ರಾಜ್ಯದಲ್ಲಿ `ರೇಷನ್ ಕಾರ್ಡ್’ ತಿದ್ದುಪಡಿ, ಹೊಸ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭ
ಕರ್ನಾಟಕ ರಾಜ್ಯದ ಪಡಿತರ ಚೀಟಿದಾರರಿಗೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯು ಮಹತ್ವದ ಸುದ್ದಿಯೊಂದನ್ನು ನೀಡಿದೆ. ಬಾಕಿ ಉಳಿದಿದ್ದ ಪಡಿತರ ಚೀಟಿಗಳ ತಿದ್ದುಪಡಿ ಹಾಗೂ ಹೊಸ ಅರ್ಜಿ ಸಲ್ಲಿಕೆಗೆ ಮೇ 8, 2026ರಿಂದ ಅವಕಾಶ ಕಲ್ಪಿಸಲಾಗಿದೆ. ಈ ಕುರಿತು ಇಲಾಖೆಯು ಅಧಿಕೃತ ಪ್ರಕಟಣೆ ಹೊರಡಿಸಿದ್ದು, ಪ್ರಮುಖವಾಗಿ ಇ-ಶ್ರಮ (E-Shram), ಪಿವಿಟಿಜಿ (PVTG) ಹಾಗೂ ವೈದ್ಯಕೀಯ ತುರ್ತು ಪರಿಸ್ಥಿತಿಗೆ ಸಂಬಂಧಿಸಿದ ಹೊಸ ಪಡಿತರ ಚೀಟಿ ಅರ್ಜಿ ಸಲ್ಲಿಕೆ ಮತ್ತು ತಿದ್ದುಪಡಿ ಮಾಡ್ಯೂಲ್ಗಳನ್ನು ಸಕ್ರಿಯಗೊಳಿಸಲಾಗಿದೆ. ಪ್ರಮುಖ ಸೇವೆಗಳು ಮತ್ತು ಸಮಯ:…

