ಕನಿಷ್ಠ ಬೆಂಬಲ ಯೋಜನೆಯಡಿ ಸರ್ಕಾರದಿಂದ ಬಿಳಿ ಜೋಳ ಖರೀದಿ

ಕನಿಷ್ಠ ಬೆಂಬಲ ಯೋಜನೆಯಡಿ ಸರ್ಕಾರದಿಂದ ಬಿಳಿ ಜೋಳ ಖರೀದಿ 2024-25 ನೇ ಸಾಲಿನ ಹಿಂಗಾರು ಋತುವಿನಲ್ಲಿ ಬೆಳೆದ ಜೋಳವನ್ನು ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ನೇರವಾಗಿ ಖರೀದಿಸಲಾಗುವುದು ಎಂದು ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪನಿರ್ದೇಶಕರಾದ ಸಕೀನ ಅವರು ತಿಳಿಸಿದ್ದಾರೆ. ಈ ಕುರಿತು ಬಳ್ಳಾರಿ ಜಿಲ್ಲಾ ಟಾಸ್ಕ್ ಫೋರ್ಸ್ ಸಮಿತಿ ತೀರ್ಮಾನಿಸಿದ್ದು, 2024-25 ನೇ ಸಾಲಿನ ಬೆಂಬಲ ಬೆಲೆ ಯೋಜನೆ ಕಾರ್ಯಾಚರಣೆಯನ್ನು ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾ ಮಂಡಳಿ ನಿಯಮಿತ,…

Spread positive news
Read More

ಜಮೀನಿಗೆ ಹೋಗಲು ಅಕ್ಕ-ಪಕ್ಕದವರು ದಾರಿ ಬಿಡುತ್ತಿಲ್ಲವೇ..? ಬಂತು ಹೊಸ ರೂಲ್ಸ್‌

ರೈತರಿಗೆ ತಮ್ಮ ಜಮೀನಿಗೆ ಹೋಗಲು ದಾರಿಯಿಲ್ಲದೆ ಸಾಕಷ್ಟು ಕಷ್ಟ ಪಡುತ್ತಿರುತ್ತಾರೆ. ಜಮೀನು ಹತ್ತಿರವೇ ಇರುತ್ತದೆ. ಆದರೆ ಎತ್ತಿನ ಬಂಡಿ ಹೋಗುವ ದಾರಿಯಿಲ್ಲದೆ ಬಹಳಷ್ಟು ತೊಂದರೆ ಅನುಭವಿಸುತ್ತಿರುತ್ತಾರೆ. ಅದಲ್ಲದೆ ಆದರೆ ಕೆಲವರಿಗೆ ತಮ್ಮ ಜಮೀನಿಗೆ ಹೋಗಲು ದಾರಿಯೇ ಇಲ್ಲ. ಅಕ್ಕಪಕ್ಕದ ಜಮೀನುಗಳಿಗೆ ದಾರಿ ಮಾಡಿಕೊಡದೆ ತೊಂದರೆ ಕೊಡುತ್ತಾರೆ.ಆದರೆ ಸರ್ಕಾರ ಈ ಕುರಿತು ಹೊಸ ನಿಯಮಾವಳಿಗಳನ್ನು ಹೊರಡಿಸಿದೆ. ನೀವು ಭೂಮಿಯನ್ನು ಹೊಂದಿರುವಾಗ ಜಮೀನಿನಲ್ಲಿ ಕೃಷಿ ಕಾರ್ಯಾಚರಣೆಗಳು ಎಷ್ಟು ಮುಖ್ಯವೋ, ಕ್ಷೇತ್ರಕ್ಕೆ ಪ್ರವೇಶವನ್ನು ಖಚಿತಪಡಿಸಿಕೊಳ್ಳುವುದು ಅಷ್ಟೇ ಮುಖ್ಯ. ರೈತರು ತಮ್ಮ ಕೃಷಿ…

Spread positive news
Read More

ಈ ರಾಜ್ಯದ ರೈತರಿಗೆ ಉಚಿತ ವಿದ್ಯುತ್ ನೀಡಿದ ಸರ್ಕಾರ

ಪ್ರೀಯ ರೈತರೇ ದೇಶದಲ್ಲಿ ಹಲವಾರು ರಾಜ್ಯಗಳಲ್ಲಿ ರಾಜ್ಯ ಸರ್ಕಾರ ರೈತರಿಗೆ ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ. ಅದರಲ್ಲಿ ಕೆಲವು ಯೋಜನೆಗಳು ಮಾತ್ರ ರೈತರಿಗೆ ದೊರೆಯುತ್ತಿದೆ. ಅದೇ ರೀತಿ ಈಗ ಮಹಾರಾಷ್ಟ್ರ ಸರ್ಕಾರದಿಂದ ರೈತರಿಗೆ ದೊರಕುವ ಯೋಜನೆಗಳ ಬಗ್ಗೆ ತಿಳಿಯೋಣ. ಮಹಾರಾಷ್ಟ್ರದಲ್ಲಿ ರೈತರಿಗೆ ಉಚಿತ ವಿದ್ಯುತ್ ನೀಡಲಾಗುವುದು ಎಂದು ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಹೇಳಿದ್ದಾರೆ. 2026ರ ಡಿಸೆಂಬರ್ ವೇಳೆಗೆ ರೈತರಿಗೆ ಶೇ.80 ರಷ್ಟು ರೈತರಿಗೆ ದಿನಕ್ಕೆ 12 ಗಂಟೆಗಳ ಕಾಲ ಉಚಿತ ವಿದ್ಯುತ್ ನೀಡಲಾಗುತ್ತದೆ ಎಂದು ಫಡ್ನವೀಸ್ ಹೇಳಿದ್ದಾರೆ….

Spread positive news
Read More

ಮಳೆಯಿಂದಾಗಿ 12,726 ಹೆಕ್ಟೇರ್ ಬೆಳೆ ನಾಶ! ಬೆಳೆ ಪರಿಹಾರಕ್ಕೆ ಹೀಗೆ ಮಾಡಿ

ಅಕಾಲಿಕ ಆಲಿಕಲ್ಲು ಮಳೆಯಿಂದಾಗಿ 12,726 ಹೆಕ್ಟರ್ ಬೆಳೆ ನಾಶ ಆಗಿದೆ ಎಂದು ಸಚಿವ ಶಿವರಾಜ್ ತಂಗಡಗಿ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಅಕಾಲಿಕ ಆಲಿಕಲ್ಲು ಮಳೆಯಿಂದಾಗಿ ಬಹಳ ಕಡೆ ನಷ್ಟವಾಗಿದ್ದು. 12,726 ಹೆಕ್ಟರ್ ಬೆಳೆ ನಾಶ ಆಗಿದೆ. ಎನ್‌ಡಿಆರ್‌ಎಫ್ ಮೂಲಕ ಹಣ ನೀಡಿದರೆ ರೈತರಿಗೆ ನಷ್ಟವಾಗುತ್ತದೆ. ಈ ಬಗ್ಗೆ ಸಿಎಂ ಹಾಗೂ ಮಿನಿಸ್ಟರ್ ಗಮನಕ್ಕೆ ತರಲಾಗಿದೆ. ಅಧಿಕಾರಿಗಳ ಜೊತೆ ಮಾತನಾಡಿ ಸೂಚನೆ ನೀಡಿದ್ದೇವೆ. ಬೆಳೆ ಹಾನಿ ಬಗ್ಗೆ ಪರೀಶಿಲನೆ ನಡೆಸಿ, ವರದಿ ನೀಡಲು ಹೇಳಿದ್ದೇನೆ. ರೈತರ ಹಾನಿಗೆ…

Spread positive news
Read More

ಮಾರ್ಚ್ 31 ರ ನಂತರ ಎರಡು ಕಂತುಗಳ ಗೃಹಲಕ್ಷ್ಮಿ ಹಣ ಬಿಡುಗಡೆ.

ಗೃಹಲಕ್ಷ್ಮಿ ಯೋಜನೆಯ ಹಣಕ್ಕಾಗಿ ಕಾಯುತ್ತಿರುವವರಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಅವರು ಗುಡ್‌ನ್ಯೂಸ್‌ ಕೊಟ್ಟಿದ್ದಾರೆ. ಗೃಹಲಕ್ಷ್ಮಿ ಯೋಜನೆಯ ಎರಡು ಕಂತಿನ ಹಣ ಬಾಕಿ ಉಳಿದಿದ್ದು. ಈ ಬಾಕಿ ಮೊತ್ತ ಹಣ ಬಿಡುಗಡೆಯಾಗಿ ಮಹಿಳೆಯರು ಕಾಯುತ್ತಿದ್ದಾರೆ. ಪ್ರತಿ ತಿಂಗಳೂ ಸಹ ಗೃಹಲಕ್ಷ್ಮಿ ಹಣ ಸಕಾಲದಲ್ಲಿ ಬಿಡುಗಡೆ ಆಗುತ್ತಿಲ್ಲ. ಇನ್ನೂ ಇಲ್ಲಿಯ ವರೆಗೆ 2 ತಿಂಗಳ ಗೃಹಲಕ್ಷ್ಮಿ ಯೋಜನೆ ಹಣ ಬಿಡುಗಡೆಯಾಗಿಲ್ಲ. ಇದೀಗ ಈ ಎರಡು ಕಂತಿನ ಹಣ ಬಿಡುಗಡೆ ಮಾಡುವ ಬಗ್ಗೆ ಸಚಿವೆ ಲಕ್ಷ್ಮಿ…

Spread positive news
Read More

ಕೆಂಪು ಮೆಣಸಿಗೆ ಪಿಡಿಪಿ ದರ ನಿಗದಿಪಡಿಸಿ: ಪ್ರಧಾನಿಗೆ ಸಿಎಂ ಪತ್ರ

ರಾಜ್ಯದ ಕೆಂಪು ಮೆಣಸಿನಕಾಯಿಗೆ ಕನಿಷ್ಠ ಮಧ್ಯಸ್ಥಿಕೆ ಬೆಲೆ ನಿಗದಿಗೆ ಸಿಎಂ ಒತ್ತಾಯ ಬೆಲೆ ಕುಸಿತದ ಹಿನ್ನೆಲೆಯಲ್ಲಿ ಸಂಕಷ್ಟ ಸಿಲುಕಿರುವ ಬೆಳೆಗಾರರಿಗೆ ನೆರವಾಗುವ ನಿಟ್ಟಿನಲ್ಲಿ ಎಂಐಎಸ್‍ಯಡಿ ಬೆಲೆ ಕೊರತೆ ಪಾವತಿ ಯೋಜನೆಯನ್ನು ಕರ್ನಾಟಕ ರಾಜ್ಯದ ಕೆಂಪು ಮೆಣಸಿನಕಾಯಿ ಬೆಳೆಗಾರರಿಗೂ ವಿಸ್ತರಿಸಬೇಕು ಎಂದು ಕೋರಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಪ್ರಧಾನಿ ಮೋದಿಗೆ ಪತ್ರ ಬರೆದಿದ್ದಾರೆ. ಮಂಗಳವಾರ ಪ್ರಧಾನಿ ಮೋದಿ ಮತ್ತು ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ಪತ್ರ ಬರೆದಿರುವ ಸಿದ್ದರಾಮಯ್ಯ, ರಾಜ್ಯದಲ್ಲಿ ವಿಶೇಷವಾಗಿ…

Spread positive news
Read More

ಡ್ರಿಪ್ (ಹನಿ) ನೀರಾವರಿ ಪಡೆಯಲು ರೈತರಿಂದ ಅರ್ಜಿ ಆಹ್ವಾನ.

ಪ್ರೀಯ ರೈತರೇ ಹನಿ ನೀರಾವರಿ ಯೋಜನೆ ಅರ್ಜಿ ಬಗ್ಗೆ ಚರ್ಚಿಸೋಣ. ಹರ್ ಖೇತ್ ಕೋ ಪಾನಿ” ಎಂಬ ಧ್ಯೇಯವಾಕ್ಯದೊಂದಿಗೆ 1 ನೇ ಜುಲೈ, 2015 ರಂದು ಪ್ರಾರಂಭವಾದ ಪ್ರಧಾನ ಮಂತ್ರಿ ಕೃಷಿ ಸಿಂಚಯೀ ಯೋಜನೆ (PMKSY) ಯನ್ನು ಖಚಿತವಾದ ನೀರಾವರಿಯೊಂದಿಗೆ ಕೃಷಿ ಪ್ರದೇಶವನ್ನು ವಿಸ್ತರಿಸಲು, ನೀರಿನ ವ್ಯರ್ಥವನ್ನು ಕಡಿಮೆ ಮಾಡಲು ಮತ್ತು ನೀರಿನ ಬಳಕೆಯ ದಕ್ಷತೆಯನ್ನು ಸುಧಾರಿಸಲು ಕಾರ್ಯಗತಗೊಳಿಸಲಾಗುತ್ತಿದೆ. PMKSY ಭರವಸೆಯ ನೀರಾವರಿಗಾಗಿ ಮೂಲಗಳನ್ನು ರಚಿಸುವುದರ ಮೇಲೆ ಕೇಂದ್ರೀಕರಿಸುತ್ತದೆ. ಅದೇ ರೀತಿ ಈಗ ಕಬ್ಬು ಮತ್ತು ತೊಗರಿ…

Spread positive news
Read More

ರಾಜ್ಯ ಬಜೆಟ್ ಅಲ್ಲಿ ರೈತರಿಗೆ ಸಿಕ್ಕಿದ್ದೇನು?

ಪ್ರೀಯ ರೈತರೇ ಇವತ್ತು ನಾವು ರಾಜ್ಯ ಸರ್ಕಾರದ ಬಜೆಟ್ ಹಾಗೂ ರೈತರಿಗೆ ಇದರಿಂದ ಆಗುವ ಲಾಭವೇನು? ಕೃಷಿ ಚಟುವಟಿಕೆಗಳಿಗೆ ಪ್ರೋತ್ಸಾಹ ಧನ, ಕೃಷಿ ಅಭಿವೃದ್ಧಿಗೆ ಹೊಸ ಹೊಸ ಪ್ರಯೋಗಗಳನ್ನು ನಡೆಸುವ ಬಗ್ಗೆ ಹಾಗೂ ರೈತರ ಹಿತಾಸಕ್ತಿ ಕಾಪಾಡಲು ಕೈಗೊಳ್ಳಲು ಯಾವ ಯಾವ ಕ್ರಮ ಕೈಗೊಳ್ಳಬೇಕು ಎಂದು ರಾಜ್ಯ ಬಜೆಟ್ 2025 ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ. * ರಾಜ್ಯದ ಸಣ್ಣ ಮತ್ತು ಅತಿಸಣ್ಣ ಹಿಡುವಳಿದಾರರಿಗೆ ಕೃಷಿಯನ್ನು ಸುಸ್ಥಿರ ಮತ್ತು ಲಾಭದಾಯಕವಾಗಿಸಲು. ನಮ್ಮ ಸರ್ಕಾರವು ರೈತ ಸಮೃದ್ಧಿ ಯೋಜನೆಯನ್ನು…

Spread positive news
Read More

ವಂಶಾವಳಿ ಪತ್ರ ತೆಗೆಯುವ ಸಂಪೂರ್ಣ ವಿಧಾನ ಹಾಗೂ ಮಾಹಿತಿ.

ವಂಶಾವಳಿ ಪ್ರಮಾಣ ಪತ್ರ ಎಂದರೇನು? ಅದು ಜನರಿಗೆ ಏಕೆ ಬೇಕು? ಈ ವಿಷಯದ ಕುರಿತು ನಿಮಗೆ ಸಂಪೂರ್ಣ ಮಾಹಿತಿ ಒದಗಿಸುತ್ತೇವೆ. ಬನ್ನಿ ಈ ವಿಷಯದ ಬಗ್ಗೆ ಹಂತ ಹಂತವಾಗಿ ತಿಳಿಯುತ್ತಾ ಹೋಗೋಣ. ಸರ್ಕಾರವು ಪ್ರಮಾಣ ಪತ್ರಗಳನ್ನು ಪಡೆಯಲು ಸರಳೀಕರಣಗೊಳಿಸಿ, ಕಾಗದರಹಿತ ವ್ಯವಸ್ಥೆಯನ್ನು ಜಾರಿಗೆ ತರುವುದಕ್ಕಾಗಿ ಆನ್ಲೈನ್ ವ್ಯವಸ್ಥೆ ಜಾರಿಗೊಳಿಸಿದೆ. ಆನ್ಲೈನ್ ನಲ್ಲಿಯೇ ನೆಟ್ ಬ್ಯಾಂಕಿಂಗ್ ಮೂಲಕ ಪ್ರಮಾಣ ಪತ್ರಗಳಿಗೆ ನಿಗದಿಪಡಿಸಿದ ಶುಲ್ಕ ಪಾವತಿ ನಿರ್ಧಷ್ಟ ಅವಧಿಯಲ್ಲಿ ಪ್ರಮಾಣ ಪತ್ರ ಪಡೆಯಬಹುದಾಗಿದೆ. Vanshavali ಅಥವಾ ವಂಶವೃಕ್ಷ , ವಾಸಸ್ಥಳ…

Spread positive news
Read More

ರಾಜ್ಯದೆಲ್ಲೆಡೆ ಹರಡಿದ ಹಕ್ಕಿಜ್ವರ ಇಲ್ಲಿದೆ ಮುಂಜಾಗ್ರತಾ ಕ್ರಮಗಳು.

ಪ್ರೀಯ ರೈತರೇ ಇವತ್ತು ನಾವು ರಾಜ್ಯದಲ್ಲಿ ಸುದ್ದಿಯಾಗಿರುವ ಹಕ್ಕಿ ಜ್ವರ ಬಗ್ಗೆ ಮಾಹಿತಿ ತಿಳಿಯೋಣ.ಹಕ್ಕಿ ಜ್ವರ’ದಿಂದಲೇ ಕಪ್ಪಗಲ್ಲು ಕೋಳಿ ಫಾರಂನಲ್ಲಿ ಈ ಪ್ರಮಾಣದ ಕೋಳಿಗಳು ಮೃತಪಟ್ಟಿರುವುದಾಗಿ ವರದಿಯಲ್ಲಿ ಉಲ್ಲೇಖಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಕರ್ನಾಟಕದಲ್ಲಿ ಹಕ್ಕಿ ಜ್ವರ ಕಾಣಿಸಿಕೊಂಡ ಬೆನ್ನಲ್ಲೆ ಜನರಲ್ಲಿ ಆತಂಕ ಎದುರಾಗಿದೆ. ಕೋಳಿ ಮಾಂಸ, ಮೊಟ್ಟೆ ತಿಂದ್ರೆ ಸೋಂಕು ಬರುತ್ತಾ ಎಂಬ ಪ್ರಶ್ನೆ ಕಾಡುತ್ತಿದೆ. ಕೆಲವರು ಭಯದಲ್ಲಿ ಕೋಳಿ ಮಾಂಸ, ಮೊಟ್ಟೆಯಿಂದ ದೂರ ಉಳಿದಿದ್ದಾರೆ. ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಹಕ್ಕಿ ಜ್ವರ ವರದಿಯಾಗಿದೆ….

Spread positive news
Read More