
ಭಾರಿ ಮಳೆ ಹಿನ್ನೆಲೆ ರೆಡ್ ಅಲರ್ಟ್, ನಾಲ್ಕು ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ
ರೈತರೇ ಪೂರ್ವ ಮುಂಗಾರು ಮಳೆ ಅಬ್ಬರ ಮುಂದುವರಿದಿದೆ. ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮತ್ತೆ ಮುಂಗಾರು ಆರ್ಭಟ ಜೋರಾಗಿದೆ. ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ಥಗೊಂಡಿದೆ. ಕರಾವಳಿ ಜಿಲ್ಲೆಗಳು ಹಾಗೂ ಒಳನಾಡಿನ ಜಿಲ್ಲೆಗಳಾದ್ಯಂತ ಆಗಾಗ ಭಾರೀ ಮಳೆ ಆಗುತ್ತಿದೆ. ಗುಡುಗು ಸಹಿತ ಅತ್ಯಧಿಕ ಮಳೆ ಆರ್ಭಟ ಇಂದಿನಿಂದ ಮುಂದಿನ 05 ದಿನಗಳವರೆಗೆ (ಜೂನ್ 13) ಕಂಡು ಬರಲಿದೆ. ಧಾರವಾಡದಲ್ಲಿ ಮಳೆಯ ಅಬ್ಬರ ಮುಂದುವರೆದಿರುವುದರಿಂದ ಜಿಲ್ಲಾಡಳಿತ ಇಂದು ಕೂಡ ಅಂಗನವಾಡಿ, ಶಾಲೆ, ಕಾಲೇಜುಗಳಿಗೆ ರಜೆ ಘೋಷಿಸಿದೆ. ಚಿಕ್ಕಮಗಳೂರು ಜಿಲ್ಲೆಗಳಲ್ಲಿ…