ಸಾರ್ವಜನಿಕರೇ ಮತ್ತೋಂದು ಆಘಾತ ಸುದ್ದಿ ರಾಜ್ಯದ ತುಂಬೆಲ್ಲಾ ಹರಡುತ್ತಿದೆ. ದೇಶ ಈಗಾಗಲೇ ಯಾವ ರೋಗದಿಂದ ಪಾರಾಗಿತ್ತೋ ಮತ್ತೆ ಅದೇ ರೋಗ ಕಾಣಿಸಿಕೊಂಡಿದೆ. ಕರ್ನಾಟಕದಲ್ಲಿ ಮತ್ತೆ ಕೊರೊನಾ ಆತಂಕ ಮನೆ ಮಾಡಿದ್ದು, ಮೇ ತಿಂಗಳಿನಲ್ಲಿ ಒಟ್ಟು 33 ಕೇಸ್ ದಾಖಲಾಗಿದೆ. ವಿದೇಶಗಳಲ್ಲಿ ಕೊರೊನಾ ಸೋಂಕು ಅಬ್ಬರಿಸುತ್ತಿರುವ ವಿಚಾರ ನಿಮಗೆ ಗೊತ್ತೇ ಇದೆ. ಇದೀಗ ರಾಜ್ಯದಲ್ಲೂ ಕೊರೊನಾ ಸೋಂಕು ಹೆಚ್ಚಳವಾಗುವ ಸಾಧ್ಯತೆಯಿದೆ.
ಕೊರೋನಾ ವೈರಸ್ಗಳು ಮಾನವನ ವಯಸ್ಕರು ಮತ್ತು ಮಕ್ಕಳಲ್ಲಿ ಸಾಮಾನ್ಯ ನೆಗಡಿಗಳಲ್ಲಿ ಗಮನಾರ್ಹ ಶೇಕಡಾವಾರು ಪ್ರಮಾಣವನ್ನು ಉಂಟುಮಾಡುತ್ತವೆ ಎಂದು ನಂಬಲಾಗಿದೆ. ಕೊರೋನಾ ವೈರಸ್ಗಳು ಪ್ರಮುಖ ರೋಗಲಕ್ಷಣಗಳೊಂದಿಗೆ ಶೀತವನ್ನು ಉಂಟುಮಾಡುತ್ತವೆ. ಉದಾ: ಜ್ವರ, ಗಂಟಲು ಊದಿಕೊಂಡ ಅಡೆನಾಯ್ಡಗಳು, ಮಾನವರಲ್ಲಿ ಮುಖ್ಯವಾಗಿ ಚಳಿಗಾಲ ಮತ್ತು ವಸಂತಕಾಲದ ಋತುಗಳಲ್ಲಿ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆಯಲ್ಲಿ 9 ತಿಂಗಳ ಮಗುವಿಗೆ ಕೊರೊನಾ ಸೋಂಕು ಧೃಡವಾಗಿದ್ದು, ವಾಣು ವಿಲಾಸ ಆಸ್ಪತ್ರೆಯಲ್ಲಿ ಮಗುವಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಬೆಂಗಳೂರಿನಲ್ಲಿ ಸದ್ಯ 16 ಸಕ್ರಿಯ ಪ್ರಕರಣಗಳಿದೆ. ರಾಜ್ಯದಲ್ಲಿ ಒಟ್ಟು 33 ಕೇಸ್ ದಾಖಲಾಗಿದೆ. ಭಾರತದಲ್ಲಿ ಸಕ್ರಿಯ ಕೋವಿಡ್ ಕೇಸ್ ಗಳ ಸಂಖ್ಯೆ 257 ಆಗಿದೆ.
ಮೇ ತಿಂಗಳಲ್ಲಿ ಈ ಸಂಖ್ಯೆ ಮತ್ತಷ್ಟು ಹೆಚ್ಚಾಗಿದೆ. ಜನವರಿಯಲ್ಲಿ ಮೂರು ಕೊರೊನಾ ಸೋಂಕು ಪ್ರಕರಣಗಳು ಪತ್ತೆಯಾಗಿದ್ದವು. ಫೆಬ್ರವರಿಯಲ್ಲಿ ಕೇವಲ 1 ಕೇಸ್ ಪತ್ತೆಯಾಗಿತ್ತು. ಮಾರ್ಚ್ನಲ್ಲೂ ಮೂರು, ಏಪ್ರಿಲ್ ತಿಂಗಳಲ್ಲೂ ಕೇವಲ 3 ಕೇಸ್ಗಳು ದಾಖಲಾಗಿದ್ದವು. ಆದರೆ, ಮೇ ತಿಂಗಳು ಇನ್ನೂ ಮುಗಿದಿಲ್ಲ, ಆಗಲೇ 33 ಪ್ರಕರಣಗಳು ಪತ್ತೆಯಾಗಿವೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆಯಲ್ಲಿ 9 ತಿಂಗಳ ಮಗುವಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಗುವನ್ನು ವಾಣಿ ವಿಲಾಸ ಆಸ್ಪತ್ರೆಗೆ ಸ್ಥಳಾಂತರ ಮಾಡಲಾಗಿದ್ದು, ಚಿಕಿತ್ಸೆ ಮುಂದುವರಿದಿದೆ. ಸದ್ಯ 16 ಸಕ್ರಿಯ ಪ್ರಕರಣಗಳಿವೆ.
ಕೊರೊನಾ ಈ ಹೆಸರು ಕೇಳಿದರೆ ಎಲ್ಲರೂ ಬೆಚ್ಚಿ ಬೀಳುತ್ತಾರೆ. ಹೌದು, ಅಷ್ಟರ ಮಟ್ಟಿಗೆ ಈ ಕೊರೊನಾ ವೈರಸ್ ಜನರನ್ನು ಹಿಂಡಿ ಹಿಪ್ಪೆ ಮಾಡಿತ್ತು. ಇದೀಗ ಹೊಸ ಅವತಾರದಲ್ಲಿ ಮತ್ತೆ ಕ್ರೂರಿ ಕೊರೊನಾ ಕಾಲಿಟ್ಟಿದ್ದು, ಸಿಂಗಾಪುರದಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ.
ವಿನಾಶಕಾರಿ ಕೋವಿಡ್ ಸಾಂಕ್ರಾಮಿಕ ರೋಗದಿಂದ ಜಗತ್ತು ಬಳಲಿದ ವರ್ಷಗಳ ನಂತರ, ವಿಶೇಷವಾಗಿ ಏಷ್ಯಾದ ಕೆಲವು ಭಾಗಗಳಲ್ಲಿ ವೈರಸ್ ಮತ್ತೆ ಉಲ್ಬಣಗೊಳ್ಳುತ್ತಿರುವಂತೆ ಕಾಣುತ್ತಿದೆ. ವರದಿಯ ಪ್ರಕಾರ, ಹಾಂಗ್ ಕಾಂಗ್ ಮತ್ತು ಸಿಂಗಾಪುರದ ಆರೋಗ್ಯ ಅಧಿಕಾರಿಗಳು ಎರಡೂ ಪ್ರದೇಶಗಳಲ್ಲಿ ಕೊರೊನಾವೈರಸ್ ಪ್ರಕರಣಗಳಲ್ಲಿ ಏರಿಕೆ ಕಂಡು ಬಂದಿದೆ ಎಂದು ತಿಳಿಸಿದ್ದಾರೆ.
ಭಾರತ ಮತ್ತು ಜಾಗತಿಕ ಮಟ್ಟದಲ್ಲಿ ಕೋವಿಡ್ ಸ್ಥಿತಿ:
ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ, ದೇಶದಾದ್ಯಂತ 257 ಸಕ್ರಿಯ ಕೋವಿಡ್ ಪ್ರಕರಣಗಳಿವೆ. ಮಹಾರಾಷ್ಟ್ರದಲ್ಲಿ 2 ಸಾವುಗಳು ಹಾಗೂ ಕೇರಳದಲ್ಲಿ 1 ಸಾವಿನ ವರದಿ ಲಭ್ಯವಾಗಿದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ, ಹಾಂಗ್ ಕಾಂಗ್ ಮತ್ತು ಸಿಂಗಾಪುರ ದೇಶಗಳಲ್ಲಿ ಕೋವಿಡ್ ಪ್ರಕರಣಗಳ ಏರಿಕೆ ಕಂಡುಬಂದಿದ್ದು, ಅವುಗಳ ಮೂಲವಾಗಿ ಹೊಸ ಒಮಿಕ್ರಾನ್ ಉಪರೂಪ JN.1 ಮತ್ತು ಅದರ ವಂಶಸ್ಥರನ್ನು ಪತ್ತೆಹಚ್ಚಲಾಗಿದೆ.
ವೃದ್ಧರು ಮತ್ತು ಗರ್ಭಿಣಿಯರಿಗೆ ಸಲಹೆಗಳು –
ಕೋವಿಡ್ -19 ಸಮಯದಲ್ಲಿ, ವೃದ್ಧರು ಮತ್ತು ಗರ್ಭಿಣಿಯರು ಇದರ ಬಗ್ಗೆ ಹೆಚ್ಚು ಜಾಗರೂಕರಾಗಿರಬೇಕು. ಈ ಕಾರಣದಿಂದಾಗಿ, ವೃದ್ಧರು (60 ವರ್ಷಕ್ಕಿಂತ ಮೇಲ್ಪಟ್ಟವರು) ಮತ್ತು ಗರ್ಭಿಣಿಯರು ಮನೆಯೊಳಗೆ ಇರಲು ಕಟ್ಟುನಿಟ್ಟಾಗಿ ಸೂಚಿಸಲಾಗಿದೆ ಎಂದು ಸಲಹೆ ನೀಡಲಾಗಿದೆ.
ನಿಯಮಿತವಾಗಿ ಕೈಗಳನ್ನು ತೊಳೆಯಿರಿ, ಕೆಮ್ಮುವಾಗ / ಸೀನುವಾಗ ಬಾಯಿಯನ್ನು ಮುಚ್ಚಿಕೊಳ್ಳಿ ಮತ್ತು ನಿಮ್ಮ ಮುಖವನ್ನು ಮುಟ್ಟಬೇಡಿ. ವೈರಸ್ ಹೆಚ್ಚು ಹರಡುವ ಪ್ರದೇಶಗಳಲ್ಲಿ ಮಾಸ್ಕ್ ಧರಿಸಿ. ನೀವು ಜನದಟ್ಟಣೆ ಇರುವ ಅಥವಾ ಸರಿಯಾಗಿ ಗಾಳಿ ಇಲ್ಲದ ಜಾಗದಲ್ಲಿದ್ದರೆ, ಮಾಸ್ಕ್ ಧರಿಸುವುದರಿಂದ ವೈರಸ್ ಹರಡುವುದನ್ನು ಕಡಿಮೆ ಮಾಡಬಹುದು.
ಇದೀಗ ಮಗುವಿಗೆ ಕೋವಿಡ್ ಸೋಂಕು ತಗುಲಿರುವುದು ದೃಢವಾಗಿದೆ ಎಂದು ತಿಳಿದು ಬಂದಿದೆ. ಮಗುವಿನಲ್ಲಿ ಸೋಂಕು ಪತ್ತೆಯಾದ ಬೆನ್ನಲ್ಲೇ ಕೋವಿಡ್ ಮಾನಿಟರ್ ಮಾಡಲು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸೂಚಿಸಿದ್ದಾರೆ. ಈ ಬಗ್ಗೆ ಕೇಂದ್ರದಿಂದ ಯಾವುದೇ ಗೈಡ್ ಲೈನ್ಸ್ ಬಂದಿಲ್ಲ. ಜನ ಆತಂಕಪಡುವ ಅಗತ್ಯ ಇಲ್ಲ ಎಂದು ಸಚಿವರು ಹೇಳಿದ್ದಾರೆ.