೂ ಗ್ರಾಮ ಪಂಚಾಯಿತಿಗಳ ಮೂಲಕವೂ ಸಹ ಮಾಹಿತಿ ನೀಡುವುದು ಹಾಗೂ ಜಾಗೃತಿ ಮೂಡಿಸುವುದು.

•ಸ್ಥಳೀಯ ಜನರನ್ನು ಎಚ್ಚರಿಸಲು ಹಾಗೂ ಗುಡುಗು ಮತ್ತು ಸಿಡಿಲಿನ ಅಪಾಯಗಳನ್ನು ತಗಿಸಲು ಸಲಹಾ ಸೂಚನೆಗಳನ್ನು ನೀಡಲು ಶಾಲಾ-ಕಾಲೇಜುಗಳು, ರೈತ ಸಂಪರ್ಕ ಕೇಂದ್ರಗಳು, ಪ್ರಾಥಮಿಕ ಆರೋಗ್ಯ ಕೇಂದ್ರಗಳು, ಪ್ರಾಥಮಿಕ ಪಶು ವೈದ್ಯಕೀಯ ಚಿಕಿತ್ಸಾ ಕೇಂದ್ರಗಳು ಹಾಗೂ ಸಮುದಾಯ ಕೇಂದ್ರಗಳಲ್ಲಿ  ತಿಳುವಳಿಕೆ ಹಾಗೂ ಮಾಹಿತಿ ನೀಡುವುದು.

•ಗುಡುಗು-ಸಿಡಿಲು ಸಂದರ್ಭಗಳಲ್ಲಿ ಮಾಡಬೇಕಾದ ಮತ್ತು ಮಾಡಬಾರದ ಕೆಲಸಗಳನ್ನು ಸಾಮಾಜಿಕ ಮಾಧ್ಯಮಗಳ ಮೂಲಕ ಪ್ರಸರಣ ಮಾಡುವುದು ಹಾಗೂ ಮಾಹಿತಿ ಶಿಕ್ಷಣ ಸಂವಹನ (ಐಇಸಿ) ಮೂಲಕ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದು.

*ಗುಡುಗು ಮತ್ತು ಸಿಡಿಲು ಸಂದರ್ಭದಲ್ಲಿ ಪಾಲಿಸಬೇಕಾದ ಸಲಹೆ ಸೂಚನೆಗಳು*

•ಹೊರಗೆ ಹೋಗುವ ಅನಿವಾರ್ಯತೆ ಇದ್ದಲ್ಲಿ ಹವಾಮಾನ ಮುನ್ಸೂಚನೆ ಹಾಗೂ Common Alerting Protocol (CAP) 3 ಮುಖಾಂತರ ಬರುವ
ಸಂದೆಗಳನ್ನು ಮೊಬೈಲ್‌ನಲ್ಲಿ ಗಮನಿಸಿಸುವುದು.
ಪ್ರತಿಕೂಲ ಹವಾಮಾನದ ಸಮಯದಲ್ಲಿ ವಿಶೇಷವಾಗಿ ಕೃಷಿ ಕ್ಷೇತ್ರದಲ್ಲಿ ಕೆಲಸ ಮಾಡಲು, ಜಾನುವಾರುಗಳನ್ನು ಮೇಯಿಸಲು ಮೀನುಗಾರಿಕೆ ಮತ್ತು ದೋಣಿಗಳನ್ನು ಓಡಿಸಲು ಅಥವಾ ಸಾಮಾನ್ಯ ಪ್ರಯಾಣದಲ್ಲಿ  ಮನೆಯಿಂದ ಹೊರಗೆ ಹೋಗದಿರುವುದು.
ಗುಡುಗು-ಸಿಡಿಲಿನ ಸಮಯದಲ್ಲಿ  ಲೊಹದ ತಗಡನ್ನು ಹೊದಿಸಿರುವ ಮನೆಗಳು ಸುರಕ್ಷಿತವಲ್ಲ, ಸುರಕ್ಷಿತವಾದ ಕಟ್ಟಡಗಳಲ್ಲಿ ಆಶ್ರಯ ಪಡೆಯುವುದು.

•ಬೆಟ್ಟಗಳು, ಪರ್ವತ ಶ್ರೇಣಿಗಳು ಅಥವಾ ಶಿಖರಗಳಂತಹ ಎತ್ತರದ ಪ್ರದೇಶಗಳಿಂದ ಕೆಳಗೆ ಇಳಿದು ಪ್ರವಾಹ ಬರದಂತಹ ತಗ್ಗು ಪ್ರದೇಶವನ್ನು ಖಚಿತಪಡಿಸಿ ಆಶ್ರಯ ಪಡೆಯುವುದು.

• ನೀರಿನ ಮೂಲಗಳಾದ ಕೆರೆ ಮತ್ತು ನದಿಗಳಿಂದ ದೂರವಿರುವುದು.

• ವಿದ್ಯುತ್‌ ಉಪಕರಣ ಹಾಗೂ ವಿದ್ಯುತ್ ಸರಬರಾಜು ಮಾರ್ಗ, ದೂರವಾಣಿ ಸಂಪರ್ಕ, ಮೊಬೈಲ್ ಟವರ್,ಪವನ ವಿದ್ಯುತ್ ಗೋಪುರ ಹಾಗೂ ರೈಲು ಹಳಿಗಳಿಂದ ದೂರವಿರುವುದು.

• ವಾಹನ ಚಾಲನೆಯಲ್ಲಿದ್ದರೆ ತಕ್ಷಣವೇ ವಾಹನ ನಿಲ್ಲಿಸಿ ವಾಹನದಲ್ಲಿಯೇ ಆಶ್ರಯ  ಪಡೆಯುವುದು.

•ಗುಡುಗು ಸಿಡಿಲಿನ ಸಮಯದಲ್ಲಿ ಗುಂಪಿನಲ್ಲಿದ್ದರೆ ಅಪಾಯವನ್ನು ಕಡಿಮೆ ಮಾಡಲು ಸಾಕಷ್ಟು ಅಂತರವನ್ನು ಕಾಯ್ದುಕೊಳ್ಳುಬೇಕು.

•ಗುಡುಗು ಮತ್ತು ಸಿಡಿಲು ಸಂದರ್ಭದಲ್ಲಿ ಹೊರಾಂಗಣದಲ್ಲಿ ಕೆಲಸ ಮಾಡುತ್ತಿದ್ದರೆ ಮತ್ತು ಸುರಕ್ಷಿತ ಸ್ಥಳದಲ್ಲಿ ಆಶ್ರಯ ಪಡೆಯಲು ಸಾಕಷ್ಟು ಸಮಯವಿಲ್ಲದಿದ್ದರೆ, ಎರಡು ಕಾಲುಗಳನ್ನು ಜೋಡಿಸಿ ಮಂಡಿಯೂರಿ ಕುಳಿತುಕೊಂಡು ತಲೆಯನ್ನು ಬನ್ನಿಸಿ ಕಿವಿಗಳನ್ನು ಮುಚ್ಚಿಕೊಳ್ಳುವುದು.

•ವಿದ್ಯುತ್ ಅಥವಾ ಟೆಲಿಫೋನ್ ಕಂಬಗಳು ಅಥವಾ ಮರಗಳ ಕೆಳಗೆ ಆಶ್ರಯ ಪಡೆಯಬಾರದು. ಇವು ಮಿಂಚನ್ನು ಆಕರ್ಷಿಸುತ್ತವೆ.

•ಅರಣ್ಯ ಪ್ರದೇಶದಲ್ಲಿದ್ದರೆ ಸಣ್ಣ/ಚಿಕ್ಕ ಮರಗಳ ಕೆಳಗೆ ಆಶ್ರಯ ಪಡೆಯುವುದು.

• ಲೋಹದ ವಸ್ತುಗಳನ್ನು ಬಳಸಬಾರದು ಮತ್ತು ಬೈಕುಗಳು, ವಿದ್ಯುತ್ ಅಥವಾ ದೂರವಾಣಿ ಕಂಬಗಳು, ತಂತಿ ಬೇಲಿ, ಯಂತ್ರಗಳು ಇತ್ಯಾದಿಗಳಿಂದ ದೂರವಿರುವುದು.

•ಸಿಡಿಲು ಸಂದರ್ಭದಲ್ಲಿ ಮೊಬೈಲ್ ಫೋನ್ ಗಳನ್ನು ಬಳಸಬಾರದು.

•ಕಬ್ಬಿಣದ ಸರಳುಗಳಿಂದ ಕೂಡಿದ ಛತ್ರಿಗಳನ್ನು ಬಳಸಬಾರದು.

•ಗುಡುಗು ಸಿಡಿಲಿನ ಸಮಯದಲ್ಲಿ ಕಿಟಕಿ, ಬಾಗಿಲುಗಳನ್ನು ಮುಚ್ಚಿ ಬೆಂಕಿ ಮತ್ತು ವಿದ್ಯುತ್ ಶಕ್ತಿ ಸಂಪರ್ಕದಿಂದ ದೂರವಿರುವುದು.

•ಮಕ್ಕಳು, ವಯೋವೃದ್ಧರು ಹಾಗೂ ಜಾನುವಾರುಗಳನ್ನು ಸುರಕ್ಷಿತ ಸ್ಥಳಗಳಲ್ಲಿ ಇರುವಂತೆ ಗಮನಹರಿಸುವುದು.

•ಹಾರುವ ಮತ್ತು ಅಪಘಾತಕ್ಕೆ ಕಾರಣವಾಗಬಹುದಾದ ಮರದ ಕಟ್ಟಿಗೆ ಅಥವಾ ಇತರೆ ಯಾವುದೇ ಅವಶೇಷಗಳನ್ನು ತೆಗೆದುಹಾಕುವುದು.

•ಸಿಡಿಲು ಸಂದರ್ಭದಲ್ಲಿ ಕಟ್ಟಡದ ಕೊಳಾಯಿ ಮತ್ತು ಲೋಹದ ಕೊಳವೆಗಳ ಮೂಲಕ ಹರಿಯುವ ಸಾಧ್ಯತೆ ಇರುವುದರಿಂದ ಸಿಡಿಲು ಉಂಟಾಗುವ ಸಂದರ್ಭದಲ್ಲಿ ಸ್ನಾನ ಅಥವಾ ಶವರ್ ತೆಗೆದುಕೊಳ್ಳಬಾರದು ಪಾತ್ರೆಗಳನ್ನು ತೊಳೆಯಬಾರದು ಬಟ್ಟೆ ಹೊಗೆಯಬಾರದು.

•ವಿದ್ಯುತ್‌ ಸಂಪರ್ಕ ಹೊಂದಿರುವ ದೂರವಾಣಿಯನ್ನು ಬಳಸಬಾರದು. ಗುಡುಗು – ಸಿಡಿಲಿನ ಮುನ್ಸೂಚನೆ ಅಥವಾ ಮುನ್ನೆಚ್ಚರಿಕೆ ಇದ್ದಲ್ಲಿ ಪ್ರಯಾಣವನ್ನು ಮುಂದೂಡುವುದು.

•ಗುಡುಗು ಸಿಡಿಲಿನ ಸಮಯದಲ್ಲಿ ಮೋಟರ್ ಸೈಕಲ್ ಅಥವಾ ಇನ್ನಿತರೆ ಯಾವುದೇ ತೆರೆದ ವಾಹನಗಳ ಸಂಚಾರವನ್ನು ಮಾಡದಿರುವುದು.

•ಆಟದ ಮೈದಾನ, ಉದ್ಯಾನವನಗಳು ಈಜುಕೊಳ ಮತ್ತು ಕಡಲ ತೀರಗಳಿಗೆ ಹೋಗುವುದನ್ನು ತಪ್ಪಿಸಬೇಕು.

•ದೋಣಿ ವಿಹಾರ ಅಥವಾ ಈಜುತ್ತಿದ್ದರೆ ಸಾಧ್ಯವಾದಷ್ಟು ಸುರಕ್ಷಿತ ಸ್ಥಳದಲ್ಲಿ ಆಶ್ರಯ ಪಡೆಯಬೇಕು.

•ಸಿಡಿಲಿನ ಸಂದರ್ಭದಲ್ಲಿ ವಾಹನ ಕಿಟಕಿಗಳನ್ನು ಮುಚ್ಚಿ ವಾಹನದ ಒಳಗೆ ಇರುವುದು.

•ಅರಣ್ಯ ಪ್ರದೇಶದಿಂದ ಗಿಡ ಗಡ್ಡೆಗಳಿಲ್ಲದೆ ಸ್ವಚ್ಛ ಪ್ರದೇಶದ ಕಡೆಗೆ ಚಲಿಸುವುದು, ಮಿಂಚಿನ ಹೊಡೆತದಿಂದಾಗಿ ಕಾಡಿಚ್ಚು ಸಂಭವಿಸುವ ಸಾಧ್ಯತೆಯಿದೆ.

Spread positive news

Leave a Reply

Your email address will not be published. Required fields are marked *