ಕೃಷಿ ಹೊಂಡ ಯೋಜನೆ ಮತ್ತೆ ಆರಂಭ. ಅರ್ಜಿ ಸಲ್ಲಿಸಲು ಕೊನೆಯ ಅವಕಾಶ.
ಕರ್ನಾಟಕ ರಾಜ್ಯ ಕಾಂಗ್ರೆಸ್ ಸರ್ಕಾರ 1000 ದಿನ ಪೂರೈಸುತ್ತಿರುವ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರೈತರಿಗೆ ಸಂಬಂಧಿಸಿದ ಸ್ಥಗಿತಗೊಂಡಿದ್ದ ‘ಕೃಷಿಭಾಗ್ಯ ಯೋಜನೆ’ಗೆ ಮರು ಚಾಲನೆ ನೀಡುವುದಾಗಿ ಘೋಷಿಸಿದ್ದಾರೆ. ಇದು ಸೇರಿದಂತೆ ಸರ್ಕಾರದ ಸಾಧನೆಗಳ ಕುರಿತು ಮಹತ್ವದ ಭರವಸೆ ಹಾಗೂ ಸಾಧನೆಗಳನ್ನು ವಿವರಿಸಿದ್ದಾರೆ. ಕರ್ನಾಟಕ ಸರ್ಕಾರವು ಮಳೆಯಾಶ್ರಿತ ಒಣಭೂಮಿ ರೈತರಿಗಾಗಿ ಜಾರಿಗೊಳಿಸಿರುವ ಪ್ರಮುಖ ಯೋಜನೆ ‘ಕೃಷಿ ಭಾಗ್ಯ’. ಈ ಯೋಜನೆಯು ಕೃಷಿ ಹೊಂಡ ನಿರ್ಮಾಣ, ಪಾಲಿಥೀನ್ ಹೊದಿಕೆ, ಮತ್ತು ಸೂಕ್ಷ್ಮ ನೀರಾವರಿ ಘಟಕಗಳ ಅಳವಡಿಕೆಗೆ ಸಹಾಯಧನ ನೀಡುತ್ತದೆ. ಸಾಮಾನ್ಯ…

