ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ರಾಜ್ಯದಾದ್ಯಂತ ಮುಂದಿನ 5 ದಿನಗಳವರೆಗೆ ಅಲ್ಲಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗಲಿದೆ ಎಂದು ತಿಳಿಸಿದೆ.
“ಕರಾವಳಿ, ಮಲೆನಾಡು ಮತ್ತು ದಕ್ಷಿಣ ಒಳನಾಡು ಅಲ್ಲಲ್ಲಿ ಚದುರಿದಂತೆ ಸಾಧಾರಣ ಮಳೆಯಾಗಲಿದೆ. ಉತ್ತರ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯಿಂದ, ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ” ಎಂದು ಹವಾಮಾನ ಇಲಾಖೆಯು ತಿಳಿಸಿದೆ.
ಮೇ 4 ರಿಂದ 6 ರವರೆಗೆ ಪಶ್ಚಿಮ ಮಧ್ಯಪ್ರದೇಶ, ಪೂರ್ವ ಮಧ್ಯಪ್ರದೇಶ, ಒಡಿಶಾ, ಗಂಗಾನದಿ ಪಶ್ಚಿಮ ಬಂಗಾಳ, ಜಾರ್ಖಂಡ್ ಮತ್ತು ಛತ್ತೀಸ್ಗಢದಲ್ಲಿ ಗಂಟೆಗೆ 50-60 ಕಿ.ಮೀ ವೇಗದಲ್ಲಿ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದೆ. ಮೇ 4 ರಂದು ಸಿಕ್ಕಿಂ, ಒಡಿಶಾ, ಛತ್ತೀಸ್ಗಢ ಮತ್ತು ಮಧ್ಯಪ್ರದೇಶದಲ್ಲಿ ಇಂದು ಆಲಿಕಲ್ಲು ಮಳೆಯಾಗುವ ಸಾಧ್ಯತೆಯಿದೆ ಮತ್ತು ಒಡಿಶಾದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.
ಕರ್ನಾಟಕದಲ್ಲಿ ಎಲ್ಲಿ ಮಳೆ?
ಇಂದು ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣ ಹವಾಮಾನ ಇರುವ ಸಾಧ್ಯತೆಯಿದೆ. ನಾಳೆಯಿಂದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗಲಿದೆ.
ಮುಂದಿನ ಕೆಲವು ದಿನಗಳವರೆಗೆ ದೇಶದ ಹಲವು ರಾಜ್ಯಗಳಲ್ಲಿ ಮಳೆ, ಮಿಂಚು ಮತ್ತು ಗುಡುಗು ಸಹಿತ ಮಳೆಯಾಗುವ ಬಗ್ಗೆ ಹವಾಮಾನ ಇಲಾಖೆ (ಐಎಂಡಿ) ಎಚ್ಚರಿಕೆ ನೀಡಿದೆ. ಮೇ 4 ರಿಂದ 6 ರವರೆಗೆ ಪೂರ್ವ ಮತ್ತು ಮಧ್ಯ ಭಾರತದಲ್ಲಿ ಹವಾಮಾನವು ಕೆಟ್ಟದಾಗಿ ಉಳಿಯುವ ಸಾಧ್ಯತೆಯಿದೆ. ಬಿಹಾರ, ಜಾರ್ಖಂಡ್, ಒಡಿಶಾ, ಪಶ್ಚಿಮ ಬಂಗಾಳ, ಸಿಕ್ಕಿಂ, ಮಧ್ಯಪ್ರದೇಶ, ವಿದರ್ಭ ಮತ್ತು ಛತ್ತೀಸ್ಗಢದಲ್ಲಿ ಗಂಟೆಗೆ 40-50 ಕಿ.ಮೀ ವೇಗದಲ್ಲಿ ಬಲವಾದ ಗಾಳಿ ಬೀಸಲಿದ್ದು, ಹಗುರದಿಂದ ಭಾರೀ ಮಳೆಯಾಗುವ ಸಾಧ್ಯತೆಯಿದೆ.
ಶನಿವಾರ ಜಮ್ಮು ಮತ್ತು ಕಾಶ್ಮೀರ, ಮಣಿಪುರ, ಮಿಜೋರಾಂ, ತ್ರಿಪುರ, ಕೇರಳ, ಉತ್ತರಾಖಂಡ ಮಧ್ಯಪ್ರದೇಶ ಸೇರಿದಂತೆ 16 ರಾಜ್ಯಗಳಲ್ಲಿ ಗುಡುಗ ( ಸಹಿತ ಗಾಳಿ ಮಳೆಯಾಗಿದೆ. ಇನ್ನೊಂದೆಡೆ ಪೂರ್ವ ಮಧ್ಯಪ್ರದೇಶ ಮತ್ತು ತೆಲಂಗಾಣದ ಕೆಲವು ಸ್ಥಳಗಳಲ್ಲಿ ಆಲಿಕಲ್ಲು ಮಳೆಯಾಗಿದ್ದು, ಕೇರಳ, ಕರ್ನಾಟಕದ ಒಳನಾಡಿನ ಪ್ರದೇಶಗಳು ಮತ್ತು ಉತ್ತರಾಖಂಡದ ಕೆಲವು ಭಾಗಗಳಲ್ಲಿ ಭಾರೀ ಮಳೆಯಾಗಿದೆ. ಹವಾಮಾನ ಇಲಾಖೆಯ ಪ್ರಕಾರ, ಮುಂದಿನ ನಾಲೈದು ದಿನಗಳವರೆಗೆ ದೇಶದ ಅರ್ಧದಷ್ಟು ಭಾಗದಲ್ಲಿ ಬಿರುಗಾಳಿ ಮತ್ತು ಮಳೆಯ ಅವಧಿ ಮುಂದುವರಿಯುತ್ತದೆ.
ಮುಂಗಾರು ಹೇಗಿರಲಿದೆ!
ಬೇಸಿಗೆಯ ಬೇಗೆಯಿಂದ ತತ್ತರಿಸಿರುವ ಜನತೆಗೊಂದು ಖುಷಿಯ ಸುದ್ದಿ. ದೇಶದಲ್ಲಿ ಈ ಬಾರಿ ಮುಂಗಾರು ಮಳೆಯ ಅಬ್ಬರ ಉತ್ತಮವಾಗಿರಲಿದೆ. ಸಾಮಾನ್ಯಕ್ಕಿಂತ ಉತ್ತಮ ಮಳೆಯಾಗಲಿದೆ. ಮಳೆಯ ಮೇಲೆ ಈ ಬಾರಿ ಎಲ್ನಿನೋ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ತಿಳಿಸಿದೆ.
ಸಂಜೆ 6 ಗಂಟೆ ಹೊತ್ತಿಗೆ ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಮಳೆ ಆರಂಭವಾಗಿದ್ದು, ಶಾಂತಿನಗರ, ಕಾರ್ಪೊರೇಷನ್, ರಿಚ್ಮಂಡ್ ಸರ್ಕಲ್, ಕೆ.ಆರ್.ಮಾರ್ಕೆಟ್, ಮೆಜೆಸ್ಟಿಕ್ಸೇರಿದಂತೆ ಹಲವೆಡೆ ಮಳೆಯಾಗಿದೆ. ಅಂತೆಯೇ ಭಾರಿ ಗಾಳಿಯಿಂದಾಗಿ ಮೋಡಗಳಲ್ಲಿಯೂ ಚಲನೆ ಕಂಡುಬಂದಿದ್ದು, ಮಳೆ ಮೋಡಗಳು ಈಶಾನ್ಯ ಬೆಂಗಳೂರಿನಿಂದ ದಕ್ಷಿಣದತ್ತ ಚಲಿಸುತ್ತಿವೆ. ಪರಿಣಾಮ ಹಲಸೂರು, ಇಂದಿರಾನಗರ, ಬನಶಂಕರಿ, ಜಯನಗರದಲ್ಲೂ ಮಳೆಯಾಗುತ್ತಿದೆ ಎಂದು ತಿಳಿದುಬಂದಿದೆ.
ಹವಾಮಾನ ವೈಪರೀತ್ಯದಿಂದ, ಮುಂದಿನ ನಾಲ್ಕೈದು ದಿನಗಳ ಕಾಲ, ರಾಜಸ್ಥಾನದಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆಯ ವಕ್ತಾರರು ಇಂದು ತಿಳಿಸಿದರು.
ರಾಜಸ್ಥಾನದ ದಕ್ಷಿಣ ಹಾಗೂ ಪೂರ್ವ ಭಾಗಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಬಿಸಿಗಾಳಿಯ ಹೊಡೆತದಿಂದ ತತ್ತರಿಸಿದ್ದ ರಾಜಸ್ಥಾನಿಯರಿಗೆ ಇದು ಅನುಕೂಲ ಉಂಟುಮಾಡಲಿದೆ.
ಪಶ್ಚಿಮದಿಂದ ಬರುತ್ತಿರುವ ಚಂಡಮಾರುತದ ಪರಿಣಾಮ ಪಾಕಿಸ್ತಾನ, ಪಂಜಾಬ್ ಸೇರಿದಂತೆ ರಾಜಸ್ಥಾನದ ವಾಯವ್ಯ ಭಾಗದಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆಯಿದೆ.
ಚಂಡಮಾರುತವು ಗಂಟೆಗೆ 50ರಿಂದ 60ಕೀಮಿ ವೇಗದಲ್ಲಿ ಬರುತ್ತಿದ್ದು, ರಾಜಸ್ಥಾನದ ಜೋದ್ಪುರ, ಉದಯಪುರ, ಕೋಟ, ಜೈಪುರ, ಭರತ್ಪುರ್ ಹಾಗೂ ಅಜ್ಮೈರ್ ಭಾಗದಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದರು.
ರಾಜ್ಯದಲ್ಲಿ ಮೇ 10ರಿಂದ ಪೂರ್ವ ಮುಂಗಾರು ಮಳೆ ಬೀಳುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ.
ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಶಿವಮೊಗ್ಗ,ಚಿಕ್ಕಮಗಳೂರು, ಕೊಡಗು, ಹಾಸನ, ಬೆಂಗಳೂರು ನಗರ, ಬೆಂ .ಗ್ರಾಮಾಂತರ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ,ರಾಮನಗರ, ಮಂಡ್ಯ, ಮೈಸೂರು ಮತ್ತು ಚಾಮರಾಜನಗರದಲ್ಲಿ ಮೇ 10ರಿಂದ ಮೇ 13ರವರೆಗೆ ಬಿರುಗಾಳಿ ಸಹಿತ ಮಳೆಯಾಗಲಿದೆ.
ವಿಜಯನಗರ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಬಳ್ಳಾರಿ,ಯಾದಗಿರಿ ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಹಾಗೂ ಗದಗದಲ್ಲಿ ಮೇ.10ರಿಂದ ಮುಂದಿನ 3 ದಿನ ಸಾಧಾರಣ ಪ್ರಮಾಣದಲ್ಲಿ ವರ್ಷಧಾರೆಯಾಗಲಿದೆ. ಅಲ್ಲದೆ, ಹಲವು ಜಿಲ್ಲೆಗಳಲ್ಲಿ ಮಳೆ ಬೀಳುವ ಸಂದರ್ಭದಲ್ಲಿ ಪ್ರತಿ ಗಂಟೆಗೆ 30-40 ಕಿ.ಮೀ. ವೇಗದಲ್ಲಿ ಗಾಳಿ ಬೀಸಲಿದೆ ಎಂದು ಇಲಾಖೆ ಮಾಹಿತಿ ನೀಡಿದೆ.
ಮಳೆ ಕ್ಷೀಣವಾಗಿರುವ ಹಿನ್ನೆಲೆಯಲ್ಲಿ ಮೇ 6ರಿಂದ ಮೇ 9ರವರೆಗೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿದಿದೆ.ಕಲಬುರಗಿಯಲ್ಲಿ 41.2, ಬೀದರ್ 40.6,ರಾಯಚೂರು 40.4 ಡಿ.ಸೆ. ಉಷ್ಣಾಂಶ ಸೋಮವಾರ ದಾಖಲಾಗಿದೆ.
ಪೂರ್ವ ಮುಂಗಾರು ಅಧಿಕ: ರಾಜ್ಯದಲ್ಲಿ ಮಾ.1ರಿಂದ ಮಾ.5ರವರೆಗೆ ವಾಡಿಕೆಯಂತೆ 51 ಮಿಮೀ ಮಳೆಯಾಗಬೇಕಿತ್ತು. ಆದರೆ, 79 ಮಿಮೀ ಮಳೆಯಾಗಿದ್ದು,ವಾಡಿಕೆಗಿಂತ ಶೇ.55 ಅಧಿಕವಾಗಿ ಸುರಿದಿದೆ. ಕರಾವಳಿ ಶೇ.84, ಮಲೆನಾಡು ಶೇ.52,ದಣ ಕರ್ನಾಟಕ ಶೇ.54, ಉತ್ತರ ಕರ್ನಾಟಕದಲ್ಲಿ ಶೇ.47 ವಾಡಿಕೆಗಿಂತ ಹೆಚ್ಚು ಸುರಿದಿದೆ. ತುಮಕೂರು, ಚಿತ್ರದುರ್ಗ, ದಾವಣಗೆರೆ, ಉಡುಪಿ ಸೇರಿ ರಾಜ್ಯದ ಇತರೆ ಜಿಲ್ಲೆಗಳಲ್ಲಿ ಉತ್ತಮವಾಗಿ ಸುರಿದಿದೆ.