
ಕರಿಬೇವು ಬೆಳೆದು ಲಕ್ಷಗಟ್ಟಲೆ ಆದಾಯ ಪಡೆದ ಇಂಜಿನಿಯರಿಂಗ್ ರೈತ
ಪ್ರೀಯ ರೈತರೇ ಇವತ್ತು ನಾವು ಒಬ್ಬ ಇಂಜಿನಿಯರಿಂಗ್ ರೈತನ ಸಾಧನೆ ಬಗ್ಗೆ ಮಾತಾಡೋಣ ಬನ್ನಿ. ಕೇವಲ ಮಳೆ ಆಧಾರಿತ ಬೆಳೆ ಬೆಳೆದು ಲಕ್ಷಾಂತರ ಆದಾಯ ಪಡೆದ ರೈತನ ಕಥೆ. ಬೀದರ್ ತಾಲ್ಲೂಕಿನ ಮಲ್ಕಾಪುರ ಗ್ರಾಮದ ಸಿವಿಲ್ ಎಂಜಿನಿಯರಿಂಗ್ ಪದವೀಧರ ರವಿ ರೊಡ್ಡಾ ಅವರು ಎಂಜಿನಿಯರಿಂಗ್ ವೃತ್ತಿಯನ್ನು ತೊರೆದು ಕರಿಬೇವು ಕೃಷಿ ಮಾಡಿ, ಯಶಸ್ವಿಯಾಗಿದ್ದಾರೆ. ರವಿ ಅವರು ಸುಲ್ತಾನಪುರದಲ್ಲಿ ಪಾಳು ಬಿದ್ದಿದ್ದ ತಮ್ಮ ಒಂದೂವರೆ ಎಕರೆ ಜಮೀನನ್ನು ಕೃಷಿ ಯೋಗ್ಯವಾಗಿಸಿ, 2023ರ ಆಗಸ್ಟ್ನಲ್ಲಿ 8,400 ಕರಿಬೇವು ಸಸಿಗಳನ್ನು ನಾಟಿ…