ಈ ಯೋಜನೆಯಡಿ ಹನಿ ನೀರಾವರಿಗೆ ಶೇ. 90ರಷ್ಟು ಸಬ್ಸಿಡಿ ಸಿಗಲಿದೆ

ತೋಟಗಾರಿಕೆ ಇಲಾಖೆಯಿಂದ ಹನಿ ನೀರಾವರಿ ಅಳವಡಿಸಿಕೊಳ್ಳಲು ಆಸಕ್ತ ತೋಟಗಾರಿಕೆ ಬೆಳೆ ಬೆಳೆಯುವ ರೈತರಿಂದ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಅರ್ಜಿ ಅಹ್ವಾನಿಸಲಾಗಿದೆ. ಸಾಮಾನ್ಯ ವರ್ಗದ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ರೈತರು ಈ ಯೋಜನೆಯಡಿಯಲ್ಲಿ ಅರ್ಜಿಯನ್ನು ಸಲ್ಲಿಸಿ ಇದರ ಸದುಪಯೋಗ ಪಡೆದುಕೊಳ್ಳಬಹುದು.

ತೋಟಗಾರಿಕೆ ಬೆಳೆಗಾರರಿಗೆ ಹನಿ ನೀರಾವರಿ ಘಟಕ ಅಳವಡಿಕೆಗೆ ಸಹಾಯಧನ ಕಾರ್ಯಕ್ರಮದಡಿ ತೋಟಗಾರಿಕೆ ಬೆಳೆಗಳಾದ, ಹಣ್ಣು, ತರಕಾರಿ, ಹೂವು, ಪ್ಲಾಂಟೇಶನ್ ಬೆಳೆಗಳು, ಔಷಧಿ, ಸುಗಂಧ ಸಸ್ಯಗಳು ಹಾಗೂ ಸಾಂಬಾರು ಪದಾರ್ಥ ಬೆಳೆಗಳಿಗೆ ರೈತರು ಹನಿ ನೀರಾವರಿ ಪದ್ಧತಿ ಅಳವಡಿಸಿಕೊಳ್ಳಲು ಸಹಾಯಧನವನ್ನು ನೀಡಲಾಗುತ್ತಿದೆ.

90 ರಷ್ಟು ಸಹಾಯಧನವಿದ್ದು, ಆಸಕ್ತಿವುಳ್ಳ ರೈತರು ಸಹಾಯಧನ ಪಡೆಯಲು ಕೂಡಲೇ ತಾಲೂಕು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರನ್ನು ಸಂಪರ್ಕಿಸಿ ಹನಿ ನೀರಾವರಿ ಸಹಾಯಧನ ಸೌಲಭ್ಯ ಪಡೆಯುವಂತೆ ತೋಟಗಾರಿಕೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಯೋಜನೆಯ ಲಾಭ ಯಾರಿಗೆ? :

ಈ ಯೋಜನೆ ಅಡಿಯಲ್ಲಿ ಸಾಮಾನ್ಯ ವರ್ಗ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ರೈತರಿಗೆ ಬೇರೆ ಬೇರೆ ಸೌಲಭ್ಯಗಳಿವೆ. ಹನಿ ನೀರಾವರಿ ಯೋಜನೆಯನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ, ದೊಡ್ಡಬಳ್ಳಾಪುರ, ಹೊಸಕೋಟೆ ಮತ್ತು ನೆಲಮಂಗಲ ತಾಲೂಕುಗಳಲ್ಲಿ ಅನುಷ್ಠಾನಗೊಳಿಸಲಾಗುತ್ತಿದ್ದು, ಹನಿ ನೀರಾವರಿ ಘಟಕ ನಿರ್ಮಾಣ ಸಹಾಯಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.

ತೋಟಗಾರಿಕೆ ಬೆಳೆಗಳಿಗೆ ಹನಿ ನೀರಾವರಿ ಅಳವಡಿಸುವ ರೈತರಿಗೆ ಆಯಾ ಬೆಳೆಗಳು ಮತ್ತು ಬೆಳೆಗಳ ಅಂತರಕ್ಕನುಗುಣವಾಗಿ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದ ರೈತರಿಗೆ ಪ್ರಥಮ 2 ಹೆಕ್ಟೇರ್ಗೆ ಮಾರ್ಗಸೂಚಿಯನ್ವಯ ನಿಗದಿಪಡಿಸಿರುವ ವೆಚ್ಚದ ಶೇ.90 ರಷ್ಟು ಸಹಾಯಧನವನ್ನು ಹಾಗೂ ಇತರೆ ವರ್ಗದ ರೈತರಿಗೆ ಶೇ.75ರಷ್ಟು ಸಹಾಯಧನವನ್ನು ನೀಡಲಾಗುವುದು.

2 ಹೆಕ್ಟೇರ್ಗೆ ಮೇಲ್ಪಟ್ಟು 5 ಹೆಕ್ಟೇರ್ ವರೆಗೆ ಶೇ. 45ರಷ್ಟು ಸಹಾಯಧನವನ್ನು ನೀಡಲಾಗುವುದು (ತರಕಾರಿ ಹಾಗೂ ವಾಣಿಜ್ಯ ಹೂ ಬೆಳೆಗಳಿಗೆ ಗರಿಷ್ಠ 2 ಹೆಕ್ಟೇರ್ ವರೆಗೆ ಸಹಾಯಧನವನ್ನು ನೀಡಲಾಗುವುದು). ಈ ಸೌಲಭ್ಯವನ್ನು ಪ್ರತಿ ಫಲಾನುಭವಿಗೆ 5 ಹೆಕ್ಟೇರ್ ಪ್ರದೇಶದವರೆಗೆ ಮಿತಿಗೊಳಿಸಲಾಗಿದೆ.

ತೋಟಗಾರಿಕೆಯಲ್ಲಿ ಕೃಷಿ ಮಾಡುತ್ತಿರುವ ಹಾಗೂ ನೀರಾವರಿ ಮೂಲ ಹೊಂದಿರುವ ರೈತರು ತಮ್ಮ ಜಮೀನಿಗೆ ಹನಿ ನೀರಾವರಿ ಅಳವಡಿಸಿಕೊಳ್ಳಲು ಆಸಕ್ತಿ ಇದ್ದಲ್ಲಿ ತಮ್ಮ ಜಮೀನು ವ್ಯಾಪ್ತಿಯ ಹೋಬಳಿಯ ರೈತ ಸಂಪರ್ಕ ಕೇಂದ್ರ ಅಥವಾ ತಾಲ್ಲೂಕು ಕಚೇರಿಯ ತೋಟಗಾರಿಕೆ ಅಧಿಕಾರಿಗಳನ್ನು ಸಂಪರ್ಕಿಸಿ ಹನಿ ನೀರಾವರಿ ಅಳವಡಿಸಲು ನಿಗದಿತ ಅರ್ಜಿಯನ್ನು ಪಡೆಯಬಹುದು. ಹೆಚ್ಚಿನ ಮಾಹಿತಿಗಾಗಿ, ಸಂಬಂಧಿಸಿದ ತಾಲೂಕು ತೋಟಗಾರಿಕೆ ಇಲಾಖೆ ಅಧಿಕಾರಿಗಳನ್ನು ಸಂಪರ್ಕಿಸುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕೃಷಿಗೆ ಪ್ರೋತ್ಸಾಹ, ನೀರಾವರಿಯನ್ನು ಗಮನದಲ್ಲಿರಿಸಿಕೊಂಡು ಕೃಷಿ ಉತ್ಪಾದನೆಯನ್ನು ಹೆಚ್ಚಿಸುವ ಉದ್ದೇಶದಿಂದ ಎಲ್ಲಾ ಭೂಮಿಗಳಿಗೂ ನೀರಾವರಿ ಸೌಲಭ್ಯ ಒದಗಿಸುವುದಕ್ಕಾಗಿ ಈ ಯೋಜನೆಯನ್ನು ಪ್ರಾರಂಭಿಸಲಾಗಿದೆ.

ಮಾನದಂಡವೇನು? :

ಈ ಯೋಜನೆಯಡಿಯಲ್ಲಿ ಸಹಾಯಧನವನ್ನು ಪಡೆಯಲು ರೈತರು ಕೆಲವೊಂದು ಮಾನದಂಡಗಳನ್ನು ಹೊಂದಿರಬೇಕು. ತಮ್ಮದೇ ಹೆಸರಿನಲ್ಲಿ ರೈತರು ಜಮೀನನ್ನು ಹೊಂದಿರಬೇಕು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಜಾತಿಯ ರೈತರು ಜಾತಿ ಮತ್ತು ಆದಾಯ ಪ್ರಮಾಣ ಪತ್ರವನ್ನು ಹೊಂದಿರಬೇಕು.

ರೈತರು ಅರ್ಜಿಯನ್ನು ಸಲ್ಲಿಸಿ ಅದು ಅನುಮೋದನೆಯಾದ ನಂತರ ರೈತರು ತೋಟಗಾರಿಕೆ ಇಲಾಖೆ ವತಿಯಿಂದ ಅನುಮೋದನೆಗೊಂಡ ಕಂಪನಿ/ಡೀಲರ್ ಅವರಿಂದ ಹನಿ ನೀರಾವರಿ ಪದ್ಧತಿ ಅಳವಡಿಸಿಕೊಳ್ಳಬಹುದು.

ಯೋಜನೆಯ ಲಾಭ ಯಾರಿಗೆ? :

ಈ ಯೋಜನೆ ಅಡಿಯಲ್ಲಿ ಸಾಮಾನ್ಯ ವರ್ಗ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ರೈತರಿಗೆ ಬೇರೆ ಬೇರೆ ಸೌಲಭ್ಯಗಳಿವೆ. ಹನಿ ನೀರಾವರಿ ಯೋಜನೆಯನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ, ದೊಡ್ಡಬಳ್ಳಾಪುರ, ಹೊಸಕೋಟೆ ಮತ್ತು ನೆಲಮಂಗಲ ತಾಲೂಕುಗಳಲ್ಲಿ ಅನುಷ್ಠಾನಗೊಳಿಸಲಾಗುತ್ತಿದ್ದು, ಹನಿ ನೀರಾವರಿ ಘಟಕ ನಿರ್ಮಾಣ ಸಹಾಯಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.

ತೋಟಗಾರಿಕೆ ಬೆಳೆಗಳಿಗೆ ಹನಿ ನೀರಾವರಿ ಅಳವಡಿಸುವ ರೈತರಿಗೆ ಆಯಾ ಬೆಳೆಗಳು ಮತ್ತು ಬೆಳೆಗಳ ಅಂತರಕ್ಕನುಗುಣವಾಗಿ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದ ರೈತರಿಗೆ ಪ್ರಥಮ 2 ಹೆಕ್ಟೇರ್ಗೆ ಮಾರ್ಗಸೂಚಿಯನ್ವಯ ನಿಗದಿಪಡಿಸಿರುವ ವೆಚ್ಚದ ಶೇ.90 ರಷ್ಟು ಸಹಾಯಧನವನ್ನು ಹಾಗೂ ಇತರೆ ವರ್ಗದ ರೈತರಿಗೆ ಶೇ.75ರಷ್ಟು ಸಹಾಯಧನವನ್ನು ನೀಡಲಾಗುವುದು.

2 ಹೆಕ್ಟೇರ್ಗೆ ಮೇಲ್ಪಟ್ಟು 5 ಹೆಕ್ಟೇರ್ ವರೆಗೆ ಶೇ. 45ರಷ್ಟು ಸಹಾಯಧನವನ್ನು ನೀಡಲಾಗುವುದು (ತರಕಾರಿ ಹಾಗೂ ವಾಣಿಜ್ಯ ಹೂ ಬೆಳೆಗಳಿಗೆ ಗರಿಷ್ಠ 2 ಹೆಕ್ಟೇರ್ ವರೆಗೆ ಸಹಾಯಧನವನ್ನು ನೀಡಲಾಗುವುದು). ಈ ಸೌಲಭ್ಯವನ್ನು ಪ್ರತಿ ಫಲಾನುಭವಿಗೆ 5 ಹೆಕ್ಟೇರ್ ಪ್ರದೇಶದವರೆಗೆ ಮಿತಿಗೊಳಿಸಲಾಗಿದೆ.

ತೋಟಗಾರಿಕೆಯಲ್ಲಿ ಕೃಷಿ ಮಾಡುತ್ತಿರುವ ಹಾಗೂ ನೀರಾವರಿ ಮೂಲ ಹೊಂದಿರುವ ರೈತರು ತಮ್ಮ ಜಮೀನಿಗೆ ಹನಿ ನೀರಾವರಿ ಅಳವಡಿಸಿಕೊಳ್ಳಲು ಆಸಕ್ತಿ ಇದ್ದಲ್ಲಿ ತಮ್ಮ ಜಮೀನು ವ್ಯಾಪ್ತಿಯ ಹೋಬಳಿಯ ರೈತ ಸಂಪರ್ಕ ಕೇಂದ್ರ ಅಥವಾ ತಾಲ್ಲೂಕು ಕಚೇರಿಯ ತೋಟಗಾರಿಕೆ ಅಧಿಕಾರಿಗಳನ್ನು ಸಂಪರ್ಕಿಸಿ ಹನಿ ನೀರಾವರಿ ಅಳವಡಿಸಲು ನಿಗದಿತ ಅರ್ಜಿಯನ್ನು ಪಡೆಯಬಹುದು. ಹೆಚ್ಚಿನ ಮಾಹಿತಿಗಾಗಿ, ಸಂಬಂಧಿಸಿದ ತಾಲೂಕು ತೋಟಗಾರಿಕೆ ಇಲಾಖೆ ಅಧಿಕಾರಿಗಳನ್ನು ಸಂಪರ್ಕಿಸುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಹನಿ ನೀರಾವರಿಗೆ ಶೇ. 90 ರಷ್ಟು ಸಹಾಯಧನ

ತೋಟಗಾರಿಕೆ ಇಲಾಖೆ ಹನಿ ನೀರಾವರಿ ಯೋಜನೆಯಡಿ ಸಹಾಯಧನ ಸೌಲಭ್ಯ ದೊರೆಯಲಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಆನೇಕಲ್ ತಾಲೂಕಿನ ತೋಟಗಾರಿಕೆ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ಎಸ್‌.ಕೇಶವಮೂರ್ತಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ಯೋಜನೆಯಡಿ ಫಲಾನುಭವಿಗೆ ಗರಿಷ್ಠ 2 ಎಕರೆ ಪ್ರದೇಶದ ಬೆಳೆಗಳಿಗೆ ಹನಿ ನೀರಾವರಿ ಅಳವಡಿಕೆಗೆ ಅವಕಾಶವಿದೆ. ಸಾಮಾನ್ಯ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ರೈತರಿಗೆ ಶೇ 90ರಷ್ಟು ಸಹಾಯಧನ ದೊರೆಯುತ್ತದೆ. ಆಸಕ್ತರು ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕರ ಕಚೇರಿ ಸಂಪರ್ಕಿಸಿ ಅರ್ಜಿ ಸಲ್ಲಿಸಲು ಕೋರಿದೆ

ಹನಿ ನಿರಾವರಿ ಸಹಾಯಧನ ಪಡೆಯಲು ಅರ್ಜಿ ಅಲ್ಲಿಸಿ

ತೋಟಗಾರಿಕೆ ಬೆಳೆಗಳಿಗೆ ನೀರಾವರಿ ಸೌಲಭ್ಯ ಕಲ್ಪಿಸುವ ಸಲುವಾಗಿ ತೋಟಗಾರಿಕೆ ಇಲಾಖೆ ಹನಿ ನೀರಾವರಿ ಯೋಜನೆ ಅನುಷ್ಠಾನಗೊಳಿಸುತ್ತಿದ್ದು ಈ ಯೋಜನೆಯಡಿ ರೈತರಿಗೆ ಸಹಾಯ ಧನ ನೀಡಲು ರೈತರಿಂದ ಅರ್ಜಿ ಆಹ್ವಾನಿಸಿದೆ.

ಹಾವೇರಿ ಜಿಲ್ಲೆಯ ಹಾನಗಲ್ ತಾಲ್ಲೂಕಿನಲ್ಲಿ ಕೃಷಿ ಸಂಚಯಿನಿ ಯೋಜನೆಯಡಿ ತೋಟಗಾರಿಕೆ ಬೆಳೆಗಳಿಗೆ ಶೇ 90 ಸಹಾಯಧನದಲ್ಲಿ ಹನಿ ನೀರಾವರಿ ಅಳವಡಿಕೆಗೆ ಅವಕಾಶವಿದ್ದು, 5 ಎಕರೆವರೆಗೂ ಹನಿ ನೀರಾವರಿ ವಿಸ್ತರಿಸಿಕೊಳ್ಳಬಹುದು.

ಹನಿ ನೀರಾವರಿ ವ್ಯವಸ್ಥೆಯ ವಿಧಗಳು
ಹನಿ ನೀರಾವರಿ ಎಷ್ಟು ಚೆನ್ನಾಗಿ ವಿನ್ಯಾಸಗೊಳಿಸಲಾಗಿದೆ ಎಂಬುದರ ಆಧಾರದ ಮೇಲೆ ಹೆಚ್ಚು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುತ್ತದೆ. ಹನಿ ನೀರಾವರಿಯಲ್ಲಿ ಕೆಲವು ವ್ಯತ್ಯಾಸಗಳಿವೆ. ಅವುಗಳಿಗೆ ಉತ್ತಮ ನಿರ್ವಹಣಾ ಸೇವೆಯ ಜೊತೆಗೆ ವಿಭಿನ್ನ ಅನುಸ್ಥಾಪನಾ ಪ್ರಕ್ರಿಯೆಯ ಅಗತ್ಯವಿರುತ್ತದೆ. ಕೆಲವು ರೀತಿಯ ಹನಿ ನೀರಾವರಿ:

  • ಸರಂಧ್ರ ಸೋಕರ್ ಮೆದುಗೊಳವೆ ವ್ಯವಸ್ಥೆ
  • ಹೊರಸೂಸುವ ಹನಿ ವ್ಯವಸ್ಥೆ
  • ವಾಟರ್‌ಮ್ಯಾಟಿಕ್ ಡ್ರಿಪ್ ಸಿಸ್ಟಮ್
  • ಮೈಕ್ರೋ ಮಿಸ್ಟಿಂಗ್ ಸ್ಪ್ರಿಂಕ್ಲರ್

ಆಸಕ್ತ ರೈತರು ಡಿ. 31 ಒಳಗಾಗಿ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕು. ಮಾಹಿತಿಗೆ ತಾಲ್ಲೂಕಿನ ಹೊಬಳಿ ಮಟ್ಟದ ತೋಟಗಾರಿಕೆ ಅಧಿಕಾರಿಗಳನ್ನು ಸಂಪರ್ಕಿಸುವಂತೆ ತೋಟಗಾರಿಕೆ ಹಿರಿಯ ಸಹಾಯಕ ನಿರ್ದೇಶಕ ತಿಳಿಸಿದ್ದಾರೆ.

ಮಾನದಂಡವೇನು? : ಈ ಯೋಜನೆಯಡಿಯಲ್ಲಿ ಸಹಾಯಧನವನ್ನು ಪಡೆಯಲು ರೈತರು ಕೆಲವೊಂದು ಮಾನದಂಡಗಳನ್ನು ಹೊಂದಿರಬೇಕು. ತಮ್ಮದೇ ಹೆಸರಿನಲ್ಲಿ ರೈತರು ಜಮೀನನ್ನು ಹೊಂದಿರಬೇಕು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಜಾತಿಯ ರೈತರು ಜಾತಿ ಮತ್ತು ಆದಾಯ ಪ್ರಮಾಣ ಪತ್ರವನ್ನು ಹೊಂದಿರಬೇಕು.

ರೈತರು ಅರ್ಜಿಯನ್ನು ಸಲ್ಲಿಸಿ ಅದು ಅನುಮೋದನೆಯಾದ ನಂತರ ರೈತರು ತೋಟಗಾರಿಕೆ ಇಲಾಖೆ ವತಿಯಿಂದ ಅನುಮೋದನೆಗೊಂಡ ಕಂಪನಿ/ಡೀಲರ್ ಅವರಿಂದ ಹನಿ ನೀರಾವರಿ ಪದ್ಧತಿ ಅಳವಡಿಸಿಕೊಳ್ಳಬಹುದು.

ಹನಿ ನೀರಾವರಿಯಿಂದ ನೀರು ಉಳಿತಾಯ ಹೇಗೆ?

ಹನಿ ನೀರಾವರಿ ಸಸ್ಯಗಳಿಗೆ ನೀರುಣಿಸುವ ಪರಿಣಾಮಕಾರಿ ಮತ್ತು ಪರಿಣಾಮಕಾರಿ ಮಾರ್ಗವಾಗಿದ್ದು, ಸಣ್ಣ ಮತ್ತು ದೊಡ್ಡ ಪ್ರಮಾಣದ ತೋಟಗಾರಿಕೆ ಎರಡಕ್ಕೂ ಪ್ರಯೋಜನವನ್ನು ನೀಡುತ್ತದೆ. ಇದು ಸಸ್ಯಗಳ ಬೇರುಗಳಿಗೆ ನಿಧಾನವಾಗಿ ಮತ್ತು ನೇರವಾಗಿ ಸೋರುವಂತೆ ಮಾಡುವ ಮೂಲಕ ನೀರನ್ನು ಸಂರಕ್ಷಿಸುತ್ತದೆ. ಹನಿ ನೀರಾವರಿ ಆವಿಯಾಗುವಿಕೆ ಮತ್ತು ಹರಿವನ್ನು ಕಡಿಮೆ ಮಾಡುತ್ತದೆ, ಇವೆರಡೂ ನೀರನ್ನು ವ್ಯರ್ಥ ಮಾಡಬಹುದು. ಇದು ಆಳವಾದ ಬೇರೂರಿಸುವಿಕೆಯನ್ನು ಸಹ ಉತ್ತೇಜಿಸುತ್ತದೆ, ಇದು ಸಸ್ಯಗಳು ಬರ ಪರಿಸ್ಥಿತಿಗಳನ್ನು ಉತ್ತಮವಾಗಿ ತಡೆದುಕೊಳ್ಳಲು ಸಹಾಯ ಮಾಡುತ್ತದೆ. ಈ ರೀತಿಯ ನೀರಾವರಿಯನ್ನು ಹೆಚ್ಚಾಗಿ ಹಸಿಗೊಬ್ಬರದೊಂದಿಗೆ ಬಳಸಲಾಗುತ್ತದೆ. ಅದು ನೀರಿನ ನಷ್ಟವನ್ನು ಮತ್ತಷ್ಟು ಕಡಿಮೆ ಮಾಡುತ್ತದೆ.

Spread positive news

Leave a Reply

Your email address will not be published. Required fields are marked *