ಬಡ್ಡಿ ಇಲ್ಲದೆ ರೈತರಿಗೆ 5ಲಕ್ಷ ಸಾಲ.

ರೈತರಿಗೆ 5 ಲಕ್ಷದವರೆಗೆ ಬಡ್ಡಿರಹಿತ ಸಾಲವನ್ನು ಯಾವಾಗ ನೀಡಲು ಪ್ರಾರಂಭಿಸುತ್ತದೆ? ಈ ಯೋಜನೆ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ. ಪ್ರೀಯ ರೈತರೇ ಸರ್ಕಾರವು ಕೃಷಿ ಚಟುವಟಿಕೆಗಳಿಗೆ ಹೆಚ್ಚಿನ ಆದ್ಯತೆ ನೀಡುತ್ತಿದ್ದು ರೈತರಿಗೆ ಅಲ್ಪಾವಧಿ, ಮಧ್ಯಮಾವಧಿ, ಹಾಗೂ ದೀರ್ಘಾವಧಿ ಸಾಲ ನೀಡಲು ಜುಲೈ 1ರಿಂದ ನೀಡಲು ಮುಂದಾಗಿತ್ತು ಆದರೆ ಹೊಸ ಸರ್ಕಾರ ಅಸ್ತಿತ್ವಕ್ಕೆ ಬಂದ ಕೂಡಲೇ ಈ ಯೋಜನೆಯ ಬಗ್ಗೆ ಎಲ್ಲಿಯೂ ಧ್ವನಿ ಎತ್ತಲಿಲ್ಲ ಹೀಗಾಗಿ ಸರ್ಕಾರಕ್ಕೂ ಇದರ ಬಗ್ಗೆ ಗಮನ ಹರಿಸಲು ಸ್ವತಹ ಸಚಿವರು ಮುಂದೆ ಬರಬೇಕಾಗಿದೆ….

Spread positive news
Read More

ರೈತರೇ ಎಚ್ಚರ! ತೆಂಗಿನ ಬೆಳೆಯಲ್ಲಿ ಕೀಟದ (ಹುಳದ) ಕಾಟ.

ಕಳೆದ ಕೆಲವು ವರ್ಷಗಳಿಂದ ತೆಂಗಿಗೆ ಉತ್ತಮ ದರ ದೊರೆಯುತ್ತಿದೆ. ಆದರೆ ಕೊಬ್ಬರಿ ಬೆಲೆಯಲ್ಲಿ ಏರು ಪೇರುಗಳು ಕೆಲವೊಮ್ಮೆ ಸಂಕಷ್ಟಕ್ಕೀಡು ಮಾಡುತ್ತಿದೆ. ಎಲ್ಲದಕ್ಕೂ ತೆಂಗು ಅಗತ್ಯವಾಗಿರುವುದರಿಂದ ಅದಕ್ಕೆ ಬೇಡಿಕೆಯಂತು ಕಡಿಮೆಯಾಗುವುದಿಲ್ಲ. ಇತ್ತೀಚೆಗೆ ಎಳನೀರಿಗೆ ಬೇಡಿಕೆ ಇರುವ ಕಾರಣ ರೈತರು ಅದರತ್ತ ಹೆಚ್ಚಿನ ನಿಗಾ ವಹಿಸುತ್ತಿದ್ದಾರೆ. ಹೀಗಾಗಿ ತೆಂಗಿನ ಕಾಯಿ ಮತ್ತು ಕೊಬ್ಬರಿ ಬಗ್ಗೆ ತಲೆಕೆಡಿಸಿಕೊಳ್ಳದೆ ಎಳನೀರನ್ನು ಪಡೆಯುವಂತಹ ತಳಿಗಳನ್ನು ಬೆಳೆಯುತ್ತಿರುವುದು ಕಂಡು ಬರುತ್ತಿದೆ. ಎಳನೀರಿಗೆ ಎಲ್ಲ ಕಾಲದಲ್ಲಿಯೂ ಬೇಡಿಕೆ ಇರುವ ಕಾರಣ ಅದರಲ್ಲೂ ಬೇಸಿಗೆಯಲ್ಲಿ ಹೆಚ್ಚಿನ ಬೇಡಿಕೆಯಿದ್ದು, ಹೊರ…

Spread positive news
Read More

ನಿಗಮದಿಂದ 6 ಯೋಜನೆಗಳಿಗೆ ಅರ್ಜಿ ಆಹ್ವಾನ. ಯೋಜನೆಗಳ ಪಟ್ಟಿ ಇಲ್ಲಿದೆ.

ರೈತರೇ ಇವತ್ತು ನಾವು ಒಂದು ಮುಖ್ಯವಾದ ವಿಷಯದ ಬಗ್ಗೆ ಚರ್ಚಿಸೋಣ ಬನ್ನಿ. ರಾಜ್ಯದಲ್ಲಿ ಹಲವಾರು ನಿಗಮಗಳು ಹಲವಾರು ಯೋಜನೆಗಳನ್ನು ಹಮ್ಮಿಕೊಂಡಿದೆ. ಅದೇ ರೀತಿ ರೈತರಿಗೆ ನೆರವಾಗುವ ನಿಟ್ಟಿನಲ್ಲಿ ಈಗ ಡಾ.ಬಿ.ಆರ್. ಅಂಬೇಡ್ಕರ್ ಅಭಿವೃದ್ದಿ ನಿಗಮ ನಿಯಮಿತ ಕರ್ನಾಟಕ ಸರ್ಕಾರವು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ಆರ್ಥಿಕ ಮತ್ತು ಸಾಮಾಜಿಕ ಅಭಿವೃದ್ದಿಗಾಗಿ “ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ಅಭವೃದ್ದಿ ನಿಗಮ ” ವನ್ನು 1975ನೇ ಸಾಲಿನಲ್ಲಿ ಸ್ಥಾಪಿಸಲಾಯಿತು.ನಿಗಮವು 1956ರ ಕಂಪನಿ ಕಾಯ್ದೆಯಡಿ ಸ್ಥಾಪಿಸಲಾಯಿತು.ನಂತರ ನಿಗಮವನ್ನು…

Spread positive news
Read More

ಸರ್ಕಾರದಿಂದ ಮಹಿಳೆಯರಿಗೆ ದೊರೆಯುವ ಯೋಜನೆಗಳ ಪಟ್ಟಿ.

ಪ್ರೀಯ ರೈತರೇ ಇವತ್ತು ಒಂದು ಮಹಿಳೆಯರಿಗೆ ಇರುವ ಸರ್ಕಾರದ ಯೋಜನೆ ಪಟ್ಟಿ ಬಗ್ಗೆ ಮಾಹಿತಿ ತಿಳಿಯೋಣ. ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದಿಂದ ಅನುಷ್ಠಾನಗೊಳಿಸುತ್ತಿರುವ 05 ಯೋಜನೆ (ಉದ್ಯೋಗಿನಿ ಯೋಜನೆ, ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಯೋಜನೆ, ಚೇತನ ಯೋಜನೆ, ಧನಶ್ರೀ ಯೋಜನೆ ಮತ್ತು ಮಾಜಿ ದೇವದಾಸಿ ಮಹಿಳೆಯರ ಪುನರ್ವಸತಿ ಯೋಜನೆ) ಗಳನ್ನು ಸೇವಾ ಸಿಂಧು ಪೋರ್ಟಲ್ ಆನ್‌ಲೈನ್ (Live) ನಲ್ಲಿ ಅಳವಡಿಸಲಾಗಿದ್ದು ಈ ಕುರಿತು ಅರ್ಜಿದಾರರಿಂದ ಅರ್ಜಿಗಳನ್ನು ಸಲ್ಲಿಸಲು ಕೊನೆಯ ದಿನಾಂಕ:-21-09-2024 ರಂದು ದಿನ ಪತ್ರಿಕೆಗಳಲ್ಲಿ ಜಾಹಿರಾತನ್ನು…

Spread positive news
Read More

ಇವತ್ತಿನಿಂದ ಧಾರವಾಡ ಕೃಷಿ ಮೇಳ 2024 ಆರಂಭ.

ಪ್ರಿಯ ಓದುಗರೇ ಇವತ್ತಿನಿಂದ ಧಾರವಾಡ ಕೃಷಿ ಮೇಳ ಆರಂಭ. 2024-25ನೇ ಸಾಲಿನ ಕೃಷಿ ಮೇಳವನ್ನು ಧಾರವಾಡದ ಕೃಷಿ ವಿಶ್ವವಿದ್ಯಾಲಯದಲ್ಲಿ ಸೆಪ್ಟೆಂಬರ್ 21-24ರವರೆಗೆ ಆಯೋಜಿಸಲಾಗಿದೆ. ಶಿರ್ಷಿಕೆ ಹವಾಮಾನ ವೈಪರೀತ್ಯ ನಿರ್ವಹಣೆ ಕೃಷಿ ತಾಂತ್ರಿಕತೆ (Climate Change Management Agricultural Technology)ಎಂಬ ಮುನ್ನುಡಿಯಲ್ಲಿ ಈ ವರ್ಷ ಕೃಷಿ ಮೇಳ ಆಯೋಜಿಸಲಾಗಿದೆ. ಧಾರವಾಡ ಕೃಷಿ ವಿಶ್ವವಿದ್ಯಾಲಯದ ಕೃಷಿ ಮೇಳ ಇವತ್ತಿನಿಂದ ಅಂದರೆ, ಸೆಪ್ಟೆಂಬರ್‌ 21ರಿಂದ ಪ್ರಾರಂಭವಾಗಲಿದ್ದು, ಮೂರು ದಿನ ಈ ಕೃಷಿ ಮೇಳ ನಡೆಯಲಿದೆ. ಸೆಪ್ಟೆಂಬರ್‌ 21ರಿಂದ ಸೆಪ್ಟೆಂಬರ್‌ 24ರ ವರೆಗೆ…

Spread positive news
Read More

ಮೋಜನಿ (ಹದ್ದುಬಸ್ತು) ಅರ್ಜಿ ನಿಮ್ಮ ಫೋನಿನಲ್ಲಿ ಪಡೆಯುವ ಡೈರೆಕ್ಟ್ ಲಿಂಕ್.

ರೈತ ಮಿತ್ರರೇ ಇವತ್ತು ನಾವು ಒಂದು ಹೊಸ ವಿಷಯದ ಬಗ್ಗೆ ಚರ್ಚಿಸೋಣ. ರೈತರೇ ಈಗಾಗಲೇ ನಾವು ನೋಡಿದಂತೆ ತಂತ್ರಜ್ಞಾನ ಬಹಳ ಮುಂದೆ ಇದೆ. ಹಾಗೂ ಸರ್ಕಾರವು ಸಹ ರೈತರಿಗೆ ಅಲೆದಾಟ ಹಾಗೂ ರೈತರಿಗೆ ಹಲವಾರು ತಂತ್ರಜ್ಞಾನಗಳ ಮೂಲಕ ಹೊಸ ಹೊಸ ಭರವಸೆ ನೀಡುತ್ತಾ ಬಂದಿದೆ. ಅದೇ ರೀತಿ ಈಗ ನಾವು ಒಂದು ಮುಖ್ಯವಾದ ವಿಷಯದ ಬಗ್ಗೆ ನೋಡೋಣ ಏನೆಂದರೆ ರೈತರು ತಮ್ಮ ಜಮೀನಿನ ಮೋಜನಿ (ಹದ್ದುಬಸ್ತು) ಪಡೆಯಲು ಅರ್ಜಿ ಹಾಕಿರುತ್ತಾರೆ. ಆದರೆ ರೈತರಿಗೆ ಈ ಅರ್ಜಿ ಸಲ್ಲಿಸಿದ…

Spread positive news
Read More

ಗೂಡ್ಸ್ ಟ್ಯಾಕ್ಸಿ ವಾಹನ ಪಡೆಯಲು ಅರ್ಜಿ ಕರೆದಿದ್ದಾರೆ.

ಪ್ರೀಯ ರೈತರೇ ಇವತ್ತು ಒಂದು ಮುಖ್ಯವಾದ ವಿಷಯದ ಬಗ್ಗೆ ಚರ್ಚಿಸೋಣ. ಸ್ವಾವಲಂಬಿ ಸಾರಥಿ ಯೋಜನೆಯಡಿ ನಾಲ್ಕು ಚಕ್ರಗಳ ವಾಹನವನ್ನು (ಟ್ಯಾಕ್ಸಿ, ಟಾಟಾ ಎಸಿ, ಗೂಡ್ಸ್ ವಾಹನ ಇತ್ಯಾದಿ ನಾಲ್ಕು ಚಕ್ರಗಳ ವಾಹನ) ಖರೀದಿಸಲು ಬ್ಯಾಂಕ್ ಮಂಜೂರು ಮಾಡಿದ ಸಾಲದ ಶೇ. 50ರಷ್ಟು ಅಥವಾ ಗರಿಷ್ಠ ರೂ. 3.00 ಲಕ್ಷಗಳ ವರೆಗೆ ಇವುಗಳಲ್ಲಿ ಯಾವುದು ಕಡಿಮೆಯೋ ಅಷ್ಟು ಸಹಾಯಧನವನ್ನು ನಿಗಮದಿಂದ ಮಂಜೂರು ಮಾಡುವುದು. ಸರಕು ವಾಹನ / ಟ್ಯಾಕ್ಸಿ (ಹಳದಿ ಬೋರ್ಡ್) ಖರೀದಿಸುವ ಉದ್ದೇಶಕ್ಕೆ. ಸಾಲದ ಮೊತ್ತದ ಶೇ.75ರಷ್ಟು…

Spread positive news
Read More

ಕೃಷಿ ಸಿಂಚಾಯಿ ಯೋಜನೆ ಅಡಿಯಲ್ಲಿ 95% ಸಹಾಯಧನ..

ಆತ್ಮೀಯ ರೈತ ಬಾಂಧವರೇ, ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿಲ್ಲಿ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ ನೀಡಲಾಗಿದೆ ಎಂದು ಧಾರವಾಡ ಕೃಷಿ ಇಲಾಖೆ ಅಧಿಕಾರಿಗಳು ಪ್ರಕಟಿಸಿದ್ದಾರೆ. 2024-25 ನೇ ಸಾಲಿನ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಹನಿ ನೀರಾವರಿ ಯೋಜನೆಯನ್ನು ಅನುಷಾನಗೊಳಿಸುತ್ತಿದ್ದು ಆಸಕ್ತ ತೋಟಗಾರಿಕೆ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಸಾಮಾನ್ಯ ರೈತರಿಗೆ 5 ಎಕರೆ ವರೆಗೆ ಶೇಕಡಾ 90 ರಷ್ಟು ಹಾಗೂ 5 ಎಕರೆ ಮೇಲ್ಪಟ್ಟ ಜಮೀನಿಗೆ ಶೇಕಡಾ 45…

Spread positive news
Read More

ಆಧಾರ್ ಕಾರ್ಡ್(Adhar card) ಅಪ್ಡೇಟ್ ಆಗದಿದ್ದರೆ ಆಸ್ತಿ ನೊಂದಣಿಗೆ ತೊಂದರೆ.

ಆಸ್ತಿ ನೋಂದಣಿಗೆ(property registration)ಪ್ಲಾನ್ ಮಾಡುತ್ತಿದ್ದೀರಾ? ಹಾಗಿದ್ದರೆ ಕೂಡಲೇ ನಿಮ್ಮ ಆಧಾರ್ ಕಾರ್ಡ್ ಅಪ್‌ಡೇಟ್ ಆಗಿದೆಯಾ ಎಂಬುದನ್ನು ಪರೀಕ್ಷಿಸಿಕೊಳ್ಳಿ. ಇಲ್ಲವಾದರೆ ಲಕ್ಷಾಂತರ ರೂ. ಮುದ್ರಾಂಕ ಶುಲ್ಕ ಪಾವತಿಸಿದರೂ ಆಸ್ತಿ ನೋಂದಣಿ ಮಾಡಿಸುವುದು ಅಸಾಧ್ಯ. ಬಂದ ದಾರಿಗೆ ಸುಂಕವಿಲ್ಲದಂತೆ ಮನೆಯ ಹಾದಿ ಹಿಡಿಯಬೇಕಾಗುತ್ತದೆ. ಈಗಾಗಲೇ ಆಧಾರ್ ಕಾರ್ಡ್ ಮಾಡಿಸಿ 10 ವರ್ಷ ಆಗಿದ್ದರೆ ಅಪ್ಡೇಟ್ ಮಾಡಿಸಲೇಬೇಕು. ಜಮೀನು ಮಾಲೀಕತ್ವದ ಸುರಕ್ಷತೆ, ವಂಚನೆ ತಡೆಯಲು ಸರ್ಕಾರ ಆಸ್ತಿ ನೋಂದಣಿಗೆ ಆಧಾರ್ ಕಡ್ಡಾಯಗೊಳಿಸಿದೆ. ವ್ಯಾಪ್ತಿಯೊಳಗೆ ರಿಜಿಸ್ಟೇಷನ್ ಎನಿವೇರ್ ವ್ಯವಸ್ಥೆ ಜಾರಿಗೆ ತಂದಿದೆ. ಆದರೆ…

Spread positive news
Read More

(Pm kisan) ಪಿಎಂ ಕಿಸಾನ್ ಹಣ ಹೊಸ ಅಪ್ಡೇಟ್.

ರೈತರೇ ಪಿಎಂ ಕಿಸಾನ್ ಹೊಸ ಅಪ್ಡೇಟ್ ಬಂದಿದೆ. ರೈತರು ಈ ಕೆಲಸ ಮಾಡದಿದ್ದರೆ ಹಣ ಬರಲ್ಲ. ಕೇಂದ್ರ ಸರ್ಕಾರವು ಪಿ. ಎಂ. ಕಿಸಾನ್ ಯೋಜನೆಯಲ್ಲಿ ಫಲಾನುಭವಿಗಳ ಅರ್ಜಿಗೆ ಸಂಬಂಧಿಸಿದ ಮಾಹಿತಿಯನ್ನು ಸುಲಭವಾಗಿ ರೈತರಿಗೆ ತಲುಪಿಸಲು ಅನುಕೂಲವಾಗಲು ಇನ್ನು ಮುಂದೆ ಭಾರತ ಸರ್ಕಾರದ ಪಿ.ಎಂ. ಕಿಸಾನ್ ಪೋರ್ಟಲ್ ನಲ್ಲಿ ನೋಂದಣಿಯಾಗುವ ಫಲಾನುಭವಿಗಳಿಗೆ Unique Mobile number ಹೊಂದಿರುವುದನ್ನು ಕಡ್ಡಾಯಗೊಳಿಸಲಾಗಿರುತ್ತದೆ. ಪ್ರಸ್ತುತ ಪಿ. ಎಂ. ಕಿಸಾನ್ ದತ್ತಾಂಶದಲ್ಲಿ ಈಗಾಗಲೇ ಹಲವಾರು ಫಲಾನುಭವಿಗಳು ನಕಲಿ ಹಾಗೂ ಅಮಾನ್ಯ Mobile Number ಉಪಯೋಗಿಸಿಕೊಂಡು…

Spread positive news
Read More