ಮುಂದಿನ 5 ದಿನ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಯೆಲ್ಲೋ ಅಲರ್ಟ್‌ ಘೋಷಣೆ

ಸಾರ್ವಜನಿಕರೇ ಪ್ರಸ್ತುತ ಕರ್ನಾಟದ ಕೆಲವು ಭಾಗಗಳಲ್ಲಿ ಅನಿರೀಕ್ಷಿತ ಮಳೆ ಅಥವಾ ಹಿಮಪಾತವು ನಮ್ಮ ದೈನಂದಿನ ವೇಳಾಪಟ್ಟಿಯನ್ನು ಅಡ್ಡಿಪಡಿಸಬಹುದಾದ್ದರಿಂದ ಹವಾಮಾನವು ನಮ್ಮ ಜೀವನದಲ್ಲಿ ಮಹತ್ವದ ಪಾತ್ರ ವಹಿಸುತ್ತದೆ.

ರಾಜ್ಯದ ಹಲವಾರು ಭಾಗಗಳಲ್ಲಿ ಪೂರ್ವ ಮಾನ್ಸೂನ್ ಮಳೆ ಮತ್ತು ಗುಡುಗು ಸಹಿತ ಮಳೆಯಾಗುತ್ತಿರುವುದರಿಂದ ನಿರ್ದಿಷ್ಟ ದಿನದಂದು ಆಕಾಶವು ಹೇಗೆ ವರ್ತಿಸಲು ಯೋಜಿಸುತ್ತದೆ ಎಂಬುದರ ಕುರಿತು ನವೀಕೃತವಾಗಿರುವುದು ಅಗತ್ಯವಾಗುತ್ತದೆ. 3 ತಿಂಗಳಲ್ಲಿ ಸಾವಿರ ಮಿಮೀ ವರ್ಷಧಾರೆ ಸಾಧ್ಯತೆ.

ಹವಾಮಾನ ಮುನ್ಸೂಚನೆ (10 ಮೇ 2025 ರಿಂದ 14 ಮೇ 2025 ರವರೆಗೆ) ಮೇ 9 ಮತ್ತು 10 ರಂದು ಬಾಗಲಕೋಟೆ, ಬೀದರ್, ಕಲಬುರ್ಗಿ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ 40 ರಿಂದ 50 ಕಿ.ಮೀ. ವೇಗದಲ್ಲಿ ಗಾಳಿಯೊಂದಿಗೆ ಹಗುರ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ಉಳಿದ ಜಿಲ್ಲೆಗಳು ಮತ್ತು ಉತ್ತರ ಕನ್ನಡದಲ್ಲಿ ಒಣ ಹವಾಮಾನ ಇರುತ್ತದೆ. ಮೇ 11 ರಂದು, ಉತ್ತರ ಒಳನಾಡು ಕರ್ನಾಟಕ ಮತ್ತು ಉತ್ತರ ಕನ್ನಡದ ಪ್ರತ್ಯೇಕ ಸ್ಥಳಗಳಲ್ಲಿ 40 ರಿಂದ 50 ಕಿ.ಮೀ. ವೇಗದಲ್ಲಿ ಗಾಳಿಯೊಂದಿಗೆ ಹಗುರ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಬಾಗಲಕೋಟೆ, ಬೀದರ್ ಮತ್ತು ವಿಜಯಪುರ ಜಿಲ್ಲೆಗಳನ್ನು ಹೊರತುಪಡಿಸಿ.

* ಮೇ 12 ಮತ್ತು 13 ರಂದು, ಉತ್ತರ ಒಳನಾಡು ಕರ್ನಾಟಕ ಮತ್ತು ಉತ್ತರ ಕನ್ನಡದ ಎಲ್ಲಾ ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ 40 ರಿಂದ 50 ಕಿ.ಮೀ. ವೇಗದಲ್ಲಿ ಗಾಳಿಯೊಂದಿಗೆ ಹಗುರ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
* ಕಳೆದ ಐದು ದಿನಗಳಿಂದ ಉತ್ತರ ಒಳನಾಡು ಕರ್ನಾಟಕದ ಗರಿಷ್ಠ ತಾಪಮಾನದಲ್ಲಿ ದೊಡ್ಡ ಬದಲಾವಣೆಯಾಗಿಲ್ಲ.
* ಮುಂದಿನ ಐದು ದಿನಗಳಲ್ಲಿ ಉತ್ತರ ಕರ್ನಾಟಕದ ಉತ್ತರ ಭಾಗದಲ್ಲಿ ಮುಖ್ಯವಾಗಿ ಸ್ಪಷ್ಟ ಮತ್ತು ಭಾಗಶಃ ಮೋಡ ಕವಿದ ವಾತಾವರಣವಿರುತ್ತದೆ.

82.48 ಲಕ್ಷ ಹೆಕ್ಟೇರ್‌ನಲ್ಲಿ ಬಿತ್ತನೆ ಗುರಿ ಮುಂಗಾರು ಉತ್ತಮವಾಗಿರುವ ಹಿನ್ನೆಲೆಯಲ್ಲಿ ಈ ಬಾರಿಯೂ ರಾಜ್ಯದಲ್ಲಿ 82.48 ಲಕ್ಷ ಹೆಕ್ಟೇರ್‌ಗಿಂತ ಅಧಿಕ ಪ್ರದೇಶಗಳಲ್ಲಿ ಬಿತ್ತನೆಯಾಗುವ ಗುರಿ ಇದೆ. ಕಳೆದ ವರ್ಷವೂ ಒಳ್ಳೆಯ ಮಳೆಯಾಗಿದ್ದ ಕಾರಣ 82 ಲಕ್ಷ ಹೆಕ್ಟೇರ್ ಪ್ರದೇಶಗಳಲ್ಲಿ ಬಿತ್ತನೆಯಾಗಿತ್ತು.

23.99 ಲಕ್ಷ ಹೆಕ್ಟೇರ್ ನೀರಾವರಿ ಪ್ರದೇಶಗಳಾದರೆ, 58.49 ಲಕ್ಷ ಹೆಕ್ಟೇರ್ ಪ್ರದೇಶಗಳು ಮಳೆ ಅವಲಂಬಿಸಿವೆ. ಭತ್ತ, ಜೋಳ, ರಾಗಿ, ಮೆಕ್ಕೆಜೋಳ, ಗೋಧಿ, ತೊಗರಿ, ಕಡಲೆ, ಹುರುಳಿ, ಉದ್ದು, ಹೆಸರು, ಅಲಸಂದೆ, ಅವರೆ, ಮಟಕಿ, ಶೇಂಗಾ, ಎಳ್ಳು, ಸೂರ್ಯಕಾಂತಿ, ಹರಳಿ, ಹಿಚ್ಚೆಳ್ಳು, ಸೋಯಾ ಅವರೆ, ಆಗಸೆ, ಹತ್ತಿ, ಕಬ್ಬು ಮತ್ತು ತಂಬಾಕು ಸೇರಿ ಏಕಧಾನ್ಯ, ದ್ವಿದಳ ಧಾನ್ಯ, ಎಣ್ಣೆ ಕಾಳುಗಳು ಮತ್ತು ವಾಣಿಜ್ಯ ಬೆಳೆಗಳನ್ನು ಬಿತ್ತನೆ ಮಾಡಲಾಗುತ್ತದೆ.

ಎಲ್ಲಿ ಅಧಿಕ ಮಳೆ?
ಮಧ್ಯ ಪ್ರದೇಶ, ರಾಜಸ್ಥಾನ, ಮಹಾರಾಷ್ಟ್ರ, ಒಡಿಶಾ, ಛತ್ತೀಸ್ ಗಢ, ಉತ್ತರ ಪ್ರದೇಶ ಮತ್ತು ಪಶ್ಚಿಮ ಬಂಗಾಳದಲ್ಲಿ ವಾಡಿಕೆಗಿಂತ ಅಧಿಕ ಮಳೆಯಾಗಲಿದೆ.

ಎಲ್ಲಿ ಮಳೆ ಕೊರತೆ?
ಜಮ್ಮು ಕಾಶ್ಮೀರ, ಲಡಾಖ್, ತಮಿಳುನಾಡು, ಬಿಹಾರ ಮತ್ತು ಈಶಾನ್ಯ ರಾಜ್ಯಗಳಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗಲಿದೆ.

ಇಂದು ಕರ್ನಾಟಕದಲ್ಲಿ ಕೆಲವೊಂದು ಭಾಗಗಳಲ್ಲಿ ಅಂದರೆ ಈ ಪ್ರದೇಶಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಏಕೆಂದರೆ ಈಗಾಗಲೇ ಮಳೆ ಬಹಳ ದಿನಗಳಿಂದ ಬಂದಿಲ್ಲ ಹಾಗೂ ಆಕಸ್ಮಿಕ ಮಳೆಗಳು ಹೆಚ್ಚಾಗಬಹುದು ಹಾಗೂ ಹಾನಿಗಳನ್ನು ಸಹ ಉಂಟು ಮಾಡಬಹುದು ಏಕೆಂದರೆ ಈಗಾಗಲೇ ಬಿಸಿಲಿನ ತಾಪಮಾನ ಹೆಚ್ಚುತ್ತಿದೆ ಹೀಗಾಗಿ ಯಾವುದೇ ರೀತಿ ಮಳೆಗಳಾದರೂ ವಿಶೇಷವಾಗಿರುತ್ತವೆ ಅಂದರೆ ಹಾನಿ ಆಗಿರಬಹುದು ಹಾಗೂ ರೈತರಿಗೆ ಅನುಕೂಲಕರವಾಗಿರಬಹುದು.

ಕರ್ನಾಟಕಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶಿಸುವ ಬಗ್ಗೆ ಭಾರತೀಯ ಹವಾಮಾನ ಇಲಾಖೆಯು ಬಿಗ್‌ ಗುಡ್‌ನ್ಯೂಸ್‌ ನೀಡಿದೆ. ರಾಜ್ಯದಲ್ಲಿ ಇದೀಗ ಮುಂಗಾರು ಪೂರ್ವ ಮಳೆಯಾಗುತ್ತಿದೆ. ಮೇ 13ರ ವರೆಗೆ ಮುಂಗಾರು ಪೂರ್ವ ಮಳೆ ಮುಂದುರಿಯಲಿದೆ ಎಂದು ಮುನ್ಸೂಚನೆ ನೀಡಲಾಗಿದೆ. ಇದರ ನಡುವೆ ಅದರ ಒಳಗಾಗಿಯೇ ನೈಋತ್ಯ ಮಾನ್ಸೂನ್ ಪ್ರವೇಶವಾಗುವ ಸಾಧ್ಯತೆ ಇರುವ ಬಗ್ಗೆ ಭರ್ಜರಿ ಗುಡ್‌ನ್ಯೂಸ್‌ ನೀಡಲಾಗಿದೆ.

ಈ ಬಾರಿ ಮುಂಗಾರು ಪೂರ್ವ ಮಳೆಯು ಭರ್ಜರಿಯಾಗಿ ಆಗಿದೆ. ಮಾನ್ಸೂನ್ ಪ್ರವೇಶ ಹಾಗೂ ಮುಂಗಾರು ಮಳೆ ಭರ್ಜರಿಯಾಗಿ ಆಗಲಿದೆ ಎಂದು ಐಎಂಡಿ ರಿಪೋರ್ಟ್ ಹೇಳಿದೆ. ರಾಜ್ಯಕ್ಕೆ ಯಾವಾಗ ಮಾನ್ಸೂನ್ ಪ್ರವೇಶಿಸಲಿದೆ ಹಾಗೂ ಈ ಬಾರಿ ಮುಂಗಾರು ಮಳೆ ಹೇಗಿರಲಿದೆ ಎನ್ನುವ ಸಂಪೂರ್ಣ ವಿವರ ನೋಡೋಣ.

ಮೇ 11 ರಿಂದ ಐದು ದಿನಗಳ ಕಾಲ ವ್ಯಾಪಕ ಮಳೆಯಾಗಲಿದೆ. ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯನಗರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಯನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ.

ಅದೇ ರೀತಿ ಕಲಬುರಗಿ ಜಿಲ್ಲೆಯಲ್ಲಿ 42.2 ಡಿಗ್ರಿ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದಲ್ಲಿ 34.7ಡಿಗ್ರಿ ಉಷ್ಣಾಂಶ ದಾಖಲಾಗಿದೆ. ಅಲ್ಲಿಯೂ ಸಹ ವ್ಯಾಪಕವಾಗಿ ಮಳೆ ಸಂಭವವಿದೆ. ರಾಜ್ಯಾದ್ಯಂತ ಮಳೆ ಸುರಿದರೆ ಈ ವರ್ಷ ರೈತರು ಹೆಚ್ಚಿನ ಸಂತಸದಿಂದ ಇದ್ದು ರೈತ ವರ್ಗಕ್ಕೆ ಇದು ಬಹಳ ಸಂತೋಷದಾಯಕ ಆಗಲಿದೆ.

Spread positive news

Leave a Reply

Your email address will not be published. Required fields are marked *