ಇಂದು ಕೂಡ ರಾಜ್ಯಾದ್ಯಂತ ಮಳೆರಾಯ ಅಬ್ಬರಿಸಿದ್ದಾನೆ. ಅದರಲ್ಲೂ ಸಿಲಿಕಾನ್ ಸಿಟಿಯಲ್ಲಿ ಮಧ್ಯಾಹ್ನದ ವೇಳೆಗೆ ವಾತಾವರಣ ತಣ್ಣಗಾಗಿತ್ತು. ಸಂಜೆ ವೇಳೆಗೆ ಅಂದ್ರೆ ನಾಲ್ಕೈದು ಗಂಟೆಗೆ ಮಳೆ ಜೋರಾಗಿತ್ತು. ಸಂಜೆಯ ತನಕ ಬೆಂಗಳೂರಿನಲ್ಲಿ ಮಳೆ ಸುರಿದಿದೆ. ಇನ್ನು ಮೂರು ದಿನಗಳ ಕಾಲ ರಾಜ್ಯದಲ್ಲಿ ಮಳೆಯ ಅಬ್ಬರ ಇರಲಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹೀಗಾಗಿ ಹೊರಗೆ ಹೋಗುವವರು ಮುಂಜಾಗ್ರತ ಕ್ರಮ ತೆಗೆದುಕೊಳ್ಳುವುದು ಉತ್ತಮ.
ಹೊರಗೆ ಹೋಗುವಾಗ ಛತ್ರಿ ತೆಗೆದುಕೊಂಡು ಹೋಗುವುದೋ, ರೇನ್ ಕೋಟ್ ತೆಗೆದುಕೊಂಡು ಹೋಗುವ ಅಭ್ಯಾಸ ಮಾಡಿಕೊಳ್ಳಿ. ಇನ್ನು ಇಂದು ಬೆಂಗಳೂರು, ಮೈಸೂರು, ದಾವಣಗೆರೆ, ಬಳ್ಳಾರಿ, ವಿಜಯನಗರ ಭಾಗದಲ್ಲಿ ಗುಡುಗು ಸಹಿತ ಜೋರು ಮಳೆಯಾಗುವ ಸಾಧ್ಯತೆ ಇದೆ. ರಾತ್ರಿ ವೇಳೆಗೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಸೂಚನೆ ನೀಡಿದೆ. ಅದರಲ್ಲೂ ಈ ಮಳೆಯ ಸಂದರ್ಭದಲ್ಲಿ ವಾಹನ ಸವಾರರು, ನಡೆದುಕೊಂಡು ಬರುವ ಸಾರ್ವಜನಿಕರು ಬಹಳ ಎಚ್ಚರಿಕೆಯಿಂದ ಇರಬೇಕು.
ಯಾಕಂದ್ರೆ ಬಿಸಿಲಿನ ಬೇಗೆ ಮರ ಗಿಡಗಳೆಲ್ಲ ಒಣಗಿ ನಿಂತಿರುತ್ತವೆ. ಇದ್ದಕ್ಕಿದ್ದ ಹಾಗೆ ಮಳೆ ಬಂದ ಕಾರಣ, ಮರದ ಕೆಳಗೆ ಹೋಗಿ ನಿಲ್ಲಬೇಡಿ. ಮರದ ಕೊಂಬೆಗಳು ಬೀಳುವ ಸಾಧ್ಯತೆ ಇರುತ್ತದೆ. ಇನ್ನು ಇದೇ ರೀತಿ ರಾಜ್ಯಾದ್ಯಂತ ಮೂರು ದಿನ ಅಂದ್ರೆ ಏಪ್ರಿಲ್ 17ರವರೆಗೂ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಸೂಚನೆ ನೀಡಿದೆ. ಗಾಳಿಯ ವೇಗವೂ ಗಂಟೆಗೆ 30-40 ಕಿಲೋಮೀಟರ್ ತಲುಪುವ ಸಾಧ್ಯತೆ ಇದೆ. ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನಲ್ಲಿ ಅಲ್ಲಲ್ಲಿ ಚದುರಿದ ಮಳೆಯಾಗುವ ಸಾಧ್ಯತೆ ಇದೆ.
ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆ ಮುಂದುವರೆದಿದ್ದು, ಇನ್ನೂ 4-5 ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ರಾಜ್ಯಾದ್ಯಂತ ಪೂರ್ವ ಮುಂಗಾರು ಮಳೆ ಉತ್ತಮವಾಗಿದೆ. ಅದರಲ್ಲೂ ದಕ್ಷಿಣ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುತ್ತಿದೆ. ಉತ್ತರ ಒಳನಾಡಿ ನಲ್ಲಿ ಸಾಧಾರಣ ಮಳೆಯಾಗಲಿದೆ. ಸೋಮವಾರದಿಂದ ಸ್ವಲ್ಪಮಟ್ಟಿಗೆ ಮಳೆ ಪ್ರಮಾಣ ಕಡಿಮೆಯಾಗಲಿದೆ.
ಗುರುವಾರದಿಂದ ಶನಿವಾರವರೆಗೆ ಹೆಚ್ಚಿನ ಮಳೆ ಸಾಧ್ಯತೆ ಇದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿತ್ರದುರ್ಗ, ಕೋಲಾರ, ಚಾಮರಾಜನಗರ, ಮೈಸೂರು ಜಿಲ್ಲೆಗಳಲ್ಲಿ ಏ.17 ರವರೆಗೆ ರಾಜ್ಯದ ಹಲವು ಕಡೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ , ಬೆಳಗಾವಿ, ಧಾರವಾಡ, ಹಾವೇರಿ, ಗದಗ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಚಿತ್ರದುರ್ಗ ಮತ್ತು ದಾವಣಗೆರೆ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಇದಲ್ಲದೆ ಉಡುಪಿ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲೂ ಭಾರೀ ಮಳೆಯಾಗಿತ್ತು. ಇದರ ಹೊರತಾಗಿ ಬೆಂಗಳೂರು, ಮೈಸೂರಿನಲ್ಲಿ ಅಲ್ಪ ಪ್ರಮಾಣದ ಮಳೆಯಾಗಿತ್ತು. ಈ ವಾರ ರಾಜ್ಯದ ಕೆಲವು ಜಿಲ್ಲೆಗಳಿಗೆ ಭರ್ಜರಿ ಮಳೆಯಾಗುವ ಸೂಚನೆಯಿದೆ. ವಿಶೇಷವಾಗಿ ದಕ್ಷಿಣ ಕನ್ನಡ, ಕೊಡಗು ಜಿಲ್ಲೆಗಳಿಗೆ ಈ ವಾರವೂ ಭಾರೀ ಮಳೆಯ ಸೂಚನೆಯಿದೆ. ಇಂದು ಕರ್ನಾಟಕದಲ್ಲಿ ಒಂದು ದಿನದ ಮಟ್ಟಿಗೆ ಮಳೆಗೆ ಬಿಡುವು. ಆದರೆ ನಾಳೆಯಿಂದ ಬಹುತೇಕ ಕಡೆ ಮಳೆಯಾಗುವ ಸೂಚನೆಯಿದೆ.
ದಕ್ಷಿಣ ಕನ್ನಡ, ಕೊಡಗಿನಲ್ಲಿ ಮಂಗಳವಾರದಿಂದ ಗುಡುಗು ಸಹಿತ ಮಳೆಯಾಗುವ ಸೂಚನೆಯಿದೆ. ಇನ್ನು, ಚಾಮರಾಜನಗರ, ಕೋಲಾರ, ಮಂಡ್ಯ, ಉತ್ತರ ಕನ್ನಡ ಜಿಲ್ಲೆಗಳಲ್ಲೂ ಈ ವಾರ ಕೆಲವು ದಿನ ಸಣ್ಣ ಮಳೆಯಾಗುವ ಸಾಧ್ಯತೆಯಿದೆ. ಉಳಿದಂತೆ ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಬಹುತೇಕ ಕಡೆ ಈ ವಾರ ಬಿಸಿಲಿನ ತಾಪ ಮುಂದುವರಿಯಲಿದೆ. ಕರ್ನಾಟಕ ಸೇರಿದಂತೆ ಭಾರತದ ದಕ್ಷಿಣ ಕರಾವಳಿ ರಾಜ್ಯಗಳಲ್ಲಿ ಮಳೆ ಆಗುತ್ತಿದೆ.
ಉಳಿದೆ ಉಷ್ಣ ಅಲೆ ಮುಂದುವರಿದಿದೆ. ಸದ್ಯ ಬದಲಾದ ಹವಾಮಾನ ವೈಪರೀತ್ಯವು ಕಳೆದ ಎರಡು ವಾರಗಳಿಂದ ಮುಂದುವರಿದಿದೆ. ಸಮುದ್ರ ಮೇಲ್ಮೈನಲ್ಲಿ ಸಾಕಷ್ಟು ಬದಲಾವಣೆಗಳು ಆಗುತ್ತಿವೆ. ಸುಮಾರು 3 ಕಿಲೋ ಮೀಟರ್ ಎತ್ತರದಲ್ಲಿದ್ದ ಚಂಡಮಾರುತದ ಪರಿಚಲನೆ ಕೊಂಚ ಇಳಿಕೆ ಆಗಿದೆ. ಆದರೆ ವಿಪರ್ಯಾಸವೆಂದರೆ ಒಂದು ಕಡೆ ಉಂಟಾಗಿದ್ದ ವೈಪರಿತ್ಯ ಇದೀಗ ಮೂರು ಕಡೆ ವಿಸ್ತರಣೆ ಆಗಿದೆ. ಹೀಗಾಗಿ ಗುಡುಗು ಮಿಂಚು ಸಹಿತ ವ್ಯಾಪಕ ಮಳೆ ಆಗಲಿದೆ.
ಭಾರತೀಯ ಹವಾಮಾನ ಇಲಾಖೆ ಪ್ರಕಾರ, ಇತ್ತೀಚೆಗೆ ಬಂಗಾಳಕೊಲ್ಲಿ ಭಾಗದಲ್ಲಿ ಹಾಗೂ ಕನ್ಯಾಕುಮಾರಿ ಮತ್ತು ಮಿಳುನಾಡು ಮಧ್ಯೆ ಎದುರಾಗಿದ್ದ ವಾಯುಭಾರ ಕುರಿತ ತೀವ್ರತೆ ಇಳಿಕೆ ಆಗಿದೆ. ಅದರ ನಂತರ ಪಶ್ಚಿಮ ರಾಜಸ್ಥಾನದಿಂದ ಪೂರ್ವ ರಾಜಸ್ಥಾನ, ಪಶ್ಚಿಮ ಮಧ್ಯಪ್ರದೇಶ, ವಿದರ್ಭ, ಮರಾಠವಾಡ, ಕರ್ನಾಟಕದ ಒಳನಾಡು, ತಮಿಳುನಾಡಿನ ಮೂಲಕ ಮನ್ನಾರ್ ಕೊಲ್ಲಿಯವರೆಗೆ ಸರಾಸರಿ ಸಮುದ್ರ ಮಟ್ಟದಿಂದ 0.9 ಕಿ.ಮೀ ಎತ್ತರದಲ್ಲಿ ಒಂದು ಸ್ಟ್ರಪ್ ನಿರ್ಮಾಣವಾಗಿದೆ. ಇದಷ್ಟೇ ಅಲ್ಲದೇ ಆಗ್ನೇಯ ಮಧ್ಯಪ್ರದೇಶದಿಂದ ವಿದರ್ಭದಾದ್ಯಂತ ತೆಲಂಗಾಣದ ಮಧ್ಯ ಭಾಗಗಳಿಗೆ 0.9 ಕಿ.ಮೀ ಎತ್ತರದಲ್ಲಿ ಸುಳಿಗಾಳಿ ಎದ್ದಿದೆ. ಇತ್ತ ಆಂಧ್ರ ಪ್ರದೇಶದ ಕರಾವಳಿ, ಮಧ್ಯ ಭಾಗಗಳು ಮತ್ತು ಯಾನಂ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಮುದ್ರ ಮಟ್ಟದಿಂದ 01 ಕಿಲೋ ಮೀಟರ್ ಎತ್ತರದಲ್ಲಿ ಮೇಲಿನ ವಾಯು ಚಂಡಮಾರುತದ ಪ್ರಸರಣ ಕಡಿಮೆ ಆಗಿದೆ.
ಆದರೆ ಸಣ್ಣ ಪ್ರಮಾಣದ ಗಾಳಿಯ ತೀವ್ರತೆ ಮುಂದುವರಿದಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಈ ವೈಪರೀತ್ಯಗಳು ಸದ್ಯ ಕಡಿಮೆ ತೀವ್ರತೆ ಹೊಂದಿವೆ. ಇವು ದಿನದಿಂದ ದಿನಕ್ಕೆ ತೀವ್ರಗೊಂಡಲ್ಲಿ ಕರ್ನಾಟಕ, ಆಂಧ್ರ, ತೆಲಂಗಾಣ ಯಾವೆಲ್ಲ ಪ್ರದೇಶಗಳಲ್ಲಿ ಹವಾಮಾನ ಬದಲಾವಣೆ ಉಂಟಾಗಿದೆಯೋ ಆ ಪ್ರದೇಶ ಸೇರಿ ಅರ್ಧ ಭಾರತಕ್ಕೆ ಭಾರೀ ಮಳೆ ಸುರಿಸಲಿವೆ. ಪೂರ್ವ ಮುಂಗಾರು ಮಳೆ ಅಬ್ಬರ ಜೋರಾಗಲಿದೆ. ಕಳೆದ ನಾಲ್ಕು ದಿನಗಳಿಂದ ಕರ್ನಾಟಕ, ಕೇರಳ, ತಮಿಳುನಾಡಿನ ಭಾಗದಲ್ಲಿ ಸುರಿಯುತ್ತಿದ್ದ ಮಳೆ ಕಡಿಮೆ ಆಗಿದೆ. ಇದರ ಬೆನ್ನಲ್ಲೆ ಹವಾಮಾನ ಇಲಾಖೆ ಉತ್ತರ ಭಾರತದವರೆಗೆ ಹಲವು ರಾಜ್ಯಗಳಿಗೆ ಒಣಹವೆ, ಉಷ್ಣ ಅಲೆ ಎಚ್ಚರಿಕೆ ನೀಡಿದೆ.
ಇದೀಗ ಸಮುದ್ರ ಮಾತ್ರವಲ್ಲದೇ, ಭೂಮಿ ಮೇಲ್ಮೈನ ವಾತಾವರಣದಲ್ಲೂ ಬದಲಾವಣೆ ಆಗಿದೆ. ಇದರಿಂದ ಆಯಾ ಭಾಗಗಳಲ್ಲಿ ಕೊಂಚ ಮಳೆ ಸಾಧ್ಯತೆ ಇದೆ. ವೈಪರೀತ್ಯ ತೀವ್ರಗೊಂಡರೆ ರೆಡ್ ಅಲರ್ಟ್ ಘೋಷಣೆ? ಈ ಸ್ಟ್ರಫ್, ಸುಳಿಗಾಳಿ ಇನ್ನಷ್ಟು ತೀವ್ರಗೊಂಡರೆ, ಸ್ಪಷ್ಟ ವಾಯುಭಾರಕುಸಿತವಾಗಿ ಬದಲಾಗಲಿವೆ. ನಂತರ ಅದು ತೀವ್ರಗೊಂಡಲ್ಲಿ ಚಂಡಮಾರುತವಾಗಿ ಬದಲಾಗುತ್ತದೆ. ಹೀಗೆ ಹಲವು ಹಂತಗಳ ಬದಲಾವಣೆ ಒಂದೇ ದಿನದಲ್ಲಿ ಆಗಬಹುದು, ಅಥವಾ ಮೂರು ನಾಲ್ಕು ದಿನಗಳು ಹಿಡಿಯಬಹುದು. ಹೀಗೆ ಪ್ರಭಾವ ಹೆಚ್ಚಾದಲ್ಲಿ 20 ಸೆಂಟಿ ಮಿಟರ್ಗೂ ಹೆಚ್ಚು ಮಳೆ ಆಗಬಹುದು. ಆಗ ಐಎಂಡಿ ರೆಡ್ ಅಲರ್ಟ್ ನೀಡುವ ಜೊತೆಗೆ ಮೀನುಗಾರರಿಗೆ, ಸಂಬಂಧಿಸಿದ ಕರಾವಳಿ ಜಿಲ್ಲಾಡಳಿತಕ್ಕೆ ಅಗತ್ಯ ಸೂಚನೆ ರವಾನಿಸುತ್ತದೆ. ಆದರೆ ಸದ್ಯ ಕರ್ನಾಟಕ ಸೇರಿದಂತೆ ಯಾವ ರಾಜ್ಯದಲ್ಲೂ ರಣಭೀಕರ ಮಳೆ ಆಗುತ್ತಿಲ್ಲ. ಅಲ್ಲಲ್ಲಿ ಹಗುರ, ಸಾಧಾರಣದಿಂದ ವ್ಯಾಪಕ ಮಳೆ ಆಗುತ್ತಿದೆ. ಇದರೊಂದಿಗೆ ಅನೇಕ ರಾಜ್ಯಗಳಲ್ಲಿ ಉಷ್ಣ ಅಲೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನಾ ವರದಿ ತಿಳಿಸಿದೆ.