ಎಚ್ಚರಿಕೆ! 1000 ಕರೋನಾ ಕೇಸ್ ದಾಖಲೆ, 11 ಸಾವು ಪ್ರಕರಣ.

ಸಾರ್ವಜನಿಕರೇ ಇವತ್ತು ಕರೋನಾ ಎಲ್ಲೆಡೆ ಪಸರಿಸುತ್ತಿದೆ. ದೇಶದಲ್ಲಿ ಕೊರೋನಾ ವೈರಸ್ ಬಗ್ಗೆ ಮಾಹಿತಿ ತಿಳಿಯೋಣ. ಕಳೆದೆರಡು ವರ್ಷಗಳಲ್ಲಿ ತೆರೆಮರೆಗೆ ಸರಿದಿದ್ದ ಕೊರೋನಾ ಮಹಾಮಾರಿ ಮತ್ತೆ ಮುನ್ನೆಲೆಗೆ ಬಂದಿದೆ. ದೇಶದಲ್ಲಿ 1000ಕ್ಕೂ ಅಧಿಕ ಸಕ್ರಿಯ ಕೋವಿಡ್‌ ಪ್ರಕರಣಗಳು ವರದಿಯಾಗಿದ್ದು, ಸೋಂಕಿತರ ಸಂಖ್ಯೆಯಲ್ಲಿ ಕೇರಳ, ಮಹಾರಾಷ್ಟ್ರ ಮತ್ತು ದೆಹಲಿ ಮುಂಚೂಣಿಯಲ್ಲಿವೆ.

ಕೇರಳದಲ್ಲಿ ಅತಿ ಹೆಚ್ಚು 430 ಸಕ್ರಿಯ ಪ್ರಕರಣಗಳಿವೆ. ಮಹಾರಾಷ್ಟ್ರದಲ್ಲಿ 208, ದೆಹಲಿಯಲ್ಲಿ 104 ಮತ್ತು ಗುಜರಾತ್ನಲ್ಲಿ 83 ಪ್ರಕರಣಗಳು ದಾಖಲಾಗಿವೆ. ಕರ್ನಾಟಕದಲ್ಲಿ 80 ಪ್ರಕರಣಗಳಲ್ಲಿ 73 ಪ್ರಕರಣಗಳು ಮಾತ್ರ ಬೆಂಗಳೂರಿನಲ್ಲಿವೆ.

ಮಹಾರಾಷ್ಟ್ರ, ರಾಜಸ್ಥಾನ, ಪಶ್ಚಿಮ ಬಂಗಾಳ, ಕರ್ನಾಟಕ ಮತ್ತು ಮಧ್ಯಪ್ರದೇಶದಲ್ಲಿ ಒಟ್ಟು 11 ರೋಗಿಗಳು ಸಾವನ್ನಪ್ಪಿದ್ದಾರೆ. ಇವರಲ್ಲಿ ಒಂಬತ್ತು ಮಂದಿ ಒಂದೇ ವಾರದಲ್ಲಿ ಸಾವನ್ನಪ್ಪಿದ್ದಾರೆ.

ವೈರಸ್‌ನ ಒಮಿಕ್ರಾನ್‌ ತಳಿಯ 2 ಹೊಸ ಉಪ ರೂಪಾಂತರಿ ತಳಿಗಳಾದ ಎಲ್‌ಎಫ್.7 ಹಾಗೂ ಎನ್‌ಬಿ.1.8ಗಳು ಭಾರತದಲ್ಲಿ ಕೊರೊನಾ ಪ್ರಕರಣಗಳ ಏರಿಕೆಗೆ ಕಾರಣವಾಗುತ್ತಿದೆ. ಆದಾಗ್ಯೂ ಸೋಂಕಿತರು ಸೌಮ್ಯ ರೋಗ ಲಕ್ಷಣಗಳಿಂದ ಬಳಲುತ್ತಿದ್ದು, ಆಸ್ಪತ್ರೆಗೆ ದಾಖಲಾಗುವ ಅಗತ್ಯವಿಲ್ಲ ಎಂದು ವರದಿಯಾಗಿದೆ. ಆದರೆ ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆ ಕಂಡು ಬರುತ್ತಿರುವ ಹಿನ್ನೆಲೆಯಲ್ಲಿ ಎಲ್ಲ ರಾಜ್ಯಗಳ ಆರೋಗ್ಯಾಧಿಕಾರಿಗಳು ಕಟ್ಟೆಚ್ಚರ ವಹಿಸಿದ್ದಾರೆ.

ಭಾರತದ ಹಲವಾರು ರಾಜ್ಯಗಳಲ್ಲಿ ಕೋವಿಡ್ -19 ಪ್ರಕರಣಗಳು ಹೆಚ್ಚುತ್ತಿರುವ ಮಧ್ಯೆ, ದೇಶದಲ್ಲಿ ನಾಲ್ಕು ಹೊಸ ರೂಪಾಂತರಗಳು ಕಂಡುಬಂದಿವೆ. ಐಸಿಎಂಆರ್ ನಿರ್ದೇಶಕ ಡಾ.ರಾಜೀವ್ ಬಹ್ಲ್ ಮಾತನಾಡಿ, ದಕ್ಷಿಣ ಮತ್ತು ಪಶ್ಚಿಮ ಭಾರತದಿಂದ ಅನುಕ್ರಮಗೊಳಿಸಲಾದ ರೂಪಾಂತರಗಳು ಎಲ್‌ಎಫ್ .7, ಎಕ್ಸ್‌ಎಫ್ಜಿ, ಜೆಎನ್ .1 ಮತ್ತು ಎನ್ಬಿ .1.8.1 ಸರಣಿಗೆ ಸೇರಿವೆ”ಎಂದರು.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಪ್ರಕಾರ, ಕಳೆದ ಒಂದು ವಾರದಲ್ಲಿ 787 ಹೊಸ ರೋಗಿಗಳು ದಾಖಲಾಗಿದ್ದಾರೆ. ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ನಿರ್ದೇಶಕ ಡಾ.ರಾಜೀವ್ ಬಹ್ಲ್ ಮಾತನಾಡಿ, ಈವರೆಗೆ 4 ರೂಪಾಂತರಗಳು ಕಂಡುಬಂದಿವೆ ಎಂದಿದ್ದಾರೆ.

ಈ ಬಗ್ಗೆ ಕೇಂದ್ರ ಆರೋಗ್ಯ ಇಲಾಖೆ ತನ್ನ ಪೋರ್ಟಲ್‌ನಲ್ಲಿ ಮಾಹಿತಿ ನೀಡಿದ್ದು, ‘ದೇಶದಲ್ಲಿ ಒಟ್ಟು 1009 ಸಕ್ರಿಯ ಕೋವಿಡ್‌ ಸೋಂಕಿರತರಿದ್ದು, ಇದರಲ್ಲಿ 752 ಪ್ರಕರಣಗಳು ಇತ್ತೀಚಿನದ್ದಾಗಿವೆ. ಕೇರಳದಲ್ಲಿ ಅತಿಹೆಚ್ಚು 430 ಪ್ರಕರಣಗಳು ಪತ್ತೆಯಾಗಿವೆ. ಉಳಿದಂತೆ ಮಹಾರಾಷ್ಟ್ರದಲ್ಲಿ 209, ದೆಹಲಿಯಲ್ಲಿ 104, ಕರ್ನಾಟಕದಲ್ಲಿ 47 ಸೋಂಕಿತರಿದ್ದಾರೆ.

ಅಂಡಮಾನ್ ನಿಕೋಬಾರ್, ಅರುಣಾಚಲ ಪ್ರದೇಶ, ಅಸ್ಸಾಂ, ಬಿಹಾರ, ಹಿಮಾಚಲ ಪ್ರದೇಶ ಮತ್ತು ಜಮ್ಮು ಕಾಶ್ಮೀರಗಳಲ್ಲಿ ಪ್ರಸ್ತುತ ಯಾವುದೇ ಸಕ್ರಿಯ ಪ್ರಕರಣಗಳು ವರದಿಯಾಗಿಲ್ಲ’ ಎಂದು ತಿಳಿಸಿದೆ.

ಈ ಬಾರಿ ಕೋವಿಡ್ ಪ್ರಕರಣಗಳು ವೇಗವಾಗಿ ಹೆಚ್ಚುತ್ತಿಲ್ಲ. ಹೊಸ ರೂಪಾಂತರಿಗಳು ನಮ್ಮ ಹಿಂದಿನ ರೋಗನಿರೋಧಕ ಶಕ್ತಿಯನ್ನು ತಪ್ಪಿಸುತ್ತಿವ ಸಾಧ್ಯತೆಯಿರುತ್ತದೆ. ಆದರೆ ಈ ಬಾರಿ ಹಾಗೆ ಚಿಂತಿಸುವ ಅಗತ್ಯವೂ ಇಲ್ಲ. ಗಂಭೀರ ಪ್ರಕರಣಗಳ ಶೇಕಡಾವಾರು ಪ್ರಮಾಣವೂ ಈ ಬಾರಿ ಕಡಿಮೆಯಿದೆ. ನಾವು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದೇವೆ. ಸಾರ್ವಜನಿಕರು ಜಾಗರೂಕರಾಗಿರಬೇಕು. ಆದರೆ ಚಿಂತಿಸುವ ಅಗತ್ಯವಿಲ್ಲ’ ಎಂದರು.

Spread positive news

Leave a Reply

Your email address will not be published. Required fields are marked *