ರೈತರೇ ಎಫ್ ಐಡಿ(FID) ಇರದಿದ್ದರೆ ಬೆಳೆಹಾನಿ ಪರಿಹಾರ ಬರಲ್ಲ.
ಎಫ್ ಐಡಿ(FID) ::ರೈತರೇ ಗಮನಿಸಿ ಈಗಾಗಲೇ ಪ್ರಸಕ್ತ 2025 ನೇ ಸಾಲಿನ ಅಗಸ್ಟ್ ಮಾಹೆಯಲ್ಲಿ ಗದಗ ಜಿಲ್ಲೆಯಲ್ಲಿ ಅತಿಯಾದ ಮಳೆಯಾಗಿ ಗದಗ, ಮುಂಡರಗಿ, ನರಗುಂದ, ರೋಣ, ಲಕ್ಷ್ಮೇಶ್ವರ ಗಜೇಂದ್ರಗಡ ಹಾಗೂ ಶಿರಹಟ್ಟಿ ತಾಲೂಕುಗಳಲ್ಲಿ ಕಟಾವು ಹಂತದಲ್ಲಿದ್ದ ಹೆಸರು,ಗೋವಿನಜೋಳ, ಶೇಂಗಾ, ಹತ್ತಿ ಹಾಗೂ ತೋಟಗಾರಿಕೆ ಬೆಳೆಗಳು ಹಾನಿಗೊಳಗಾಗಿರುತ್ತವೆ. ಎನ್.ಡಿ.ಆರ್.ಎಫ್,ಎಸ್.ಡಿಆರ್.ಎಫ್ ಮಾರ್ಗಸೂಚಿಯನ್ವಯ ಕಂದಾಯ, ಕೃಷಿ, ತೋಟಗಾರಿಕೆ ಇಲಾಖೆಯಿಂದ ಜಂಟಿ ಸಮೀಕ್ಷೆ ಕೈಗೊಂಡು ಒಟ್ಟಾರೆಯಾಗಿ 1,32,586 ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿಯಾದ ಬಗ್ಗೆ ಸರಕಾರಕ್ಕೆ ವರದಿ ಸಲ್ಲಿಸಲಾಗಿದೆ ಎಂದು ಜಂಟಿ ಕೃಷಿ…

