ಮುಂದಿನ 3 ದಿನಗಳ ಮಳೆ ಸೂಚನೆ ನೀಡಿದ ಹವಮಾನ ಇಲಾಖೆ

ಇಂದು ಕೂಡ ರಾಜ್ಯಾದ್ಯಂತ ಮಳೆರಾಯ ಅಬ್ಬರಿಸಿದ್ದಾನೆ. ಅದರಲ್ಲೂ ಸಿಲಿಕಾ‌ನ್ ಸಿಟಿಯಲ್ಲಿ ಮಧ್ಯಾಹ್ನದ ವೇಳೆಗೆ ವಾತಾವರಣ ತಣ್ಣಗಾಗಿತ್ತು. ಸಂಜೆ ವೇಳೆಗೆ ಅಂದ್ರೆ ನಾಲ್ಕೈದು ಗಂಟೆಗೆ ಮಳೆ ಜೋರಾಗಿತ್ತು. ಸಂಜೆಯ ತನಕ ಬೆಂಗಳೂರಿನಲ್ಲಿ ಮಳೆ ಸುರಿದಿದೆ. ಇನ್ನು ಮೂರು ದಿನಗಳ ಕಾಲ ರಾಜ್ಯದಲ್ಲಿ ಮಳೆಯ ಅಬ್ಬರ ಇರಲಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹೀಗಾಗಿ ಹೊರಗೆ ಹೋಗುವವರು ಮುಂಜಾಗ್ರತ ಕ್ರಮ ತೆಗೆದುಕೊಳ್ಳುವುದು ಉತ್ತಮ. ಹೊರಗೆ ಹೋಗುವಾಗ ಛತ್ರಿ ತೆಗೆದುಕೊಂಡು ಹೋಗುವುದೋ, ರೇನ್ ಕೋಟ್ ತೆಗೆದುಕೊಂಡು ಹೋಗುವ ಅಭ್ಯಾಸ ಮಾಡಿಕೊಳ್ಳಿ….

Spread positive news
Read More

PM KISAN: ಪಿ.ಎಂ ಕಿಸಾನ್ ₹2000 ರೂ. ಹಣ ಬಿಡುಗಡೆ? 20ನೇ ಕಂತಿನ ದಿನಾಂಕ ಪ್ರಕಟಣೆ!

ಭಾರತ ಸರ್ಕಾರ ಹಲವು ಯೋಜನೆಗಳನ್ನು ಪರಿಚಯಿಸುತ್ತಿದೆ. ಮೋದಿ ಸರ್ಕಾರ ರೈತರಿಗಾಗಿ ಹಲವು ಯೋಜನೆಗಳನ್ನು ಪರಿಚಯಿಸಿದೆ. ಅವುಗಳಲ್ಲಿ ಒಂದು ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ. ಈ ಯೋಜನೆಯ ಲಾಭ ರೈತರಿಗೆ ಸಿಗಲಿದೆ. ನೀವು ಈ ಯೋಜನೆಗೆ ಅರ್ಹರಾಗಿದ್ದರೆ, ಈ ಯೋಜನೆಯಡಿಯಲ್ಲಿ ಪಡೆದ ಕಂತುಗಳ ಪ್ರಯೋಜನಗಳನ್ನು ನೀವು ಪಡೆಯಬಹುದು.ಇಲ್ಲಿಯವರೆಗೆ 19ನೇ ಕಂತಿನ ಹಣವನ್ನು ಪಡೆದ ರೈತರು ಈಗ 20ನೇ ಕಂತಿನ ಹಣಕ್ಕಾಗಿ ಕಾಯುತ್ತಿದ್ದಾರೆ. ಈ ಯೋಜನೆಗೆ ಕೇಂದ್ರ ಸರ್ಕಾರ ಪ್ರತಿ ನಾಲ್ಕು ತಿಂಗಳಿಗೊಮ್ಮೆ ಹಣವನ್ನು ಬಿಡುಗಡೆ ಮಾಡುತ್ತದೆ….

Spread positive news
Read More

10ರಿಂದ15 ಲಕ್ಷ ರೂ ದೀರ್ಘಾವಧಿ ಸಾಲ ಏರಿಕೆ ನಿಜಾ? ಸಂಪೂರ್ಣ ಮಾಹಿತಿ ಇಲ್ಲಿದೆ!

ಪ್ರೀಯ ರೈತರೇ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಕೃಷಿ ಇಲಾಖೆ ಹಾಗೂ ಇತರೆ ಇಲಾಖೆಗಳಿಗೆ ಸಂಬಂಧಿಸಿದ ಕೆಲಸಗಳು ನಡೆದಿವೆ. ಅದೇ ರೀತಿ ಈಗ ರಾಜ್ಯದಲ್ಲಿ ಸರ್ಕಾರವು ಕೃಷಿ ಚಟುವಟಿಕೆಗಳಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿವೆ. ಹಾಗಾಗಿ ಕರ್ನಾಟಕ ರಾಜ್ಯ ಸಹಕಾರ ಕೃಷಿ ಗ್ರಾಮೀಣಾಭಿವೃದ್ಧಿ ಬ್ಯಾಂಕ್‌ನಲ್ಲಿ (ಕೆಎಸ್ಬಿಎಆರ್‌ಡಿಬಿ) ದೀರ್ಘಾವಧಿ ಸಾಲದ ಮೊತ್ತವನ್ನು ಸರ್ಕಾರ 10ರಿಂದ 15 ಲಕ್ಷ ರೂ.ಗೆ ಏರಿಕೆ ಮಾಡಿದೆ. ಗರಿಷ್ಠ 10 ಲಕ್ಷ ರೂ.ತನಕ ಒಬ್ಬ ರೈತರಿಗೆ ಸಾಲ ನೀಡಲು ಮಾತ್ರ…

Spread positive news
Read More

ಅರಿಶಿಣ, ನಿಂಬೆ, ಅಣಬೆ, ಕೃಷಿಗೆ ಆದ್ಯತೆ! ಕೈ ತುಂಬಾ ಲಾಭ ಪಡಿತಿದ್ದಾರೆ ಈ ರೈತರು

ಅಕ್ಕಿ, ಜೋಳ, ರಾಗಿ, ಗೋಧಿಯಂತಹ ಸಾಂಪ್ರದಾಯಿಕ ಬೆಳೆಗಳಿಗಿಂತ ಮಸಾಲೆ ಪದಾರ್ಥಗಳು, ವಿಭಿನ್ನ ಹಣ್ಣುಗಳು, ತರಕಾರಿಗಳಂತಹ ಕೃಷಿ ವಿಧಾನ ರೈತರಿಗೆ ಲಾಭದಾಯಕವಾಗಿದೆ. ಹೆಚ್ಚಿನ ಲಾಭ ಮತ್ತು ದೀರ್ಘಾವಧಿಯ ಇಳುವರಿಯನ್ನು ಇವುಗಳು ನೀಡುವ ಕಾರಣ ರೈತರಿಗೆ ನಷ್ಟದ ಮಾತಿಲ್ಲ. ಸಾಂಪ್ರದಾಯಿಕ ಬೆಳೆ ಬೆಳೆದು ಲಾಭವನ್ನೇ ನೋಡದ ರೈತರು ವಿಭಿನ್ನ ಬೆಳೆ ಬೆಳೆಯುವ ಮೂಲಕ ಕೃಷಿಯಲ್ಲಿ ಲಾಭದ ಸಿಹಿ ಕಾಣುತ್ತಿದ್ದಾರೆ. ಅರಿಶಿಣ, ಅಲೋವೆರಾದಂತಹ ಔಷಧಿ ಮತ್ತು ಮಸಾಲೆ ಪದಾರ್ಥಗಳನ್ನು ಬೆಳೆದು ಕೈ ತುಂಬಾ ಲಾಭ ಗಳಿಸಿರುವ ಐದು ರೈತರ ಬಗ್ಗೆ ನೋಡೋಣ…

Spread positive news
Read More

BIG NEWS: ಸಾರ್ವಜನಿಕರೇ ಗುಡುಗು-ಸಿಡಿಲಿನಲ್ಲಿ ತಪ್ಪದೇ ಈ ಸೂಚನೆಗಳನ್ನು ಪಾಲಿಸಿ.!

ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರವು ಗುಡುಗು ಮತ್ತು ಸಿಡಿಲು ಬಡಿತದಿಂದ ಉಂಟಾಗುವ ಪ್ರತಿಕೂಲ ಪರಿಣಾಮಗಳನ್ನು ತಗ್ಗಿಸಲು ಪ್ರಾಧಿಕಾರದಿಂದ ಗುಡುಗು ಮತ್ತು ಸಿಡಿಲು ಬಡಿತ ಪ್ರತಿಕೂಲ ಪರಿಣಾಮಗಳನ್ನು ತಗ್ಗಿಸಲು ಮಾರ್ಗಸೂಚಿಗಳನ್ನು ಹೊರಡಿಸಿದ್ದು, ಸಾರ್ವಜನಿಕರು ಅವುಗಳನ್ನು ಕಡ್ಡಾಯವಾಗಿ ಪಾಲಿಸಿ, ನೈಸರ್ಗಿಕ ಅವಘಡಗಳಿಂದ ಆಗುವ ಹಾನಿಯಿಂದಾಗಿ ತಪ್ಪಿಸಿಕೊಳ್ಳಬಹುದಾಗಿದೆ. ಕರ್ನಾಟಕದ ಹಲವು ಭಾಗಗಳಲ್ಲಿ ಗುಡುಗು ಸಿಡಿಲು ಸಾಮಾನ್ಯವಾಗಿ ಮುಂಗಾರು ಪೂರ್ವದಲ್ಲಿ ಹಾಗೂ ಮುಂಗಾರಿನಲ್ಲಿ ಕಾಣಿಸಿಕೊಳ್ಳುತ್ತದೆ. ಸಿಡಿಲು ಸಾಮಾನ್ಯವಾಗಿ ಮಧ್ಯಾಹ್ನ ಅಥವಾ ಸಂಜೆ ಸಂಭವಿಸುವ ಸಾಧ್ಯತೆ ಹೆಚ್ಚಾಗಿರುತ್ತದೆ. ಗುಡುಗು ಸಿಡಿಲಿನಿಂದಾಗುವ ಅಪಾಯಗಳನ್ನು ತಗ್ಗಿಸಲು ಈ…

Spread positive news
Read More

ಮಾರ್ಚ್ 31 ರ ನಂತರ ಎರಡು ಕಂತುಗಳ ಗೃಹಲಕ್ಷ್ಮಿ ಹಣ ಬಿಡುಗಡೆ.

ಗೃಹಲಕ್ಷ್ಮಿ ಯೋಜನೆಯ ಹಣಕ್ಕಾಗಿ ಕಾಯುತ್ತಿರುವವರಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಅವರು ಗುಡ್‌ನ್ಯೂಸ್‌ ಕೊಟ್ಟಿದ್ದಾರೆ. ಗೃಹಲಕ್ಷ್ಮಿ ಯೋಜನೆಯ ಎರಡು ಕಂತಿನ ಹಣ ಬಾಕಿ ಉಳಿದಿದ್ದು. ಈ ಬಾಕಿ ಮೊತ್ತ ಹಣ ಬಿಡುಗಡೆಯಾಗಿ ಮಹಿಳೆಯರು ಕಾಯುತ್ತಿದ್ದಾರೆ. ಪ್ರತಿ ತಿಂಗಳೂ ಸಹ ಗೃಹಲಕ್ಷ್ಮಿ ಹಣ ಸಕಾಲದಲ್ಲಿ ಬಿಡುಗಡೆ ಆಗುತ್ತಿಲ್ಲ. ಇನ್ನೂ ಇಲ್ಲಿಯ ವರೆಗೆ 2 ತಿಂಗಳ ಗೃಹಲಕ್ಷ್ಮಿ ಯೋಜನೆ ಹಣ ಬಿಡುಗಡೆಯಾಗಿಲ್ಲ. ಇದೀಗ ಈ ಎರಡು ಕಂತಿನ ಹಣ ಬಿಡುಗಡೆ ಮಾಡುವ ಬಗ್ಗೆ ಸಚಿವೆ ಲಕ್ಷ್ಮಿ…

Spread positive news
Read More

Rain alert: ರಾಜ್ಯದ ವಿವಿಧೆಡೆ ಮಿಂಚು ಸಹಿತ ಮಳೆ ಅಬ್ಬರ! ನಿಮ್ಮ ಜಿಲ್ಲೆಗೆ ಮಳೆ ಇದೆಯೇ?

ಮಂಗಳವಾರ ಕೊಡಗು, ಹಾಸನ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಒಂದೆರಡು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ (Weather forecast) ಸಾಧ್ಯತೆ ಇದೆ. ಉಡುಪಿ, ದಕ್ಷಿಣ ಕನ್ನಡ, ಬೆಳಗಾವಿ, ಧಾರವಾಡ, ಹಾವೇರಿ, ಬಾಗಲಕೋಟೆ, ಗದಗ ಮತ್ತು ಮೈಸೂರು ಜಿಲ್ಲೆಗಳ ಪ್ರತ್ಯೇಕ. ಸ್ಥಳಗಳಲ್ಲಿ ಲಘು ಮಳೆ/ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇನ್ನು ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳ ಕಾಲ ಭಾಗಶ:…

Spread positive news
Read More

ಯಶಸ್ವಿನಿ ಯೋಜನೆ ಹಾಗೂ ನೋಂದಣಿ, ನವೀಕರಣಕ್ಕೆ ಮಾರ್ಚ್ 31 ಕೊನೆ ದಿನ

ಯಶಸ್ವಿನಿ ಆರೋಗ್ಯ ರಕ್ಷಣಾ ಯೋಜನೆಗೆ ಹೊಸದಾಗಿ ಹಾಗೂ ನವೀಕರಣಕ್ಕಾಗಿ ಸರ್ಕಾರ ಹಾಗೂ ಸಹಕಾರ ಇಲಾಖೆ ಪ್ರಕಟಣೆ ಹೊರಡಿಸಿದ್ದು ಹೊಸ ಸದಸ್ಯರನ್ನು ನೋಂದಾಯಿಸಲು/ನವೀಕರಣಗೊಳಿಸಲು ಮಾರ್ಚ್ 31 ಕೊನೆಯ ದಿನವಾಗಿದೆ. ರಾಜ್ಯಾದ್ಯಂತ ಯಶಸ್ವಿನಿ ನೋಂದಣಿ ಪ್ರಕ್ರಿಯೆ ಪ್ರಗತಿಯಲ್ಲಿದ್ದು, ಡಿಸೆಂಬರ್-2024 ಮತ್ತು ಜನವರಿ-2025 ರ ತಿಂಗಳುಗಳಲ್ಲಿ ಹೆಚ್ಚಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ / ಹಾಲು ಉತ್ಪಾದಕರ ಸಹಕಾರ ಸಂಘಗಳು ಹಾಗೂ ಇತರೆ ಸಹಕಾರ ಸಂಘಗಳ ಆಡಳಿತ ಮಂಡಳಿಗೆ ಚುನಾವಣೆ ನಿಗದಿಯಾಗಿದ್ದು, ಇಲಾಖೆಯ ಕ್ಷೇತ್ರ ಸಿಬ್ಬಂದಿಗಳು / ಅಧಿಕಾರಿಗಳು ಚುನಾವಣಾ…

Spread positive news
Read More

ಬೆಂಬಲ ಬೆಲೆ ಯೋಜನೆಯಲ್ಲಿ ಕುಸುಬೆ ಖರೀದಿ ರೈತರು ನೋಂದಣಿ ಮಾಡಿಸಿಕೊಳ್ಳಿ

ಬೆಂಬಲ ಬೆಲೆ ಯೋಜನೆಯಲ್ಲಿ ಕುಸುಬಿ ಖರೀದಿ ಪ್ರಕ್ರಿಯೆ ಶೀಘ್ರದಲ್ಲಿ ಆರಂಭವಾಗಲಿದ್ದು, ರೈತರು ನೋಂದಣಿ ಮಾಡಿಸಿಕೊಳ್ಳಬೇಕು. ಬೀದರ್, ಧಾರವಾಡ, ದಾವಣಗೆರೆ, ಗದಗ, ವಿಜಯಪುರ, ಕಲಬುರಗಿ, ಚಿತ್ರದುರ್ಗ, ಕೊಪ್ಪಳ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಖರೀದಿ ಕೇಂದ್ರಗಳನ್ನು ಆರಂಭಿಸಲಿದ್ದು, ಪ್ರತಿ ಕ್ವಿಂಟಾಲ್ ಗೆ ₹5,940 ನಿಗದಿಪಡಿಸಲಾಗಿದೆ. ಪ್ರತಿ ಎಕರೆಗೆ 5 ಕ್ವಿಂಟಾಲ್ ನಂತೆ ಒಬ್ಬ ರೈತರಿಂದ ಗರಿಷ್ಠ 20 ಕ್ವಿಂಟಾಲ್ ಖರೀದಿ ಮಾಡಲಾಗುವುದು ಎಂದು ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಪಾಟೀಲ್ ಅವರು ತಿಳಿಸಿದ್ದಾರೆ. ಖರೀದಿ ಪ್ರಕ್ರಿಯೆ ನಂತರ ರೈತರ ಬ್ಯಾಂಕ್…

Spread positive news
Read More

ಹೈಡ್ರೋಪೋನಿಕ್ ತೋಟಗಾರಿಕೆ ಗೊತ್ತಾ? ಮಣ್ಣು ಇಲ್ಲದೆ ಸಸ್ಯ ಬೆಳೆಸುವುದು?

ಹೈಡ್ರೋಪೋನಿಕ್ ತೋಟಗಾರಿಕೆ ಎಂಬುದು ಮಣ್ಣಿನಿಲ್ಲದೆ ಸಸ್ಯಗಳನ್ನು ಬೆಳೆಸುವ ಕ್ರಾಂತಿಕಾರಿ ವಿಧಾನವಾಗಿದ್ದು, ಬದಲಿಗೆ ಪೋಷಕಾಂಶಗಳಿಂದ ಕೂಡಿದ ನೀರಿನ ದ್ರಾವಣಗಳನ್ನು ಬಳಸುತ್ತದೆ. ಈ ತಂತ್ರವು ನಗರ ತೋಟಗಾರರು ಮತ್ತು ಸುಸ್ಥಿರತೆ ಉತ್ಸಾಹಿಗಳಲ್ಲಿ ಜನಪ್ರಿಯತೆಯನ್ನು ಗಳಿಸಿದೆ ಏಕೆಂದರೆ ಇದು ಸೀಮಿತ ಸ್ಥಳಗಳಲ್ಲಿ ಪರಿಣಾಮಕಾರಿ ಸಸ್ಯ ಬೆಳವಣಿಗೆಗೆ ಅನುವು ಮಾಡಿಕೊಡುತ್ತದೆ. ನೀವು ಸಣ್ಣ ಅಪಾರ್ಟ್ಮೆಂಟ್ನಲ್ಲಿ ವಾಸಿಸುತ್ತಿರಲಿ ಅಥವಾ ಒಳಾಂಗಣದಲ್ಲಿ ತಾಜಾ ಉತ್ಪನ್ನಗಳನ್ನು ಬೆಳೆಯಲು ಬಯಸುತ್ತಿರಲಿ, ಹೈಡ್ರೋಪೋನಿಕ್ಸ್ ಒಂದು ನವೀನ ಮತ್ತು ಪರಿಸರ ಸ್ನೇಹಿ ಪರಿಹಾರವನ್ನು ನೀಡುತ್ತದೆ. ಹೈಡ್ರೋಪೋನಿಕ್ಸ್ ಎಂಬುದು ನೀರಿನ ಮೂಲಕ ನೇರವಾಗಿ…

Spread positive news
Read More