ಈ ಯೋಜನೆಯಡಿ ಹನಿ ನೀರಾವರಿಗೆ ಶೇ. 90ರಷ್ಟು ಸಬ್ಸಿಡಿ ಸಿಗಲಿದೆ
ತೋಟಗಾರಿಕೆ ಇಲಾಖೆಯಿಂದ ಹನಿ ನೀರಾವರಿ ಅಳವಡಿಸಿಕೊಳ್ಳಲು ಆಸಕ್ತ ತೋಟಗಾರಿಕೆ ಬೆಳೆ ಬೆಳೆಯುವ ರೈತರಿಂದ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಅರ್ಜಿ ಅಹ್ವಾನಿಸಲಾಗಿದೆ. ಸಾಮಾನ್ಯ ವರ್ಗದ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ರೈತರು ಈ ಯೋಜನೆಯಡಿಯಲ್ಲಿ ಅರ್ಜಿಯನ್ನು ಸಲ್ಲಿಸಿ ಇದರ ಸದುಪಯೋಗ ಪಡೆದುಕೊಳ್ಳಬಹುದು. ತೋಟಗಾರಿಕೆ ಬೆಳೆಗಾರರಿಗೆ ಹನಿ ನೀರಾವರಿ ಘಟಕ ಅಳವಡಿಕೆಗೆ ಸಹಾಯಧನ ಕಾರ್ಯಕ್ರಮದಡಿ ತೋಟಗಾರಿಕೆ ಬೆಳೆಗಳಾದ, ಹಣ್ಣು, ತರಕಾರಿ, ಹೂವು, ಪ್ಲಾಂಟೇಶನ್ ಬೆಳೆಗಳು, ಔಷಧಿ, ಸುಗಂಧ ಸಸ್ಯಗಳು ಹಾಗೂ ಸಾಂಬಾರು ಪದಾರ್ಥ ಬೆಳೆಗಳಿಗೆ…

