ಭಾರಿ ಮಳೆ ಹಿನ್ನೆಲೆ ರೆಡ್ ಅಲರ್ಟ್, ನಾಲ್ಕು ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ

ರೈತರೇ ಪೂರ್ವ ಮುಂಗಾರು ಮಳೆ ಅಬ್ಬರ ಮುಂದುವರಿದಿದೆ. ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮತ್ತೆ ಮುಂಗಾರು ಆರ್ಭಟ ಜೋರಾಗಿದೆ. ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ಥಗೊಂಡಿದೆ. ಕರಾವಳಿ ಜಿಲ್ಲೆಗಳು ಹಾಗೂ ಒಳನಾಡಿನ ಜಿಲ್ಲೆಗಳಾದ್ಯಂತ ಆಗಾಗ ಭಾರೀ ಮಳೆ ಆಗುತ್ತಿದೆ. ಗುಡುಗು ಸಹಿತ ಅತ್ಯಧಿಕ ಮಳೆ ಆರ್ಭಟ ಇಂದಿನಿಂದ ಮುಂದಿನ 05 ದಿನಗಳವರೆಗೆ (ಜೂನ್ 13) ಕಂಡು ಬರಲಿದೆ.

ಧಾರವಾಡದಲ್ಲಿ ಮಳೆಯ ಅಬ್ಬರ ಮುಂದುವರೆದಿರುವುದರಿಂದ ಜಿಲ್ಲಾಡಳಿತ ಇಂದು ಕೂಡ ಅಂಗನವಾಡಿ, ಶಾಲೆ, ಕಾಲೇಜುಗಳಿಗೆ ರಜೆ ಘೋಷಿಸಿದೆ. ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಎರಡು ದಿನಗಳ ಕಾಲ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಅಂಗನವಾಡಿ ಕೇಂದ್ರಗಳಿಗೆ ರಜೆ ನೀಡಲಾಗಿದೆ. ಚಿಕ್ಕಮಗಳೂರು, ಮೂಡಿಗೆರೆ, ಕಳಸ, ಕೊಪ್ಪ, ಶೃಂಗೇರಿ, ಎನ್.ಆರ್ ಪುರ ತಾಲೂಕಿನ ಅಂಗನವಾಡಿ ಕೇಂದ್ರಗಳಿಗೆ ರಜೆ ಘೋಷಿಸಲಾಗಿದೆ.

ಉಡುಪಿಯಲ್ಲಿ ನಿರಂತರವಾಗಿ ಮಳೆಯಾಗುತ್ತಿದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ. ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಡಾ.ವಿದ್ಯಾಕುಮಾರಿ ಆದೇಶ ಹೊರಡಿಸಿದ್ದಾರೆ.

ಇನ್ನು ಕೊಡಗು ಜಿಲ್ಲೆಯಲ್ಲಿ ಭಾರಿ ಮಳೆ ಮುಂದುವರೆದಿದೆ. ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ, ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ವೆಂಕಟರಾಜಾ ಆದೇಶ ಹೊರಡಿಸಿದ್ದಾರೆ.

ಕರ್ನಾಟದ ಕೆಲವು ಭಾಗಗಳಲ್ಲಿ ಅನಿರೀಕ್ಷಿತ ಮಳೆ ಅಥವಾ ಹಿಮಪಾತವು ನಮ್ಮ ದೈನಂದಿನ ವೇಳಾಪಟ್ಟಿಯನ್ನು ಅಡ್ಡಿಪಡಿಸಬಹುದಾದ್ದರಿಂದ ಹವಾಮಾನವು ನಮ್ಮ ಜೀವನದಲ್ಲಿ ಮಹತ್ವದ ಪಾತ್ರ ವಹಿಸುತ್ತದೆ. ರಾಜ್ಯದ ಹಲವಾರು ಭಾಗಗಳಲ್ಲಿ ಪೂರ್ವ ಮಾನ್ಸೂನ್ ಮಳೆ ಮತ್ತು ಗುಡುಗು ಸಹಿತ ಮಳೆಯಾಗುತ್ತಿರುವುದರಿಂದ ನಿರ್ದಿಷ್ಟ ದಿನದಂದು ಆಕಾಶವು ಹೇಗೆ ವರ್ತಿಸಲು ಯೋಜಿಸುತ್ತದೆ ಎಂಬುದರ ಕುರಿತು ನವೀಕೃತವಾಗಿರುವುದು ಅಗತ್ಯವಾಗುತ್ತದೆ. 3 ತಿಂಗಳಲ್ಲಿ ಸಾವಿರ ಮಿಮೀ ವರ್ಷಧಾರೆ ಸಾಧ್ಯತೆ.

ಜೂನ್ 13ರಿಂದ ಮಳೆ(Rain)ಯ ಪ್ರಮಾಣ ಮತ್ತಷ್ಟು ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. 9 ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಗದಗ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗಲಿದೆ.

ವಿಜಯನಗರ, ತುಮಕೂರು, ರಾಮನಗರ, ಮೈಸೂರು, ಮಂಡ್ಯ, ಹಾಸನ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಬಳ್ಳಾರಿ, ಯಾದಗಿರಿ, ರಾಯಚೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಒಟ್ಟಿನಲ್ಲಿ ಇಂದಿನಿಂದಲೇ ರಾಜ್ಯಾದ್ಯಂತ ಮಳೆಯ ಪ್ರಮಾಣ ಹೆಚ್ಚಾಗಲಿದೆ. ಬೆಂಗಳೂರು ಸೇರಿ ಹಲವೆಡೆ ಬುಧವಾರ ಮಳೆಯಾಗಿತ್ತು.

ಮಂಗಳೂರು, ಕೋಟಾ, ಮುಲ್ಕಿ, ಕುಂದಾಪುರ, ಚಿಟಗುಪ್ಪ, ಭಾಲ್ಕಿ, ದಾವಣಗೆರೆ, ಬೇಗೂರು, ಹರಪನಹಳ್ಳಿ, ಬಾಳೆಹೊನ್ನೂರು, ದಾವಣಗೆರೆ, ಗೌರಿಬಿದನೂರು, ಕಕ್ಕೇರಿ, ಮೂಡುಬಿದಿರೆ, ಮಾಣಿ, ಹುಮ್ನಾಬಾದ್, ಲಕ್ಷ್ಮೇಶ್ವರ, ಲಿಂಗಸುಗೂರು, ಯಡ್ರಾಮಿ, ಕಮಲಾಪುರ, ಶಾಹಪುರ,ಬೀದರ್, ಚನ್ನಗಿರಿ, ಚಾಮರಾಜನಗರ, ಕೃಷ್ಣರಾಜಪೇಟೆಯಲ್ಲಿ ಮಳೆಯಾಗಿದೆ.

ಎಚ್ಎಎಲ್ನಲ್ಲಿ31.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 30.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 31.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 31.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬಂಟ್ವಾಳ, ಬೆಳ್ತಂಗಡಿ, ಕುಕ್ಕೆ ಸುಬ್ರಹ್ಮಣ್ಯ, ಧರ್ಮಸ್ಥಳ, ಪುತ್ತೂರು, ಮೂಡಬಿದ್ರೆ ಪ್ರದೇಶಗಳಲ್ಲಿ ಭಾರಿ ಮಳೆಯಾಗುತ್ತಿದೆ. ಅರಬ್ಬಿ ಸಮುದ್ರದಲ್ಲಿ ಅಲೆಗಳ ಅರ್ಭಟಕ್ಕೆ ಕಡಲ್ಗೊರೆತ ಉಂಟಾಗಿದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ದಕ್ಷಿಣ ಕನ್ನಡ ಜಿಲ್ಲಾಡಳಿತವು ಎಚ್ಚರಿಕೆ ಕೊಟ್ಟಿದೆ.

ಜಿಲ್ಲೆಯ ಕೆಲವು ಭಾಗಗಳಲ್ಲಿ ಗುಡುಗು ಸಿಡಿಲಿನೊಂದಿಗೆ ಹೆಚ್ಚಿನ ಗಾಳಿಯಿಂದ ಕೂಡಿದ ಮಳೆಯಾಗುವ ಸಾಧ್ಯತೆಯಿರುವ ಕಾರಣ ಅವಘಡ ಘಟಿಸಿದರೆ ಸ್ಪಂದಿಸಲು ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾ ತುರ್ತು ಕಾರ್ಯಾಚರಣೆ ಕೇಂದ್ರವನ್ನು ತೆರೆಯಲಾಗಿದೆ. ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿತೀರ ಸಮುದ್ರತೀರಕ್ಕೆ ಹೋಗದಂತೆ ಸಾರ್ವಜನಿಕರು ಹಾಗೂ ಮುಖ್ಯವಾಗಿ ಮಕ್ಕಳು ಹೋಗದಂತೆ ಪಾಲಕರು ಜಾಗ್ರತೆ ವಹಿಸಬೇಕು’ ಎಂದು ಜಿಲ್ಲಾಧಿಕಾರಿ ಕೆ.ಲಕ್ಷ್ಮಿಪ್ರಿಯಾ ತಿಳಿಸಿದ್ದಾರೆ.

Spread positive news

Leave a Reply

Your email address will not be published. Required fields are marked *